• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹನುಮಾನ್ ಚಾಲೀಸಾ ಪಠಿಸುತ್ತಾ ಚಂದ್ರಯಾನ 3 ವೀಕ್ಷಿಸಿದ ಜಪಾನ್!

Tulunadu News Posted On August 24, 2023


  • Share On Facebook
  • Tweet It

ಭಾರತದ ಹೆಮ್ಮೆಯ ಚಂದ್ರಯಾನ-3 ಅನ್ನು ವಿಶ್ವವೇ ನಿಬ್ಬೆರಗಾಗಿ ಬುಧವಾರ ವೀಕ್ಷಿಸಿತು. ಇದು ಕೇವಲ ಭಾರತದಲ್ಲಿರುವ ನಾಗರಿಕರಿಗೆ ಮಾತ್ರ ಸಂತೋಷದ ಸಂಗತಿ ಆಗಿರಲಿಲ್ಲ. ವಿಶ್ವಾದ್ಯಂತ ಇರುವ ಅನಿವಾಸಿ ಭಾರತೀಯರು ಕೂಡ ಈ ದಿನ ಸಂಭ್ರಮವನ್ನು ಆಚರಿಸಿಕೊಂಡರು. ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನಲ್ಲಿ ತನ್ನ ಇರುವನ್ನು ಸಾಬೀತುಪಡಿಸುತ್ತಲೇ ಭಾರತೀಯರು ಹರ್ಷೋದ್ಧಾರಗಳಿಂದ ಅದನ್ನು ಸಂಭ್ರಮಿಸಿದರು. ಈ ಸಂದರ್ಬದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೆಂದ್ರ ಪಡ್ನವೀಸ್ ಅವರು ಜಪಾನಿನ ಟೋಕಿಯೋದಲ್ಲಿ ಇದ್ದರು. ಅಲ್ಲಿ ಇದರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿರುವ ಸಭಾಂಗಣದಲ್ಲಿ ಹಾಕಿರುವ ಬೃಹತ್ ಪರದೆಯ ಮೇಲೆ ಅವರು ಅನಿವಾಸಿ ಭಾರತೀಯರೊಂದಿಗೆ ಕುಳಿತು ಚಂದ್ರಯಾನ 3 ಇದರ ಸಾರ್ಥಕ ಕ್ಷಣಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಸಭಾಂಗಣದಲ್ಲಿ ಹನುಮಾನ್ ಚಾಲೀಸಾ ಪಠಣ ನಡೆಸಲಾಯಿತು. ಚಂದ್ರಯಾನ 3 ಯಶಸ್ವಿಯಾಗಿ ನಡೆಯಲಿ ಎಂದು ಹನುಮಾನ್ ಚಾಲೀಸಾ ಪಠಿಸುತ್ತಾ ದೇವರನ್ನು ಪ್ರಾರ್ಥಿಸಲಾಯಿತು. ಇದರ ವಿಡಿಯೋವನ್ನು ದೇವೆಂದ್ರ ಪಡ್ನವೀಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೈ ಭಜರಂಗ ಬಲಿ, ವಂದೇ ಮಾತರಂ ಎಂದು ಬರೆದುಕೊಂಡಿರುವ ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿರಲಿ ಇಂತಹ ದೃಶ್ಯವನ್ನು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಈ ಉತ್ಸಾಹ ಮತ್ತು ಹುಮ್ಮಸ್ಸನ್ನು ನೋಡಿ ಖುಷಿಯಾಯಿತು ಎನ್ನುವ ಅರ್ಥದ ಸಾಲುಗಳನ್ನು ಬರೆದಿದ್ದಾರೆ. ಭಾರತೀಯ ಹಿಂದೂಗಳು ಜಗತ್ತಿನಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ತಮ್ಮ ಸಂಸ್ಕೃತಿಯನ್ನು ಮರೆಯುವುದಿಲ್ಲ ಎನ್ನುವುದಕ್ಕೆ ಹನುಮಾನ್ ಚಾಲೀಸಾ ಪಠಣವೇ ಸಾಕ್ಷಿ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search