• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಬ್ದುಲ್ ಕಲಾಂ ಅಜಾದ್ ಶಿಕ್ಷಣ ಸಚಿವರಾಗಬಹುದಾದರೆ ಸುಧಾಮೂರ್ತಿ, ಶಂಕರ್ ಮಹಾದೇವನ್ ಯಾಕಿಲ್ಲ?

Tulunadu News Posted On August 15, 2023
0


0
Shares
  • Share On Facebook
  • Tweet It

ರಾಷ್ಟ್ರೀಯ ಶೈಕ್ಷಣೀಕ, ಸಂಶೋಧನೆ ಮತ್ತು ತರಬೇತಿ ಸಮಿತಿ (ಎನ್ ಸಿಇಆರ್ ಟಿ) ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, 1961 ರಲ್ಲಿ ಭಾರತ ಸರಕಾರದಿಂದ ಇದನ್ನು ರಚಿಸಲಾಗಿತ್ತು. ಶಾಲಾ ಶಿಕ್ಷಣದಲ್ಲಿ ಸುಧಾರಿಕೆಯನ್ನು ತರುವುದಕ್ಕಾಗಿ ಮತ್ತು ಮಕ್ಕಳ ಭವಿಷ್ಯಕ್ಕೆ ಭದ್ರ ತಳಪಾಯವನ್ನು ಹಾಕುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಇದು ಯೋಗ್ಯವಾದ ಸಲಹೆಗಳನ್ನು ನೀಡುತ್ತದೆ. ಈ ಸಮಿತಿಗೆ ನೂತನವಾಗಿ 19 ಜನರನ್ನು ಆಯ್ಕೆ ಮಾಡಲಾಗಿದ್ದು ಇನ್ಫೋಸಿಸ್ ಫೌಂಡೇಶನ್ ಇದರ ಅಧ್ಯಕ್ಷೆ, ಲೇಖಕಿ ಸುಧಾಮೂರ್ತಿಯವರನ್ನು ಕೂಡ ಆಯ್ಕೆ ಮಾಡಲಾಗಿದೆ. ಅದರೊಂದಿಗೆ ಶಂಕರ್ ಮಹಾದೇವನ್ ಅವರು ಕೂಡ ಈ ಸಮಿತಿಯಲ್ಲಿ ಕಾರ್ಯ ನಿರ್ವಹಿಸಲಿದ್ದು, ಬೇರೆ ಬೇರೆ ಕ್ಷೇತ್ರಗಳಲ್ಲಿ ಪರಿಣಿತಿ ಹೊಂದಿರುವವರನ್ನು ಇದರಲ್ಲಿ ಆಯ್ಕೆ ಮಾಡಲಾಗಿದೆ.

ಕೆಲವರು ಸುಧಾಮೂರ್ತಿ, ಶಂಕರ್ ಮಹಾದೇವನ್ ಇವರೆಲ್ಲರೂ ಈ ಸಮಿತಿಯಲ್ಲಿ ಯಾಕಿದ್ದಾರೆ ಎಂದು ಕೊಂಕು ತೆಗೆದಿದ್ದಾರೆ. ಜಗತ್ತಿಗೆ ಗೊತ್ತಿರುವ ಹಾಗೆ ಸುಧಾಮೂರ್ತಿಯವರು ಇನ್ಫೋಸಿಸ್ ಫೌಂಡೇಶನ್ ನಿಂದ ಸಮಾಜದಲ್ಲಿ ಅನೇಕ ಮಾದರಿ ಕಾರ್ಯಗಳನ್ನು ಮಾಡುತ್ತಿರುವುದು ಮಾತ್ರವಲ್ಲ, ಸ್ಫೂರ್ತಿದಾಯಕ ಮಾತುಗಳಿಂದ ತಮ್ಮ ಪುಸ್ತಕಗಳಿಂದಲೂ ಮಕ್ಕಳ ಮೇಲೆ ಉತ್ತಮ ಸಚ್ಚಾರಿತ್ರ ಪರಿಣಾಮಗಳನ್ನು ಬೀರಬಲ್ಲರು. ಇನ್ನು ಶಂಕರ್ ಮಹಾದೇವನ್ ಜಗತ್ತಿನ ಪ್ರಖ್ಯಾತ ಗಾಯಕ, ಸಂಗೀತ ನಿರ್ದೇಶಕರೂ ಮಾತ್ರವಲ್ಲ, ಸಂಗೀತ ಅಕಾಡೆಮಿಗಳ ಮೂಲಕ ಎಷ್ಟೋ ಸಂಗೀತ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಉತ್ತಮ ಕಲಾ ಸರಸ್ಪತಿ ಪುತ್ರರನ್ನು ಸಮಾಜಕ್ಕೆ ನೀಡಿದ್ದಾರೆ.

