• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಂದ್ರಯಾನದ ಧೂಳಿಗೂ ಸಮನಲ್ಲದ ಪ್ರಕಾಶ್ ರೈ ಹೊಲಸು ಮನಸ್ಸಿದು!

Tulunadu News Posted On August 21, 2023
0


0
Shares
  • Share On Facebook
  • Tweet It

ಚಂದ್ರಯಾನದ ಧೂಳಿಗೂ ಸಮನಲ್ಲದ ಪ್ರಕಾಶ್ ರೈ ಹೊಲಸು ಮನಸ್ಸಿದು!

ಒಂದು ಕ್ಷಣಕ್ಕೆ ಈ ಫೋಟೋ ನೋಡಿದಾಗ ಯಾರೋ ಪಾಕಿಸ್ತಾನದವರಾ, ಚೀನಾದವರಾ ಭಾರತೀಯರನ್ನು ತಮಾಷೆ ಮಾಡುತ್ತಾ ಇದ್ದಾರೇನೋ ಎಂದು ಅನಿಸಿತು. ಆದರೆ ಮೇಲೆ ಹೆಸರು ನೋಡಿದ ಬಳಿಕ ಹಾಗೆ ತಮಾಷೆ ಮಾಡಿದವನ ಮುಖ ಮತ್ತು ಹೆಸರು ನೋಡಿ ಆತನ ಮೇಲೆ ಒಮ್ಮೆ ಅಸಹ್ಯ ಮೂಡಿತು. ಹೇಳಿ, ಕೇಳಿ ಪ್ರಕಾಶ್ ರಾಜ್ ಉತ್ತಮ ನಟ. ಆ ಮನುಷ್ಯ ಅಷ್ಟೇ ಮಾಡಿದ್ರೆ ಸಾಕಿತ್ತು. ಆದರೆ ತನ್ನನ್ನು ಪ್ರೇಕ್ಷಕರು ತನ್ನ ನಟನೆಯ ಕಾರಣದಿಂದ ಮಾತ್ರ ಹೊಗಳುತ್ತಾರೆ ಎಂದು ರೈಗೆ ಗೊತ್ತಿರಬೇಕಿತ್ತು. ನಟ ಎನ್ನುವ ಏಕೈಕ ಕಾರಣದಿಂದ ತಾನು ಆಡಿದ್ದನ್ನು ಎಲ್ಲರೂ ಒಪ್ಪುತ್ತಾರೆ ಎಂದು ಯಾರೂ ಭಾವಿಸಬಾರದು. ಪ್ರಕಾಶ್ ರೈ ತನ್ನ ಮನಸ್ಸಿನ ಹೊಲಸುಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದು ವಾಕರಿಕೆ ಮಾಡಿ ಅದನ್ನು ಬೇರೆಯವರು ಸ್ವೀಕರಿಸುತ್ತಾರೆ ಎಂದು ಅಂದುಕೊಂಡಿದ್ದಾರೆ. ಅದು ಅವರ ಭ್ರಮೆ. ಈಗ ಮತ್ತೆ ಪ್ರಕಾಶ್ ರೈ ತಮ್ಮ ಬಾಯಿಯ ತ್ಯಾಜ್ಯವನ್ನು ಬರೆದು ಗಲೀಜು ಮಾಡಿಕೊಂಡಿದ್ದಾರೆ.

ಈಗ ಪ್ರಪಂಚವೇ ಭಾರತದತ್ತ ಮತ್ತೊಮ್ಮೆ ತಿರುಗಿ ನೋಡುತ್ತಿರುವುದಕ್ಕೆ ಚಂದ್ರಯಾನ ಒಂದು ಮುಖ್ಯ ಕಾರಣ. ಅದು ಭಾರತದ ಹೆಮ್ಮೆ. ರಷ್ಯಾದಂತಹ ದೇಶಗಳು ಕೂಡ ಇದರಲ್ಲಿ ಪ್ರತಿ ಬಾರಿ ಯಶಸ್ವಿಯಾಗುತ್ತವೆ ಎಂದು ಹೇಳಲು ಸಾಧ್ಯವಿಲ್ಲ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ದೇಶದ ವಿಜ್ಞಾನಿಗಳು ಹಗಲು ರಾತ್ರಿ ಒಂದು ಮಾಡಿ ತಮ್ಮ ಅಷ್ಟೂ ಶ್ರಮವನ್ನು ಹಾಕಿ ಮಾಡಿದ ಚಂದ್ರಯಾನ ಯಶಸ್ವಿಯಾಗಲಿ ಎಂದು ಪ್ರತಿಯೊಬ್ಬ ದೇಶಪ್ರೇಮಿ ಭಾರತೀಯರು ದೇವರ ಬಳಿ ಪ್ರಾರ್ತಿಸಿದ್ದಾರೆ. ಆದರೆ ಪ್ರಕಾಶ್ ರಾಜ್ ಹಾಗೂ ಅವರಂತಹ ಗಲೀಜು ಮನಸ್ಥಿತಿಯವರು ಮಾತ್ರ ನಮ್ಮೆಲ್ಲರ ಆಶಯದ ವಿರುದ್ಧವಾಗಿ ಚಿಂತಿಸುತ್ತಿದ್ದರೇನೋ ಎಂದು ಅನಿಸುತ್ತದೆ. ಪ್ರಕಾಶ್ ರೈ ಹಾಕಿರುವ ಚಂದ್ರಯಾನ ಪೋಸ್ಟರ್ ನಲ್ಲಿ ಒಬ್ಬ ವ್ಯಕ್ತಿ ಚಾ ಮಾಡುವ ಫೋಟೋ ಹಾಕಿದ್ದಾರೆ. ಇಷ್ಟೇ ಅಲ್ಲಿಂದ ಕಾಣುತ್ತಿರುವುದು ಎಂದು ಭಾರತದ ಹೆಮ್ಮೆಯ ಸಂಸ್ಥೆ ಇಸ್ರೋವನ್ನು ಹಂಗಿಸುತ್ತಿದ್ದಾರೆ. ಚಂದ್ರಯಾನ ಒಂದು ವೈಜ್ಞಾನಿಕ ವಿಷಯ. ಅದು ಪ್ರಕಾಶ್ ರೈಯಂತಹ ಸಾಮಾನ್ಯ ವ್ಯಕ್ತಿಯ ತಲೆಗೆ ಹೋಗುವ ವಿಷಯ ಅಲ್ಲ. ಅದೇನಿದ್ದರೂ ವಿಜ್ಞಾನಿಗಳಿಗೆ ಬಿಡಬೇಕಾಗಿರುವ ವಿಷಯ. ಆದರೆ ಪ್ರಕಾಶ್ ಅವರಿಗೆ ಎಲ್ಲಾ ಕಡೆಯಲ್ಲಿಯೂ ಕಡ್ಡಿ ಅಲ್ಲಾಡಿಸುವ ಅಭ್ಯಾಸ. ಅವರು ಇದರಲ್ಲಿಯೂ ತಮ್ಮ ಹುಚ್ಚಾಟವನ್ನು ತೋರಿಸಿದ್ದಾರೆ. ಇದರಿಂದ ಅವರಂತವರನ್ನು ಬಿಟ್ಟು ಅನೇಕರಿಗೆ ಮನಸ್ಸಿಗೆ ನೋವಾಗಿದೆ. ಬೇರೆ ದೇಶದಲ್ಲಾದರೆ ಪ್ರಕಾಶ್ ರೈ ಮೇಲೆ ಏನು ಕ್ರಮ ಜರುಗಿಸಲಾಗುತ್ತದೆಯೋ ಗೊತ್ತಿಲ್ಲ, ಭಾರತವಾಗಿರುವುದರಿಂದ ಇಂತವರನ್ನೆಲ್ಲಾ ಸಹಿಸಿಕೊಳ್ಳಬೇಕು!!

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search