• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡದಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾದ ಸುಧೀಂದ್ರ!

Tulunadu News Posted On August 24, 2023
0


0
Shares
  • Share On Facebook
  • Tweet It

ಕನ್ನಡ ಮಾಧ್ಯಮದಲ್ಲಿ ಮಕ್ಕಳು ಕಲಿತರೆ ಪ್ರಯೋಜನ ಏನು ಎಂದು ಯೋಚಿಸುವ ಪೋಷಕರೇ ಇವತ್ತಿನ ದಿನಗಳಲ್ಲಿ ಹೆಚ್ಚು. ಆದ್ದರಿಂದ ಕೆಳಮಧ್ಯಮ ವರ್ಗದ ಪೋಷಕರು ಕೂಡ ಎಷ್ಟೇ ಕಷ್ಟವಾದರೂ ಸಾಲಸೋಲ ಮಾಡಿ ಮಕ್ಕಳನ್ನು ಇಂಗ್ಲೀಷ್ ಮೀಡಿಯಂಗೆ ಸೇರಿಸುತ್ತಾರೆ. ಅದರಲ್ಲಿಯೂ ದೊಡ್ಡ ಹೆಸರಿರುವ ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಕಲಿತರೆ ಮಾತ್ರ ಜೀವನದಲ್ಲಿ ದೊಡ್ಡ ವ್ಯಕ್ತಿಯಾಗಲು ಸಾಧ್ಯ ಎಂದು ನಂಬಿರುವ ಪೋಷಕ ವರ್ಗ ನಮ್ಮಲ್ಲಿ ದೊಡ್ಡದಿದೆ. ಆದರೆ ಬಾಲ್ಯದಲ್ಲಿ ಕಲಿಯುವ ವಿದ್ಯಾಭ್ಯಾಸಕ್ಕೂ ನಮ್ಮ ಸಾಧನೆಗೂ ತಾಳೆ ಹಾಕಲು ಸಾಧ್ಯವಿಲ್ಲ ಎಂದು ಇಸ್ರೋ ವಿಜ್ಞಾನಿಯೊಬ್ಬರು ತೋರಿಸಿಕೊಟ್ಟಿದ್ದಾರೆ. ಅವರ ಪೂರ್ಣ ಹೆಸರು ಸುಧೀಂದ್ರ ವೆಂಕಣ್ಣಚಾರ್ಯ ಬಿಂದಗಿ.
ಇವರು ಮೂಲತ: ಗದಗ ಜಿಲ್ಲೆಯ ಸೊರಟೂರು ಗ್ರಾಮದವರು. ಗದಗ ನಗರದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದ್ದಾರೆ. ಶಾಲಾ ಹಂತದಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ್ದು, ವಿಷಯಗಳನ್ನು ಆಳವಾಗಿ ಮನವರಿಕೆ ಮಾಡಲು ಸಹಾಯವಾಯಿತು ಎಂದು ಹೇಳುವ ಇವರು ಪ್ರಾಥಮಿಕ ಶಿಕ್ಷಣ ಕನ್ನಡದಲ್ಲಿಯೇ ಆಗಬೇಕು ಎಂದು ಪ್ರತಿಪಾದಿಸುತ್ತಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ಬಿಟೆಕ್ ಪದವಿಯನ್ನು ಪಡೆದು 1986 ರಲ್ಲಿ ಇಸ್ರೋ ಸೇರಿಕೊಂಡಿದ್ದರು. ಜುಲೈ 14 ರಂದು ಚಂದ್ರಯಾನ -3 ಉಡಾವಣೆಯಾದ ವಾರದ ಬಳಿಕ ಸುಧೀಂದ್ರ ಇಸ್ರೋದಲ್ಲಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ.
ಗದಗದ ವೀರನಾರಾಯಣ ದೇವಸ್ಥಾನದ ಅಗ್ರಹಾರದಲ್ಲಿ ಬೆಳೆದಿರುವ ಸುಧೀಂದ್ರ ಅವರಿಗೆ ದೈವ ಬಲವೂ ಸಾಥ್ ನೀಡಿದೆ. ದೇವಸ್ಥಾನದ ವಾತಾವರಣ ಬದುಕಿನಲ್ಲಿ ಶಿಸ್ತು ಕಲಿಸಿತು ಎಂದು ಸುಧೀಂದ್ರ ಹೇಳುತ್ತಾರೆ. ಒಟ್ಟಿನಲ್ಲಿ ಚಂದ್ರಯಾನದ ಯಶಸ್ಸಿನಲ್ಲಿ ಸುಧೀಂದ್ರ ಅವರ ಪಾಲು ಕೂಡ ಇದೆ. ಆದರೆ ಈ ಸಾಧನೆಗೆ ಬಾಲ್ಯದ ಕನ್ನಡ ಶಿಕ್ಷಣ ಪೂರಕವಾಯಿತು ಎನ್ನುವುದು ಮಾತ್ರ ಕನ್ನಡಿಗರಿಗೂ ಹೆಮ್ಮೆಯ ಸಂಗತಿ.

