• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇನ್ನು ಪ್ರಕರಣಗಳು ಕಾಲಮಿತಿಯೊಳಗೆ ಇತ್ಯರ್ಥವಾಗಲಿದೆ!

Tulunadu News Posted On August 12, 2023
0


0
Shares
  • Share On Facebook
  • Tweet It

ಇಂಡಿಯನ್ ಪಿನಲ್ ಕೋಡ್ ಇನ್ನು ಮುಂದೆ ಭಾರತೀಯ ನ್ಯಾಯ ಸಂಹಿತೆ ಮಸೂದೆ 2023 ಮತ್ತು ಕ್ರಿಮಿನಲ್ ಪ್ರೋಸಿಜರ್ ಕೋಡ್ ಇನ್ನು ಮುಂದೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಎವಿಡೆನ್ಸ್ ಆಕ್ಟ್ ಇನ್ನು ಮುಂದೆ ಭಾರತೀಯ ಸಾಕ್ಷ್ಯ ಬಿಲ್ 2023 ಎಂದು ಹೆಸರು ಬದಲಾಗುವುದರೊಂದಿಗೆ ಕೆಲವು ಅಗತ್ಯ ಮಾರ್ಪಾಡುಗಳನ್ನು ಮಾಡಲು ಕೇಂದ್ರ ಸರಕಾರ ಮುಂದಾಗಿದೆ.
ಇನ್ನು ಮುಂದೆ ಪ್ರತಿ ಪ್ರಕರಣಗಳು ಇಂತಿಷ್ಟೇ ಸಮಯದ ಒಳಗೆ ಇತ್ಯರ್ಥವಾಗಬೇಕು ಎನ್ನುವ ನಿಯಮವನ್ನು ಹೊಸ ಕಾನೂನಿನಲ್ಲಿ ತರಲು ಇದರಲ್ಲಿ ಚಿಂತನೆ ನಡೆದಿದೆ. ಇಲ್ಲಿ ತನಕ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಬ್ರಿಟಿಷರು ಅಂದು ಬಿಟ್ಟು ಹೋಗಿದ್ದ ಮೆಕಾಲೆ ಕಾನೂನುಗಳನ್ನೇ ಪಾಲಿಸಿಕೊಂಡು ಬರಲಾಗುತ್ತಿತ್ತು. ಇದರಿಂದ ಒಂದೊಂದು ಪ್ರಕರಣ ಕೂಡ ಹತ್ತಾರು ವರ್ಷಗಳ ತನಕ ಇತ್ಯರ್ಥವಾಗದೇ ವಾದಿ, ಪ್ರತಿವಾದಿ, ನ್ಯಾಯಾಲಯ ಎಲ್ಲರ ಸಮಯ ವ್ಯರ್ಥವಾಗುತ್ತಿತ್ತು. ಇತ್ತ ಯಾರು ನ್ಯಾಯಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಏರಿದರೋ ಅವರಿಗೆ ನ್ಯಾಯ ಮರೀಚಿಕೆ ಅನಿಸುತ್ತಿತ್ತು. ಯಾವುದೇ ಪ್ರಕರಣ ಮುಗಿಯಲು ಸಮಯದ ಚೌಕಟ್ಟು ಇರಲಿಲ್ಲ. ಇಂದು ಮುಗಿಯುತ್ತೆ, ನಾಳೆ ಮುಗಿಯುತ್ತೆ ಎಂದುಕೊಂಡವರು ಕೊನೆಗೆ ಎಂದು ಮುಗಿಯುತ್ತೆ ಎನ್ನುವ ಯಕ್ಷ ಪ್ರಶ್ನೆಯನ್ನು ತಮ್ಮೊಳಗೆ ಕೇಳಬೇಕಾಗುತ್ತಿತ್ತು. ಕೊನೆಗೂ ಈಗ ಕೇಂದ್ರ ಸರಕಾರ ಮಂಡಿಸಿರುವ ಕರಡು ಮಸೂದೆಯಲ್ಲಿ ಪ್ರಕರಣಗಳು ನಿರ್ದಿಷ್ಟ
ಅವಧಿಯೊಳಗೆ ಮುಗಿಸುವ ಕಾನೂನನ್ನು ಕೂಡ ಅಳವಡಿಸಲಾಗಿದೆ. ಇದರಿಂದ ನ್ಯಾಯ ಇಂತಿಷ್ಟೇ ಕಾಲದೊಳಗೆ ಸಿಗುತ್ತದೆ ಎನ್ನುವ ಆಶಾವಾದ ಎಲ್ಲರಲ್ಲಿ ಮೊಳಗಲಿದೆ. ಆದರೆ ಯಾವ ರೀತಿಯ ಪ್ರಕರಣ ಎಷ್ಟು ಕಾಲದೊಳಗೆ ಮುಗಿಸಬೇಕು ಎನ್ನುವ ಕಾಲಮಿತಿಯ ಬಗ್ಗೆ ಸ್ಥಾಯಿ ಸಮಿತಿ ಚರ್ಚೆ ನಡೆಸಿ ನಂತರ ಕೊನೆಗೆ ಅಂತಿಮ ನಿರ್ಧಾರಕ್ಕೆ ಬರಲಿದೆ. ಅದಕ್ಕೆ ಕಾನೂನು ತಜ್ಞರ ಸಲಹೆ ಕೂಡ ಪಡೆಯುವ ಅವಶ್ಯಕತೆ ಇದೆ. ಇಲ್ಲಿಯ ತನಕ ಎಷ್ಟೋ ಪ್ರಕರಣಗಳ ತೀರ್ಪು ಹೊರಗೆ ಬರುವಾಗ ನ್ಯಾಯವನ್ನು ಅಪೇಕ್ಷಿಸುತ್ತಿದ್ದವರೇ ವಯೋಸಹಜ ಕಾರಣದಿಂದ ಈ ಪ್ರಪಂಚದಲ್ಲಿ ಬದುಕಿ ಉಳಿಯುತ್ತಿರಲಿಲ್ಲ. ಹೊಸ ಕಾನೂನು ಜಾರಿಗೆ ಬಂದ ನಂತರ ಪರಿಸ್ಥಿತಿ ಬದಲಾಗಲಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search