• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹನುಮಾನ್ ಚಾಲೀಸಾ ಪಠಿಸುತ್ತಾ ಚಂದ್ರಯಾನ 3 ವೀಕ್ಷಿಸಿದ ಜಪಾನ್!

Tulunadu News Posted On August 24, 2023
0


0
Shares
  • Share On Facebook
  • Tweet It

ಭಾರತದ ಹೆಮ್ಮೆಯ ಚಂದ್ರಯಾನ-3 ಅನ್ನು ವಿಶ್ವವೇ ನಿಬ್ಬೆರಗಾಗಿ ಬುಧವಾರ ವೀಕ್ಷಿಸಿತು. ಇದು ಕೇವಲ ಭಾರತದಲ್ಲಿರುವ ನಾಗರಿಕರಿಗೆ ಮಾತ್ರ ಸಂತೋಷದ ಸಂಗತಿ ಆಗಿರಲಿಲ್ಲ. ವಿಶ್ವಾದ್ಯಂತ ಇರುವ ಅನಿವಾಸಿ ಭಾರತೀಯರು ಕೂಡ ಈ ದಿನ ಸಂಭ್ರಮವನ್ನು ಆಚರಿಸಿಕೊಂಡರು. ಬುಧವಾರ ಸಂಜೆ 6 ಗಂಟೆಯ ಸುಮಾರಿಗೆ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನಲ್ಲಿ ತನ್ನ ಇರುವನ್ನು ಸಾಬೀತುಪಡಿಸುತ್ತಲೇ ಭಾರತೀಯರು ಹರ್ಷೋದ್ಧಾರಗಳಿಂದ ಅದನ್ನು ಸಂಭ್ರಮಿಸಿದರು. ಈ ಸಂದರ್ಬದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೆಂದ್ರ ಪಡ್ನವೀಸ್ ಅವರು ಜಪಾನಿನ ಟೋಕಿಯೋದಲ್ಲಿ ಇದ್ದರು. ಅಲ್ಲಿ ಇದರ ವೀಕ್ಷಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.

ಅಲ್ಲಿರುವ ಸಭಾಂಗಣದಲ್ಲಿ ಹಾಕಿರುವ ಬೃಹತ್ ಪರದೆಯ ಮೇಲೆ ಅವರು ಅನಿವಾಸಿ ಭಾರತೀಯರೊಂದಿಗೆ ಕುಳಿತು ಚಂದ್ರಯಾನ 3 ಇದರ ಸಾರ್ಥಕ ಕ್ಷಣಗಳನ್ನು ವೀಕ್ಷಿಸಿದರು. ಈ ಸಮಯದಲ್ಲಿ ಸಭಾಂಗಣದಲ್ಲಿ ಹನುಮಾನ್ ಚಾಲೀಸಾ ಪಠಣ ನಡೆಸಲಾಯಿತು. ಚಂದ್ರಯಾನ 3 ಯಶಸ್ವಿಯಾಗಿ ನಡೆಯಲಿ ಎಂದು ಹನುಮಾನ್ ಚಾಲೀಸಾ ಪಠಿಸುತ್ತಾ ದೇವರನ್ನು ಪ್ರಾರ್ಥಿಸಲಾಯಿತು. ಇದರ ವಿಡಿಯೋವನ್ನು ದೇವೆಂದ್ರ ಪಡ್ನವೀಸ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜೈ ಭಜರಂಗ ಬಲಿ, ವಂದೇ ಮಾತರಂ ಎಂದು ಬರೆದುಕೊಂಡಿರುವ ಅವರು ಪ್ರಪಂಚದ ಯಾವುದೇ ಮೂಲೆಯಲ್ಲಿರಲಿ ಇಂತಹ ದೃಶ್ಯವನ್ನು ಮಿಸ್ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. ಈ ಉತ್ಸಾಹ ಮತ್ತು ಹುಮ್ಮಸ್ಸನ್ನು ನೋಡಿ ಖುಷಿಯಾಯಿತು ಎನ್ನುವ ಅರ್ಥದ ಸಾಲುಗಳನ್ನು ಬರೆದಿದ್ದಾರೆ. ಭಾರತೀಯ ಹಿಂದೂಗಳು ಜಗತ್ತಿನಲ್ಲಿ ಎಲ್ಲಿಯೇ ವಾಸಿಸುತ್ತಿರಲಿ, ತಮ್ಮ ಸಂಸ್ಕೃತಿಯನ್ನು ಮರೆಯುವುದಿಲ್ಲ ಎನ್ನುವುದಕ್ಕೆ ಹನುಮಾನ್ ಚಾಲೀಸಾ ಪಠಣವೇ ಸಾಕ್ಷಿ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search