• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹನುಮಾನ್ ಚಾಲೀಸಾ ಪಠಿಸುತ್ತಾ ಚಂದ್ರಯಾನ 3 ವೀಕ್ಷಿಸಿದ ಜಪಾನ್!

Tulunadu News Posted On August 24, 2023
0


0
Shares
  • Share On Facebook
  • Tweet It

ಭಾರತದ ಹೆಮ್ಮೆಯ ಚಂದ್ರಯಾನ-3 ಅನ್ನು ವಿಶ್ವವೇ ನಿಬ್ಬೆರಗಾಗಿ ಬುಧವಾರ ವೀಕ್ಷಿಸಿತು. ಇದು ಕೇವಲ ಭಾರತದಲ್ಲಿರುವ ನಾಗರಿಕರಿಗೆ ಮಾತ್ರ ಸಂತೋಷದ ಸಂಗತಿ ಆಗಿರಲಿಲ್ಲ. ವಿಶ್ವಾದ್ಯಂತ ಇರುವ ಅನಿವಾಸಿ ಭಾರತೀಯರು ಕೂಡ ಈ ದಿನ ಸಂಭ್ರಮವನ್ನು ಆಚರಿಸಿಕೊಂಡರು. ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನಲ್ಲಿ ತನ್ನ ಇರುವನ್ನು ಸಾಬೀತುಪಡಿಸುತ್ತಲೇ ಭಾರತೀಯರು ಹರ್ಷೋದ್ಧಾರಗಳಿಂದ ಅದನ್ನು ಸಂಭ್ರಮಿಸಿದರು. ಈ ಸಂದರ್ಬದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೆಂದ್ರ ಪಡ್ನವೀಸ್ ಅವರು ಜಪಾನಿನ ಟೋಕಿಯೋದಲ್ಲಿ ಇದ್ದರು. ಅಲ್ಲಿ ಇದರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿರುವ ಸಭಾಂಗಣದಲ್ಲಿ ಹಾಕಿರುವ ಬೃಹತ್ ಪರದೆಯ ಮೇಲೆ ಅವರು ಅನಿವಾಸಿ ಭಾರತೀಯರೊಂದಿಗೆ ಕುಳಿತು ಚಂದ್ರಯಾನ 3 ಇದರ ಸಾರ್ಥಕ ಕ್ಷಣಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಸಭಾಂಗಣದಲ್ಲಿ ಹನುಮಾನ್ ಚಾಲೀಸಾ ಪಠಣ ನಡೆಸಲಾಯಿತು. ಚಂದ್ರಯಾನ 3 ಯಶಸ್ವಿಯಾಗಿ ನಡೆಯಲಿ ಎಂದು ಹನುಮಾನ್ ಚಾಲೀಸಾ ಪಠಿಸುತ್ತಾ ದೇವರನ್ನು ಪ್ರಾರ್ಥಿಸಲಾಯಿತು. ಇದರ ವಿಡಿಯೋವನ್ನು ದೇವೆಂದ್ರ ಪಡ್ನವೀಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೈ ಭಜರಂಗ ಬಲಿ, ವಂದೇ ಮಾತರಂ ಎಂದು ಬರೆದುಕೊಂಡಿರುವ ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿರಲಿ ಇಂತಹ ದೃಶ್ಯವನ್ನು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಈ ಉತ್ಸಾಹ ಮತ್ತು ಹುಮ್ಮಸ್ಸನ್ನು ನೋಡಿ ಖುಷಿಯಾಯಿತು ಎನ್ನುವ ಅರ್ಥದ ಸಾಲುಗಳನ್ನು ಬರೆದಿದ್ದಾರೆ. ಭಾರತೀಯ ಹಿಂದೂಗಳು ಜಗತ್ತಿನಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ತಮ್ಮ ಸಂಸ್ಕೃತಿಯನ್ನು ಮರೆಯುವುದಿಲ್ಲ ಎನ್ನುವುದಕ್ಕೆ ಹನುಮಾನ್ ಚಾಲೀಸಾ ಪಠಣವೇ ಸಾಕ್ಷಿ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search