• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಪ್ರಕರಣಗಳು ಕಾಲಮಿತಿಯೊಳಗೆ ಇತ್ಯರ್ಥವಾಗಲಿದೆ!

Tulunadu News Posted On August 12, 2023
0


0
Shares
  • Share On Facebook
  • Tweet It

ಇಂಡಿಯನ್ ಪಿನಲ್ ಕೋಡ್ ಇನ್ನು ಮುಂದೆ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಮತ್ತು ಕ್ರಿಮಿನಲ್ ಪ್ರೋಸಿಜರ್ ಕೋಡ್ ಇನ್ನು ಮುಂದೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಎವಿಡೆನ್ಸ್ ಆಕ್ಟ್ ಇನ್ನು ಮುಂದೆ ಭಾರತೀಯ ಸಾಕ್ಷ್ಯ ಬಿಲ್ 2023 ಎಂದು ಹೆಸರು ಬದಲಾಗುವುದರೊಂದಿಗೆ ಕೆಲವು ಅಗತ್ಯ ಮಾರ್ಪಾಡುಗಳನ್ನು ಮಾಡಲು ಕೇಂದ್ರ ಸರಕಾರ ಮುಂದಾಗಿದೆ.
ಇನ್ನು ಮುಂದೆ ಪ್ರತಿ ಪ್ರಕರಣಗಳು ಇಂತಿಷ್ಟೇ ಸಮಯದ ಒಳಗೆ ಇತ್ಯರ್ಥವಾಗಬೇಕು ಎನ್ನುವ ನಿಯಮವನ್ನು ಹೊಸ ಕಾನೂನಿನಲ್ಲಿ ತರಲು ಇದರಲ್ಲಿ ಚಿಂತನೆ ನಡೆದಿದೆ. ಇಲ್ಲಿ ತನಕ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಬ್ರಿಟಿಷರು ಅಂದು ಬಿಟ್ಟು ಹೋಗಿದ್ದ ಮೆಕಾಲೆ ಕಾನೂನುಗಳನ್ನೇ ಪಾಲಿಸಿಕೊಂಡು ಬರಲಾಗುತ್ತಿತ್ತು. ಇದರಿಂದ ಒಂದೊಂದು ಪ್ರಕರಣ ಕೂಡ ಹತ್ತಾರು ವರ್ಷಗಳ ತನಕ ಇತ್ಯರ್ಥವಾಗದೇ ವಾದಿ, ಪ್ರತಿವಾದಿ, ನ್ಯಾಯಾಲಯ ಎಲ್ಲರ ಸಮಯ ವ್ಯರ್ಥವಾಗುತ್ತಿತ್ತು. ಇತ್ತ ಯಾರು ನ್ಯಾಯಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಏರಿದರೋ ಅವರಿಗೆ ನ್ಯಾಯ ಮರೀಚಿಕೆ ಅನಿಸುತ್ತಿತ್ತು. ಯಾವುದೇ ಪ್ರಕರಣ ಮುಗಿಯಲು ಸಮಯದ ಚೌಕಟ್ಟು ಇರಲಿಲ್ಲ. ಇಂದು ಮುಗಿಯುತ್ತೆ, ನಾಳೆ ಮುಗಿಯುತ್ತೆ ಎಂದುಕೊಂಡವರು ಕೊನೆಗೆ ಎಂದು ಮುಗಿಯುತ್ತೆ ಎನ್ನುವ ಯಕ್ಷ ಪ್ರಶ್ನೆಯನ್ನು ತಮ್ಮೊಳಗೆ ಕೇಳಬೇಕಾಗುತ್ತಿತ್ತು. ಕೊನೆಗೂ ಈಗ ಕೇಂದ್ರ ಸರಕಾರ ಮಂಡಿಸಿರುವ ಕರಡು ಮಸೂದೆಯಲ್ಲಿ ಪ್ರಕರಣಗಳು ನಿರ್ದಿಷ್ಟ
ಅವಧಿಯೊಳಗೆ ಮುಗಿಸುವ ಕಾನೂನನ್ನು ಕೂಡ ಅಳವಡಿಸಲಾಗಿದೆ. ಇದರಿಂದ ನ್ಯಾಯ ಇಂತಿಷ್ಟೇ ಕಾಲದೊಳಗೆ ಸಿಗುತ್ತದೆ ಎನ್ನುವ ಆಶಾವಾದ ಎಲ್ಲರಲ್ಲಿ ಮೊಳಗಲಿದೆ. ಆದರೆ ಯಾವ ರೀತಿಯ ಪ್ರಕರಣ ಎಷ್ಟು ಕಾಲದೊಳಗೆ ಮುಗಿಸಬೇಕು ಎನ್ನುವ ಕಾಲಮಿತಿಯ ಬಗ್ಗೆ ಸ್ಥಾಯಿ ಸಮಿತಿ ಚರ್ಚೆ ನಡೆಸಿ ನಂತರ ಕೊನೆಗೆ ಅಂತಿಮ ನಿರ್ಧಾರಕ್ಕೆ ಬರಲಿದೆ. ಅದಕ್ಕೆ ಕಾನೂನು ತಜ್ಞರ ಸಲಹೆ ಕೂಡ ಪಡೆಯುವ ಅವಶ್ಯಕತೆ ಇದೆ. ಇಲ್ಲಿಯ ತನಕ ಎಷ್ಟೋ ಪ್ರಕರಣಗಳ ತೀರ್ಪು ಹೊರಗೆ ಬರುವಾಗ ನ್ಯಾಯವನ್ನು ಅಪೇಕ್ಷಿಸುತ್ತಿದ್ದವರೇ ವಯೋಸಹಜ ಕಾರಣದಿಂದ ಈ ಪ್ರಪಂಚದಲ್ಲಿ ಬದುಕಿ ಉಳಿಯುತ್ತಿರಲಿಲ್ಲ. ಹೊಸ ಕಾನೂನು ಜಾರಿಗೆ ಬಂದ ನಂತರ ಪರಿಸ್ಥಿತಿ ಬದಲಾಗಲಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search