• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಿಜೆಪಿಗೆ ಬಹುಮತ ಇದ್ದರೂ SDPI ಅಧ್ಯಕ್ಷರಾದದ್ದು ಹೇಗೆ?

Tulunadu News Posted On August 12, 2023
0


0
Shares
  • Share On Facebook
  • Tweet It

ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಕೊನೆಗೆ ಎಸ್ ಡಿಪಿಐ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಂದು ಗ್ರಾಮ ಪಂಚಾಯತ್ ನಲ್ಲಿ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸದಸ್ಯರು ಬಹುಮತದಲ್ಲಿ ಇರುವಾಗ ಅಲ್ಲಿ ಎಸ್ ಡಿಪಿಐ ಬೆಂಬಲಿತ ವ್ಯಕ್ತಿ ಹೇಗೆ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎನ್ನುವ ಪ್ರಶ್ನೆ ಬರುತ್ತದೆ. ವಿಷಯ ಸಿಂಪಲ್. ಏನೆಂದರೆ ಗ್ರಾಮ ಪಂಚಾಯತ್ ನಲ್ಲಿ ಯಾರೂ ಕೂಡ ಪಕ್ಷದ ಚಿನ್ನೆಯಡಿ ಸ್ಪರ್ಧೆ ಮಾಡುವುದಿಲ್ಲ. ಇಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಇಂತವರಿಗೆನೆ ಮತ ಹಾಕಬೇಕು ಎಂದು ಯಾವ ಪಕ್ಷ ಕೂಡ ಯಾರಿಗೂ ನಿರ್ದೇಶನ ಮಾಡುವಂತಿಲ್ಲ. ಗ್ರಾಮ ಪಂಚಾಯತ್ ಮಟ್ಟದಲ್ಲಿ ರಾಜಕೀಯ ಇರಬಾರದು ಎಂದು ಮಹಾತ್ಮ ಗಾಂಧಿಯವರು ಆವತ್ತು ಕಂಡ ಕನಸು ಇವತ್ತಿಗೂ ನಡೆಯುತ್ತಿದೆ.

ಗ್ರಾಮ ಪಂಚಾಯತ್ ಸದಸ್ಯರ ತಪ್ಪಿಗೆ ಬಿಜೆಪಿ ಪಕ್ಷ ಹೊಣೆನಾ?

ಈಗ ತಲಪಾಡಿ ವಿಷಯಕ್ಕೆ ಬರೋಣ. ತಲಪಾಡಿ ಗ್ರಾಮ ಪಂಚಾಯತ್ ನಲ್ಲಿ ಒಟ್ಟು ಸಂಖ್ಯಾಬಲ 24. ಅದರಲ್ಲಿ ಬಿಜೆಪಿ ಬೆಂಬಲಿತರು 13. ಎಸ್ ಡಿಪಿಐ ಬೆಂಬಲಿತರು 10. ಒಬ್ಬರು ಕಾಂಗ್ರೆಸ್ ಬೆಂಬಲಿತರು ಇದ್ದಾರೆ. ಬಿಜೆಪಿ ಪಕ್ಷದ ತೀರ್ಮಾನದಂತೆ ಸತ್ಯರಾಜ್ ಎಂಬವರನ್ನು ಅಧ್ಯಕ್ಷರಾಗಿ ಸೂಚಿಸಲಾಗಿತ್ತು. ಬಹುಮತ ಇರುವುದರಿಂದ ಅವರೇ ಆಯ್ಕೆಯಾಗುತ್ತಾರೆ ಎಂದು ಬಿಜೆಪಿ ಮುಖಂಡರ ಅನಿಸಿಕೆಯಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಎಸ್ ಡಿಪಿಐ ನ ಆಸೆ, ಆಮಿಷವೋ, ಒತ್ತಡವೋ ಬಲಿಯಾಗಿ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್ ಫಯಾಜ್ ಮತ್ತು ಮಹಮ್ಮದ್ ಅವರು ಅಡ್ಡ ಮತದಾನ ಮಾಡಿದ ಪರಿಣಾಮ ಎಸ್ ಡಿಪಿಐ ಅಧ್ಯಕ್ಷರಾಗಿ ಇಸ್ಮಾಯಿಲ್ ಅವರಿಗೂ, ಬಿಜೆಪಿ ಬೆಂಬಲಿತ ಅಭ್ಯರ್ಥಿ ಸತ್ಯರಾಜ್ ಅವರಿಗೂ ಸಮಬಲದ ಮತಗಳು ಬಿದ್ದಿವೆ.
ಇಲ್ಲಿ ವಿಷಯ ಏನೆಂದರೆ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದರೂ ಮಹಮ್ಮದ್ ಫಯಾಜ್ ಹಾಗೂ ಮಹಮ್ಮದ್ ಅವರು ಎಸ್ ಡಿಪಿಐ ಅಧ್ಯಕ್ಷ ಅಭ್ಯರ್ಥಿಗೆ ಮತ ಹಾಕಿದ ಕಾರಣ ಅಲ್ಲಿ ಎಸ್ ಡಿಪಿಐ ಮತ್ತು ಬಿಜೆಪಿ ಸಮಬಲ ಸಾಧಿಸಿದೆ. ಯಾಕೆಂದರೆ ಎಸ್ ಡಿಪಿಐ ಬೆಂಬಲಿತ ಸದಸ್ಯೆ ಹಬೀಬಾ ಹಾಗೀ ಕಾಂಗ್ರೆಸ್ ಬೆಂಬಲಿತ ಸದಸ್ಯ ವೈಭವ್ ಶೆಟ್ಟಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿರಲಿಲ್ಲ. ಕೊನೆಗೆ ಚುನಾವಣಾ ಅಧಿಕಾರಿಯವರು ಅದೃಷ್ಟದ ಚೀಟಿಯ ಮೂಲಕ ಎಸ್ ಡಿಪಿಐ ಅಭ್ಯರ್ಥಿ ಇಸ್ಮಾಯಿಲ್ ಅವರನ್ನು ಅಧ್ಯಕ್ಷರೆಂದು ಘೋಷಿಸಿದರು.
ಇದರೊಂದಿಗೆ ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪವತಿ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮೇಲ್ನೋಟಕ್ಕೆ ಎಸ್ ಡಿಪಿಐ ನಿಂದ ಅಧ್ಯಕ್ಷರು, ಬಿಜೆಪಿಯಿಂದ ಉಪಾಧ್ಯಕ್ಷರು ಆಗಿರುವುದರಿಂದ ಅದು ಒಳಹೊಂದಾಣಿಕೆ ಎಂದು ಅನಿಸಿ ಅದನ್ನು ರಾಷ್ಟ್ರೀಯ ವಾಹಿನಿಗಳು ಕೂಡ ಸುದ್ದಿ ಮಾಡಿವೆ. ಆದರೆ ಯಾವುದೇ ಪಕ್ಷದ ಬೆಂಬಲದಿಂದ ಉಪಾಧ್ಯಕ್ಷರ ಆಯ್ಕೆ ನಡೆದಿಲ್ಲ. ಉಪಾಧ್ಯಕ್ಷರ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಬಂದ ಹಿನ್ನಲೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ವಿನ: ಯಾವುದೇ ಪಕ್ಷದ ಬೆಂಬಲದಿಂದ ಅಲ್ಲ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search