ವಿಷಪ್ರಾಷನ 1 ಜಾನುವಾರು, ಹಲವು ನಾಯಿಗಳ ಸಾವು
Posted On August 17, 2023
0
ಉಳ್ಳಾಲ: ಆಗಂತುಕನೋರ್ವ ಹಾಕಿದ ವಿಷದಿಂದ ಒಂದು ಜಾನುವಾರು ಹಾಗೂ 9 ರಷ್ಟು ನಾಯಿಗಳು ಸಾವನ್ನಪ್ಪಿರುವ ದಾರುಣ ಘಟನೆ ತಲಪಾಡಿ ಅಲಂಕಾರುಗುಡ್ಡೆ ಎಂಬಲ್ಲಿ ಸಂಭವಿಸಿದೆ.
ಅಲಂಕಾರುಗುಡ್ಡೆ ನಿವಾಸಿ ಸತ್ಯೇಂದ್ರ ಎಂಬವರಿಗೆ ಸೇರಿದ ಹಾಲು ನೀಡುವ ದನ ಸಾವನ್ನಪ್ಪಿದೆ. ಸ್ಥಳೀಯ ಒಂಭತ್ತು ನಾಯಿಗಳು ಕಳೆದ ಎರಡು ದಿನಗಳಿಂದ ಸಾವನ್ನಪ್ಪಿದೆ. ಆಗಂತುಕನೋರ್ವ ರಸ್ತೆಬದಿಯಲ್ಲಿ ಬೀದಿನಾಯಿಗಳಿಗೆಂದು ವಿಷ ಹಾಕುತ್ತಾ ಹೋಗಿರುವುದನ್ನು ಕಂಡವರಿದ್ದಾರೆ. ನಂತರದ ದಿನಗಳಲ್ಲಿ ಅಲ್ಲಲ್ಲಿ ನಾಯಿಗಳು ಸತ್ತುಬಿದ್ದಿದ್ದು, ಇದರಲ್ಲಿ ಕೆಲವನ್ನು ಮಣ್ಣಲ್ಲಿ ಹೂತು ಹಾಕಲಾಗಿದೆಮ ಉಳಿದವು ರಸ್ತೆಬದಿಯಲ್ಲಿ ಕೊಳೆತು ದುರ್ನಾತ ಬೀರುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆ ಕುರಿತು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
January 28, 2026









