• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಿಮ್ಮ ವಾಹನ 2019 ಕ್ಕಿಂತ ಹಿಂದಿನದಾ? ಹಾಗಾದ್ರೆ ತಕ್ಷಣ ಅಳವಡಿಸಿ!

Tulunadu News Posted On August 24, 2023
0


0
Shares
  • Share On Facebook
  • Tweet It

ಎಪ್ರಿಲ್ 1, 2019 ರ ಹಿಂದಿನ ವಾಹನಗಳು ಇದೇ ವರ್ಷದ ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟುಗಳನ್ನು ಹೊಂದಿರಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಕರ್ನಾಟಕದ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಇದರ ಉದ್ದೇಶ ಎಲ್ಲಾ ವಾಹನಗಳ ನೋಂದಣಿ ಫಲಕಗಳನ್ನು ಪ್ರಮಾಣೀಕರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ.
ಇದರ ಮುಖ್ಯ ಉದ್ದೇಶ ವಾಹನಗಳಿಗೆ ಸಂಬಂಧಪಟ್ಟ ಅಪರಾಧಗಳನ್ನು ತಡೆಗಟ್ಟುವುದು ಮತ್ತು ವಾಹನ ಸುರಕ್ಷತೆಗಳನ್ನು ಕಾಪಾಡುವುದು ಮುಖ್ಯವಾಗಿದೆ. ವಾಹನಗಳ ನಂಬರ್ ಪ್ಲೇಟ್ ಗಳನ್ನು
ದುರುಪಯೋಗ ಮಾಡುವುದನ್ನು ಈ ಮೂಲಕ ತಡೆಯಬಹುದಾಗಿದೆ. ಅದೇ ರೀತಿಯಲ್ಲಿ ವಾಹನ ನೊಂದಣಿ ಪ್ರಮಾಣಪತ್ರ ಇಲ್ಲದಿರುವಿಕೆ, ಫಿಟ್ ನೆಸ್ ಪ್ರಮಾಣಪತ್ರ ಇಲ್ಲದಿರುವಿಕೆ( ಸಾರಿಗೆ ವಾಹನ) ಹಾಗೂ ರಸ್ತೆ ತೆರಿಗೆ ಬಾಕಿ ಇರಿಸಿಕೊಂಡ ವಾಹನಗಳಿಗೆ ಈ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲಾಗುವುದಿಲ್ಲ.
2019 ರ ನಂತರದ ವಾಹನಗಳ ತಯಾರಕರು ಎಚ್ ಎಸ್ ಆರ್ ಪಿ ಉತ್ಪಾದಕರಿಂದ ಸ್ಪರ್ಧಾತ್ಮಕ ದರದಲ್ಲಿ ಸುಧಾರಿತ ಆಧುನಿಕ ನಂಬರ್ ಖರೀದಿಸಿ ವಾಹನಗಳಿಗೆ ಅಳವಡಿಸಬಹುದಾಗಿದೆ. ನಾಲ್ಕು ಚಕ್ರಗಳ ವಾಹನಗಳಿಗೆ 400 ರಿಂದ 500 ತನಕ ಇದರ ದರ ತಗುಲಿದರೆ, ದ್ವಿಚಕ್ರ ವಾಹನಗಳ ಹೊಸ ಇಂತಹ ನಂಬರ್ ಪ್ಲೇಟ್ ಅಳವಡಿಸಲು 250 ರಿಂದ 300 ವೆಚ್ಚವಾಗುತ್ತದೆ. ಇಂತಹ ನಿಯಮ ದೇಶದ 12 ರಾಜ್ಯಗಳಲ್ಲಿ ಚಾಲ್ತಿಯಲ್ಲಿದೆ. ಸದ್ಯದ ಅಂದಾಜಿನಂತೆ 2019, ಎಪ್ರಿಲ್ 1 ರ ಮೊದಲು ಕರ್ನಾಟಕ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿರುವ ವಾಹನಗಳ ಸಂಖ್ಯೆ 1.75 ಕೋಟಿಯಿಂದ 2 ಕೋಟಿ. ನೀವಿನ್ನು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟುಗಳನ್ನು ನಿಮ್ಮ ವಾಹನಕ್ಕೆ ಅಳವಡಿಸದಿದ್ದರೆ ತಕ್ಷಣ ಅಳವಡಿಸಿ. ನವೆಂಬರ್ ನಂತರ ಇಂತಹ ನಂಬರ್ ಪ್ಲೇಟುಗಳು ಇಲ್ಲದ ವಾಹನಗಳಿಗೆ ದಂಡ ವಿಧಿಸುವ ಯೋಚನೆ ಸರಕಾರದ ಮುಂದಿದೆ

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search