0
Shares
  • Share On Facebook
  • Tweet It




Trending Now
ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
Tulunadu News July 30, 2025
ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
Tulunadu News July 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!
    • ಚಕ್ರವರ್ತಿ ವಿರುದ್ಧದ FIR ರದ್ದು! ಸುಪ್ರೀಂ ಕೋರ್ಟಿನಲ್ಲಿ ಅರುಣ್ ಶ್ಯಾಮ್ ವಾದ
    • 6 ಡ್ರೋನ್ ಗಳಲ್ಲಿ ಪಾಕ್ ನಿಂದ ಪಿಸ್ತೂಲ್, ಹೆರಾಯಿನ್ ಸಾಗಾಟ: ಧರೆಗುರುಳಿಸಿದ ಬಿಎಸ್ ಎಫ್..
    • ಶಿವದೂತ ಗುಳಿಗೆ ನಾಟಕದ "ಭೀಮರಾವ್" ರಮೇಶ್ ಕಲ್ಲಡ್ಕ ನಿಧನ!
    • ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ವಂಚನೆ: ರೋಶನ್ ಸಲ್ದಾನಾ ಪ್ರಕರಣ ಸಿಐಡಿಗೆ
    • ಕರ್ನಾಟಕದಲ್ಲಿ "ಮನೆಮನೆಗೆ ಪೊಲೀಸ್" ಏನು ಕಥೆ!
  • Popular Posts

    • 1
      ಡ್ರೋಣ್ ಕ್ಷೇತ್ರದ ಬಗ್ಗೆ ರಾಹುಲ್ ಗಾಂಧಿಯವರ ಹೇಳಿಕೆಗೆ ಡಿಎಫ್ ಐ ಅಧ್ಯಕ್ಷರ ಕೌಂಟರ್!
    • 2
      ಧರ್ಮಸ್ಥಳದ ಶವ ಹೂತಿಟ್ಟ ಸ್ಥಳಗಳ ಅಗೆತಕ್ಕೆ ಜೆಸಿಬಿ ಬರಬೇಕಾಯ್ತು!
    • 3
      ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟ ಅನಿವಾರ್ಯ -ನಳಿನ್ ಕುಮಾರ್ ಕಟೀಲ್
    • 4
      SSLC ಮಕ್ಕಳಿಗೆ ರಾಜ್ಯ ಸರಕಾರದಿಂದ ಶುಭ ಸುದ್ದಿ!
    • 5
      ಬಹುಮುಖ ಪ್ರತಿಭೆ ರಾಜಶ್ರೀ ಪೂಜಾರಿ ಇನ್ನಿಲ್ಲ!

  • Privacy Policy
  • Contact
© Tulunadu Infomedia.

Press enter/return to begin your search