• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹನುಮಾನ್ ಚಾಲೀಸಾ ಪಠಿಸುತ್ತಾ ಚಂದ್ರಯಾನ 3 ವೀಕ್ಷಿಸಿದ ಜಪಾನ್!

Tulunadu News Posted On August 24, 2023
0


0
Shares
  • Share On Facebook
  • Tweet It

ಭಾರತದ ಹೆಮ್ಮೆಯ ಚಂದ್ರಯಾನ-3 ಅನ್ನು ವಿಶ್ವವೇ ನಿಬ್ಬೆರಗಾಗಿ ಬುಧವಾರ ವೀಕ್ಷಿಸಿತು. ಇದು ಕೇವಲ ಭಾರತದಲ್ಲಿರುವ ನಾಗರಿಕರಿಗೆ ಮಾತ್ರ ಸಂತೋಷದ ಸಂಗತಿ ಆಗಿರಲಿಲ್ಲ. ವಿಶ್ವಾದ್ಯಂತ ಇರುವ ಅನಿವಾಸಿ ಭಾರತೀಯರು ಕೂಡ ಈ ದಿನ ಸಂಭ್ರಮವನ್ನು ಆಚರಿಸಿಕೊಂಡರು. ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನಲ್ಲಿ ತನ್ನ ಇರುವನ್ನು ಸಾಬೀತುಪಡಿಸುತ್ತಲೇ ಭಾರತೀಯರು ಹರ್ಷೋದ್ಧಾರಗಳಿಂದ ಅದನ್ನು ಸಂಭ್ರಮಿಸಿದರು. ಈ ಸಂದರ್ಬದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೆಂದ್ರ ಪಡ್ನವೀಸ್ ಅವರು ಜಪಾನಿನ ಟೋಕಿಯೋದಲ್ಲಿ ಇದ್ದರು. ಅಲ್ಲಿ ಇದರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿರುವ ಸಭಾಂಗಣದಲ್ಲಿ ಹಾಕಿರುವ ಬೃಹತ್ ಪರದೆಯ ಮೇಲೆ ಅವರು ಅನಿವಾಸಿ ಭಾರತೀಯರೊಂದಿಗೆ ಕುಳಿತು ಚಂದ್ರಯಾನ 3 ಇದರ ಸಾರ್ಥಕ ಕ್ಷಣಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಸಭಾಂಗಣದಲ್ಲಿ ಹನುಮಾನ್ ಚಾಲೀಸಾ ಪಠಣ ನಡೆಸಲಾಯಿತು. ಚಂದ್ರಯಾನ 3 ಯಶಸ್ವಿಯಾಗಿ ನಡೆಯಲಿ ಎಂದು ಹನುಮಾನ್ ಚಾಲೀಸಾ ಪಠಿಸುತ್ತಾ ದೇವರನ್ನು ಪ್ರಾರ್ಥಿಸಲಾಯಿತು. ಇದರ ವಿಡಿಯೋವನ್ನು ದೇವೆಂದ್ರ ಪಡ್ನವೀಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೈ ಭಜರಂಗ ಬಲಿ, ವಂದೇ ಮಾತರಂ ಎಂದು ಬರೆದುಕೊಂಡಿರುವ ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿರಲಿ ಇಂತಹ ದೃಶ್ಯವನ್ನು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಈ ಉತ್ಸಾಹ ಮತ್ತು ಹುಮ್ಮಸ್ಸನ್ನು ನೋಡಿ ಖುಷಿಯಾಯಿತು ಎನ್ನುವ ಅರ್ಥದ ಸಾಲುಗಳನ್ನು ಬರೆದಿದ್ದಾರೆ. ಭಾರತೀಯ ಹಿಂದೂಗಳು ಜಗತ್ತಿನಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ತಮ್ಮ ಸಂಸ್ಕೃತಿಯನ್ನು ಮರೆಯುವುದಿಲ್ಲ ಎನ್ನುವುದಕ್ಕೆ ಹನುಮಾನ್ ಚಾಲೀಸಾ ಪಠಣವೇ ಸಾಕ್ಷಿ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search