• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ವಿರುದ್ಧ ಪ್ರಿಯಾಂಕಾ ಗೆಲುವು ನಿಶ್ಚಿತ – ಸಂಜಯ್ ರಾವತ್

Tulunadu News Posted On August 15, 2023
0


0
Shares
  • Share On Facebook
  • Tweet It

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧಿಸಿದರೆ ಅವರು ಗೆಲ್ಲಲಿದ್ದಾರೆ ಎಂದು ಉದ್ಭವ್ ಠಾಕ್ರೆ ಬಣದ ರಾಜ್ಯಸಭಾ ಸದಸ್ಯರಾದ ಸಂಜಯ್ ರಾವತ್ ಭವಿಷ್ಯ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪ್ರಿಯಾಂಕಾ ವಾದ್ರಾ ಗೆಲುವು ನಿಶ್ಚಿತ ಎಂದು ಸಂಜಯ್ ರಾವತ್ ಹೇಳಿರುವುದನ್ನು ಕಾಂಗ್ರೆಸ್ ಒಪ್ಪುತ್ತಾ ಎನ್ನುವುದು ಪ್ರಶ್ನೆ. ಯಾಕೆಂದರೆ ಅಂಗೈ ತೋರಿಸಿ ಅವಲಕ್ಷಣ ಅನಿಸಿಕೊಳ್ಳುವ ಉಮ್ಮೇದಿನಲ್ಲಿ ಕಾಂಗ್ರೆಸ್ ಪಕ್ಷ ಇಲ್ಲ.

ಮುಂದಿನ ಲೋಕಸಭಾ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಗ್ನಿ ಪರೀಕ್ಷೆ. ಕನಿಷ್ಟ ನೂರು ಸೀಟುಗಳನ್ನು ದಾಟದೇ ಹೋದರೆ ಮಿತ್ರಪಕ್ಷದ ನೆರವಿನಿಂದ ಅಧಿಕಾರ ಹಿಡಿಯುವುದು ಕಷ್ಟ ಎನ್ನುವುದು ಸೋನಿಯಾ ಗಾಂಧಿಯವರಿಗೆ ಗೊತ್ತಿದೆ. ಹಾಗಿರುವಾಗ ಅವರು ಮಗಳ ರಾಜಕೀಯ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಾರಾ ಎನ್ನುವುದು ಪ್ರಶ್ನೆ. ಆದರೆ ಸಂಸದ ಸಂಜಯ್ ರಾವತ್ ಪ್ರಕಾರ ವಾರಣಾಸಿ ಈ ಬಾರಿ ಸುಲಭದ ತುತ್ತು.

ಅದರೊಂದಿಗೆ ರಾಯಬರೇಲಿ ಮತ್ತು ಅಮೇಠಿಯಲ್ಲಿಯೂ ಕಾಂಗ್ರೆಸ್ ಗೆಲ್ಲಲಿದೆ. ಅಲ್ಲಿ ಭಾರತೀಯ ಜನತಾ ಪಾರ್ಟಿ ಗೆಲ್ಲುವುದು ಕಷ್ಟ ಎನ್ನುವುದನ್ನು ಅವರು ತಿಳಿಸಿದ್ದಾರೆ. ಆದರೆ ಮೋದಿಯವರು ಈ ಬಾರಿ ವಾರಣಾಸಿಯಿಂದ ಸ್ಪರ್ಧಿಸುತ್ತಾರಾ ಎನ್ನುವುದು ಗ್ಯಾರಂಟಿಯಾಗಿಲ್ಲ. ಅವರು ಬಹುತೇಕ ದಕ್ಷಿಣ ಭಾರತದ ಯಾವುದೇ ರಾಜ್ಯದಿಂದ ಸ್ಪರ್ಧಿಸಬಹುದು ಎನ್ನುವುದು ಸದ್ಯದ ಊಹೆ. ಒಂದು ವೇಳೆ ಮೋದಿಯವರು ವಾರಣಾಸಿಯಿಂದ ಸ್ಪರ್ಧಿಸದೇ, ಬಿಜೆಪಿಯಿಂದ ಬೇರೆ ಮುಖಂಡರು ಯಾರಾದರೂ ಸ್ಪರ್ಧಿಸಿದರೂ ಆಗಲೂ ಪ್ರಿಯಾಂಕಾ ವಾದ್ರಾ ಕಾಂಗ್ರೆಸ್ಸಿನಿಂದ ಸ್ಪರ್ಧಿಸುತ್ತಾರಾ, ಹಾಗೆ ಆದರೂ ಗೆಲ್ಲುವುದು ಕಷ್ಟ ಎನ್ನುವುದು ರಾಜಕೀಯ ಪಂಡಿತರ ಲೆಕ್ಕಾಚಾರ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 3
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search