• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಿಮ್ಮ ವಾಹನ 2019 ಕ್ಕಿಂತ ಹಿಂದಿನದಾ? ಹಾಗಾದ್ರೆ ತಕ್ಷಣ ಅಳವಡಿಸಿ!

Tulunadu News Posted On August 24, 2023


  • Share On Facebook
  • Tweet It

ಎಪ್ರಿಲ್ 1, 2019 ರ ಹಿಂದಿನ ವಾಹನಗಳು ಇದೇ ವರ್ಷದ ನವೆಂಬರ್ 17 ರೊಳಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟುಗಳನ್ನು ಹೊಂದಿರಬೇಕಾದ ಅನಿವಾರ್ಯತೆ ಇದೆ. ಈ ಬಗ್ಗೆ ಕರ್ನಾಟಕದ ಸಾರಿಗೆ ಇಲಾಖೆ ಆದೇಶ ಹೊರಡಿಸಿದ್ದು, ಇದರ ಉದ್ದೇಶ ಎಲ್ಲಾ ವಾಹನಗಳ ನೋಂದಣಿ ಫಲಕಗಳನ್ನು ಪ್ರಮಾಣೀಕರಿಸುವ ಗುರಿಯನ್ನು ಹೊಂದಿದೆ ಎಂದು ಹೇಳಲಾಗಿದೆ.
ಇದರ ಮುಖ್ಯ ಉದ್ದೇಶ ವಾಹನಗಳಿಗೆ ಸಂಬಂಧಪಟ್ಟ ಅಪರಾಧಗಳನ್ನು ತಡೆಗಟ್ಟುವುದು ಮತ್ತು ವಾಹನ ಸುರಕ್ಷತೆಗಳನ್ನು ಕಾಪಾಡುವುದು ಮುಖ್ಯವಾಗಿದೆ. ವಾಹನಗಳ ನಂಬರ್ ಪ್ಲೇಟ್ ಗಳನ್ನು
ದುರುಪಯೋಗ ಮಾಡುವುದನ್ನು ಈ ಮೂಲಕ ತಡೆಯಬಹುದಾಗಿದೆ. ಅದೇ ರೀತಿಯಲ್ಲಿ ವಾಹನ ನೊಂದಣಿ ಪ್ರಮಾಣಪತ್ರ ಇಲ್ಲದಿರುವಿಕೆ, ಫಿಟ್ ನೆಸ್ ಪ್ರಮಾಣಪತ್ರ ಇಲ್ಲದಿರುವಿಕೆ( ಸಾರಿಗೆ ವಾಹನ) ಹಾಗೂ ರಸ್ತೆ ತೆರಿಗೆ ಬಾಕಿ ಇರಿಸಿಕೊಂಡ ವಾಹನಗಳಿಗೆ ಈ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಲಾಗುವುದಿಲ್ಲ.
2019 ರ ನಂತರದ ವಾಹನಗಳ ತಯಾರಕರು ಎಚ್ ಎಸ್ ಆರ್ ಪಿ ಉತ್ಪಾದಕರಿಂದ ಸ್ಪರ್ಧಾತ್ಮಕ ದರದಲ್ಲಿ ಸುಧಾರಿತ ಆಧುನಿಕ ನಂಬರ್ ಖರೀದಿಸಿ ವಾಹನಗಳಿಗೆ ಅಳವಡಿಸಬಹುದಾಗಿದೆ. ನಾಲ್ಕು ಚಕ್ರಗಳ ವಾಹನಗಳಿಗೆ 400 ರಿಂದ 500 ತನಕ ಇದರ ದರ ತಗುಲಿದರೆ, ದ್ವಿಚಕ್ರ ವಾಹನಗಳ ಹೊಸ ಇಂತಹ ನಂಬರ್ ಪ್ಲೇಟ್ ಅಳವಡಿಸಲು 250 ರಿಂದ 300 ವೆಚ್ಚವಾಗುತ್ತದೆ. ಇಂತಹ ನಿಯಮ ದೇಶದ 12 ರಾಜ್ಯಗಳಲ್ಲಿ ಚಾಲ್ತಿಯಲ್ಲಿದೆ. ಸದ್ಯದ ಅಂದಾಜಿನಂತೆ 2019, ಎಪ್ರಿಲ್ 1 ರ ಮೊದಲು ಕರ್ನಾಟಕ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿರುವ ವಾಹನಗಳ ಸಂಖ್ಯೆ 1.75 ಕೋಟಿಯಿಂದ 2 ಕೋಟಿ. ನೀವಿನ್ನು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟುಗಳನ್ನು ನಿಮ್ಮ ವಾಹನಕ್ಕೆ ಅಳವಡಿಸದಿದ್ದರೆ ತಕ್ಷಣ ಅಳವಡಿಸಿ. ನವೆಂಬರ್ ನಂತರ ಇಂತಹ ನಂಬರ್ ಪ್ಲೇಟುಗಳು ಇಲ್ಲದ ವಾಹನಗಳಿಗೆ ದಂಡ ವಿಧಿಸುವ ಯೋಚನೆ ಸರಕಾರದ ಮುಂದಿದೆ

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search