• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕನ್ನಡದಲ್ಲಿ ಕಲಿತು ಇಸ್ರೋದಲ್ಲಿ ವಿಜ್ಞಾನಿಯಾದ ಸುಧೀಂದ್ರ!

Tulunadu News Posted On August 24, 2023
0


0
Shares
  • Share On Facebook
  • Tweet It

ಕನ್ನಡ ಮಾಧ್ಯಮದಲ್ಲಿ ಮಕ್ಕಳು ಕಲಿತರೆ ಪ್ರಯೋಜನ ಏನು ಎಂದು ಯೋಚಿಸುವ ಪೋಷಕರೇ ಇವತ್ತಿನ ದಿನಗಳಲ್ಲಿ ಹೆಚ್ಚು. ಆದ್ದರಿಂದ ಕೆಳಮಧ್ಯಮ ವರ್ಗದ ಪೋಷಕರು ಕೂಡ ಎಷ್ಟೇ ಕಷ್ಟವಾದರೂ ಸಾಲಸೋಲ ಮಾಡಿ ಮಕ್ಕಳನ್ನು ಇಂಗ್ಲೀಷ್ ಮೀಡಿಯಂಗೆ ಸೇರಿಸುತ್ತಾರೆ. ಅದರಲ್ಲಿಯೂ ದೊಡ್ಡ ಹೆಸರಿರುವ ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ಕಲಿತರೆ ಮಾತ್ರ ಜೀವನದಲ್ಲಿ ದೊಡ್ಡ ವ್ಯಕ್ತಿಯಾಗಲು ಸಾಧ್ಯ ಎಂದು ನಂಬಿರುವ ಪೋಷಕ ವರ್ಗ ನಮ್ಮಲ್ಲಿ ದೊಡ್ಡದಿದೆ. ಆದರೆ ಬಾಲ್ಯದಲ್ಲಿ ಕಲಿಯುವ ವಿದ್ಯಾಭ್ಯಾಸಕ್ಕೂ ನಮ್ಮ ಸಾಧನೆಗೂ ತಾಳೆ ಹಾಕಲು ಸಾಧ್ಯವಿಲ್ಲ ಎಂದು ಇಸ್ರೋ ವಿಜ್ಞಾನಿಯೊಬ್ಬರು ತೋರಿಸಿಕೊಟ್ಟಿದ್ದಾರೆ. ಅವರ ಪೂರ್ಣ ಹೆಸರು ಸುಧೀಂದ್ರ ವೆಂಕಣ್ಣಚಾರ್ಯ ಬಿಂದಗಿ.
ಇವರು ಮೂಲತ: ಗದಗ ಜಿಲ್ಲೆಯ ಸೊರಟೂರು ಗ್ರಾಮದವರು. ಗದಗ ನಗರದಲ್ಲಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಣವನ್ನು ಪೂರ್ತಿಗೊಳಿಸಿದ್ದಾರೆ. ಶಾಲಾ ಹಂತದಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ್ದು, ವಿಷಯಗಳನ್ನು ಆಳವಾಗಿ ಮನವರಿಕೆ ಮಾಡಲು ಸಹಾಯವಾಯಿತು ಎಂದು ಹೇಳುವ ಇವರು ಪ್ರಾಥಮಿಕ ಶಿಕ್ಷಣ ಕನ್ನಡದಲ್ಲಿಯೇ ಆಗಬೇಕು ಎಂದು ಪ್ರತಿಪಾದಿಸುತ್ತಾರೆ. ಇವರು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿ ಬಿಟೆಕ್ ಪದವಿಯನ್ನು ಪಡೆದು 1986 ರಲ್ಲಿ ಇಸ್ರೋ ಸೇರಿಕೊಂಡಿದ್ದರು. ಜುಲೈ 14 ರಂದು ಚಂದ್ರಯಾನ -3 ಉಡಾವಣೆಯಾದ ವಾರದ ಬಳಿಕ ಸುಧೀಂದ್ರ ಇಸ್ರೋದಲ್ಲಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದಾರೆ.
ಗದಗದ ವೀರನಾರಾಯಣ ದೇವಸ್ಥಾನದ ಅಗ್ರಹಾರದಲ್ಲಿ ಬೆಳೆದಿರುವ ಸುಧೀಂದ್ರ ಅವರಿಗೆ ದೈವ ಬಲವೂ ಸಾಥ್ ನೀಡಿದೆ. ದೇವಸ್ಥಾನದ ವಾತಾವರಣ ಬದುಕಿನಲ್ಲಿ ಶಿಸ್ತು ಕಲಿಸಿತು ಎಂದು ಸುಧೀಂದ್ರ ಹೇಳುತ್ತಾರೆ. ಒಟ್ಟಿನಲ್ಲಿ ಚಂದ್ರಯಾನದ ಯಶಸ್ಸಿನಲ್ಲಿ ಸುಧೀಂದ್ರ ಅವರ ಪಾಲು ಕೂಡ ಇದೆ. ಆದರೆ ಈ ಸಾಧನೆಗೆ ಬಾಲ್ಯದ ಕನ್ನಡ ಶಿಕ್ಷಣ ಪೂರಕವಾಯಿತು ಎನ್ನುವುದು ಮಾತ್ರ ಕನ್ನಡಿಗರಿಗೂ ಹೆಮ್ಮೆಯ ಸಂಗತಿ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search