ಆದರೆ ಇಂತಹ ಶ್ರೇಷ್ಟ ಸಾಧಕರನ್ನು ಈ ಸಮಿತಿಯಲ್ಲಿ ಸೇರಿಸುವುದರಿಂದ ಮಕ್ಕಳ ಭವಿಷ್ಯಕ್ಕೆ ಇವರು ಮಾಡುವ ಸಂಶೋಧನೆಗಳು ಪಠ್ಯಪುಸ್ತಕ ರಚನೆಯ ಮೂಲಕ ಉತ್ತಮ ಮಾದರಿಯಾಗುತ್ತವೆ. ಈ ಸಮಿತಿ 3 ರಿಂದ 12 ತರಗತಿಯ ವಿದ್ಯಾರ್ಥಿಗಳ ಪಠ್ಯಪುಸ್ತಕ ರಚಿಸಲಿದೆ. ಅದರೊಂದಿಗೆ ಒಂದು ಮತ್ತು ಎರಡನೇ ತರಗತಿಯ ಮಕ್ಕಳಿಗೂ ಪಠ್ಯಪುಸ್ತಕ ರಚಿಸುವ ಮೂಲಕ ಮಕ್ಕಳ ಬದುಕಿನಲ್ಲಿ ಉತ್ತಮ ದಾರಿದೀಪ ಸೃಷ್ಟಿಸಲಿದೆ. ಇವರಿಗೆ ಶಿಕ್ಷಣದ ಬಗ್ಗೆ ಏನು ಗೊತ್ತಿದೆ ಎಂದು ಪ್ರಶ್ನಿಸುವವರಿಗೆ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರು ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದರು ಎನ್ನುವುದನ್ನು ನೆನಪಿಸಬೇಕು. ಯಾಕೆಂದರೆ ಆ ಶಿಕ್ಷಣ ಸಚಿವರು ಶಾಲೆಗೆ ಹೋಗಿಯೇ ಇರಲಿಲ್ಲ. ಅವರಿಗೆ ಯಾವುದೇ ಸಾಂಪ್ರದಾಯಿಕ ಶಾಲಾ ಶಿಕ್ಷಣ ಅಥವಾ ಡಿಗ್ರಿ ಇರಲಿಲ್ಲ. ಅವರು ಮುಲ್ಲಾಸ್ ಇನ್ ಇಸ್ಲಾಮಿಕ್ ಎಜುಕೇಶನ್ ನಲ್ಲಿ ಧಾರ್ಮಿಕ ಶಿಕ್ಷಣ ಪಡೆದಿದ್ದರು. ಅವರಿಗೆ ಭಾರತ ರತ್ನವನ್ನು ಸರಕಾರ ನೀಡಿತ್ತು. ಶಾಲಾ ಶಿಕ್ಷಣ ಇಲ್ಲದವರು ಶಿಕ್ಷಣ ಮಂತ್ರಿಗಳಾಗಬಹುದಾದ ಭಾರತದಲ್ಲಿ ಸುಧಾಮೂರ್ತಿ, ಶಂಕರ್ ಮಹಾದೇವನ್ ಅವರು ಪಠ್ಯಪುಸ್ತಕ ಪ್ಯಾನಲ್ ನಲ್ಲಿ ಇರುವುದು ತಪ್ಪಾ?

0
Shares
  • Share On Facebook
  • Tweet It




Trending Now
ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
Tulunadu News September 15, 2025
ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
Tulunadu News September 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
    • ಮೋದಿಯಂತಹ ಪ್ರಧಾನಿ ನಮಗೆ ಸಿಕ್ಕಿದ್ರೆ ನಾವು ಅಭಿವೃದ್ಧಿಯಾಗುತ್ತಿದ್ವಿ - ನೇಪಾಳಿ ಪ್ರತಿಭಟನಾಕಾರ
    • ನಂಗೆ ಸ್ವಲ್ಪ ವಿಷ ಕೊಡಿ ಎಂದು ನ್ಯಾಯಾಧೀಶರ ಮುಂದೆ ಕಣ್ಣೀರಿಟ್ಟ ದರ್ಶನ್ ಗೆ ಅಗತ್ಯ ಸೌಕರ್ಯ ನೀಡುವಂತೆ ನ್ಯಾಯಾಲಯ ಆದೇಶ!
    • ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟಲು ಆಸೆ- ಕೈ ಶಾಸಕ ಬಿ.ಕೆ.ಸಂಗಮೇಶ್ವರ್
    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
  • Popular Posts

    • 1
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • 2
      ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • 3
      ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • 4
      ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • 5
      ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ

  • Privacy Policy
  • Contact
© Tulunadu Infomedia.

Press enter/return to begin your search