• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತಿರುಪತಿ ತಿಮ್ಮಪ್ಪನ ಕಿರೀಟದಂತೆ ಗೋಚರಿಸಿದ ವಿಕ್ರಮ್ ಲ್ಯಾಂಡರ್!

Tulunadu News Posted On August 24, 2023
0


0
Shares
  • Share On Facebook
  • Tweet It

ಇಡೀ ಜಗತ್ತು ಬುಧವಾರ ಚಂದ್ರಯಾನ -3 ಕ್ಕೆ ಸಾಕ್ಷಿಯಾಯಿತು. ಭಾರತದ ಮೂಲೆಮೂಲೆಗಳಲ್ಲಿ ಇದರ ಸಂಭ್ರಮಾಚರಣೆ ನಡೆಯಿತು. ಭಾರತದ ಜನಸಾಮಾನ್ಯನಿಂದ ಹಿಡಿದು ತಾರೆಯರ ತನಕ ಎಲ್ಲರೂ ಇಸ್ರೋವನ್ನು ಮತ್ತು ಇದರ ಯಶಸ್ಸಿನ ಹಿಂದಿರುವ ಪ್ರಮುಖರನ್ನು ಕೊಂಡಾಡಿದರು. ಈ ನಡುವೆ ಇದರ ಕ್ರೆಡಿಟ್ ಪಡೆಯುವ ಕೆಲಸದಲ್ಲಿಯೂ ರಾಜಕೀಯ ನಡೆದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ನಾವು ಗಮನಿಸಿದ್ದೇವೆ.
ಈಗ ವಿಷಯ ಏನೆಂದರೆ ವಿಕ್ರಮ್ ಲ್ಯಾಂಡರ್ ಅನ್ನು ನೀವು ಬಹಳ ಸೂಕ್ಷ್ಮವಾಗಿ ಗಮನಿಸಿರಬಹುದು. ಅದೇ ಹೊತ್ತಿಗೆ ತಿರುಪತಿ ತಿಮ್ಮಪ್ಪನ ಫೋಟೋವನ್ನು ಮನದಲ್ಲಿ ಕಲ್ಪಿಸಿಕೊಳ್ಳಿ. ಬೇಕಾದರೆ ನಾವು ಈಗ ಪೋಸ್ಟ್ ಮಾಡಿದ ಫೋಟೋವನ್ನು ಕಣ್ಣಾರೆ ನೋಡಿ. ತಿರುಪತಿ ತಿಮ್ಮಪ್ಪನ ಕಿರೀಟ ಹಾಗೂ ವಿಕ್ರಮ್ ಲ್ಯಾಂಡರ್ ಬಹುತೇಕ ಒಂದೇ ರೀತಿಯಲ್ಲಿ ಕಾಣುತ್ತವೆ. ನಾಸ್ತಿಕರು ಇದನ್ನು ಅತಿರೇಕದ ಹೋಲಿಕೆ ಎಂದು ಬಣ್ಣಿಸಬಹುದು. ಆದರೆ ದೈವಿಕ ದೃಷ್ಟಿಯಿಂದ ನೋಡಿದರೆ ಇದೆರಡು ಒಂದೇ ತರಹ ಕಾಣುವುದರಲ್ಲಿ ಸಂಶಯವಿಲ್ಲ. ಚಂದ್ರಯಾನ -3 ಉಡಾವಣೆಯ ಮೊದಲು ಇಸ್ರೋ ಪ್ರಮುಖರು ತಿರುಪತಿ ದೇವಸ್ಥಾನಕ್ಕೆ ತೆರಳಿ ತಿಮ್ಮಪ್ಪನ ಆರ್ಶೀವಾದವನ್ನು ಕೋರಿದ್ದರು. ಅದನ್ನು ಕೆಲವು ಎಡಪಂಥಿಯ ಚಿಂತಕರು ಟೀಕಿಸಿದ್ದರು. ಚಂದ್ರಯಾನ-3 ತಿಮ್ಮಪ್ಪನ ಪಾದಕ್ಕೆ ಎಂದು ಹಂಗಿಸಿದ್ದರು. ಕೊನೆಗೂ ಚಂದ್ರಯಾನ-3 ಯಶಸ್ಸಾಗುವುದರೊಂದಿಗೆ ದೇವರ ಆರ್ಶೀವಾದ ಈ ಯೋಜನೆಯ ಮೇಲಿತ್ತು ಎಂದು ಆಸ್ತಿಕರು ಧೈರ್ಯದಿಂದ ಹೇಳಬಹುದು. ಅದೇ ರೀತಿ ಟೀಕಾಕಾರರ ಬಾಯಿಯನ್ನು ಮುಚ್ಚಿಸಬಹುದು. ಚಂದ್ರಯಾನ -3 ಯಶಸ್ವಿಯಾಗುವ ಮೊದಲು ಇಸ್ರೋ ಅಧ್ಯಕ್ಷ ಸೋಮನಾಥ್ ಅವರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದ್ದನ್ನು ನಾವು ಸ್ಮರಿಸಬಹುದು.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search