• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ಜೈ ಭೀಮ್ ಸಿನೆಮಾಕ್ಕೆ ರಾಷ್ಟ್ರಪ್ರಶಸ್ತಿ ಸಿಗಬೇಕಿತ್ತು. ಯಾಕೆಂದರೆ…

Tulunadu News Posted On August 25, 2023
0


0
Shares
  • Share On Facebook
  • Tweet It

ಸಿನೆಮಾಗಳಿಗೆ ನೀಡುವ ರಾಷ್ಟ್ರೀಯ ಪ್ರಶಸ್ತಿಗಳ ಘೋಷಣೆಯಾಗಿದೆ. 69 ನೇ ನ್ಯಾಶನಲ್ ಫಿಲಂ ಆವಾರ್ಡ್ ಗಳಲ್ಲಿ ಜೈ ಭೀಮ್ ಸಿನೆಮಾಕ್ಕೆ ಯಾವುದೇ ಕ್ಯಾಟಗರಿಯಲ್ಲಿ ಒಂದೇ ಒಂದು ಪ್ರಶಸ್ತಿ ಕೂಡ ಲಭಿಸಿಲ್ಲ ಎನ್ನುವುದಕ್ಕೆ ತೆಲುಗು ಸ್ಟಾರ್ ನಾನಿ ಸಾಮಾಜಿಕ ಜಾಲತಾಣಗಳಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಹಿಂದುಳಿದವರ ಮೇಲೆ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ನಡೆಸುವ ದಬ್ಬಾಳಿಕೆಯ ಕಥೆ ಹೊಂದಿರುವ ಜೈ ಭೀಮ್ ಸಿನೆಮಾಕ್ಕೆ ರಾಷ್ಟ್ರೀಯ ಪ್ರಶಸ್ತಿ ಬರಬೇಕಿತ್ತು ಎಂದು ಸಿನಿಪ್ರಿಯರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ಜೈ ಭೀಮ್ ಕಣ್ಣು ತೆರೆಸುವ ಸಿನೆಮಾ. ರಾಜ್ಯದ ಗಡಿಭಾಗದಲ್ಲಿ ವಾಸಿಸುವ ಜನರು ಅದು ಆದಿವಾಸಿ ಎಂದು ಬೇಕಾದರೆ ಅಂದುಕೊಳ್ಳಿ, ಸರಕಾರದ ದಾಖಲೆಗಳಲ್ಲಿರುವ ಹಿಂದುಳಿದ ಜಾತಿಯವರು ಎಂದು ಅಂದುಕೊಳ್ಳಿ, ಗಿರಿಜನರು ಎಂದು ಅಂದುಕೊಳ್ಳಿ ಅವರು ಹೇಗೆ ಸುಲಭವಾಗಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗುತ್ತಾರೆ ಎನ್ನುವುದು ನಗರದಲ್ಲಿ ವಾಸಿಸುವ ಸುಶಿಕ್ಷಿತರೆನಿಸಿಕೊಂಡ ಜನರಿಗೆ ಗೊತ್ತೇ ಆಗುವುದಿಲ್ಲ.

ಕಥೆ ನಡೆಯುವುದೇ ಹಳ್ಳಿಯಂಚಿನ ಪ್ರದೇಶದಲ್ಲಿ. ಅಲ್ಲೊಂದು ಹಳೆ ಪೊಲೀಸ್ ಠಾಣೆ. ಅದರ ಠಾಣಾ ವ್ಯಾಪ್ತಿಯಲ್ಲಿ ಪ್ರಮುಖರೊಬ್ಬರ ಮನೆಯಲ್ಲಿ ಬಂಗಾರ ಕದ್ದುಹೋಗುತ್ತದೆ. ಅವರು ಪೊಲೀಸರಿಗೆ ದೂರು ಕೊಡುತ್ತಾರೆ. ಅದನ್ನು ಕದ್ದವರು ಪೊಲೀಸರಿಗೆ ಅದರಲ್ಲಿ ಪಾಲು ಕೊಟ್ಟು ತಮ್ಮನ್ನು ಬಂಧಿಸದಂತೆ ನೋಡಿಕೊಳ್ಳುತ್ತಾರೆ. ಕಳ್ಳತನ ಯಾವುದಾದರೂ ಪಾಪದವರ ಮೇಲೆ ಹಾಕಿ ಬಂಧಿಸಲು ಪೊಲೀಸರು ಹೊರಡುತ್ತಾರೆ. ಇಂತಹ ಸಂದರ್ಭದಲ್ಲಿ ಅವರು ಊರಂಚಿನಲ್ಲಿ ಗುಡಿಸಲು ಕಟ್ಟಿ ಬದುಕು ಸಾಗಿಸುವ ಒಂದು ಗುಂಪು ಕಣ್ಣಿಗೆ ಬೀಳುತ್ತದೆ. ಅದರಲ್ಲಿ ಮೂವರನ್ನು ಎತ್ತಿ ಹಾಕಿ ತಂದು ಕಳ್ಳತನ ಒಪ್ಪಿಕೊಳ್ಳುವಂತೆ ