• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023
0


0
Shares
  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search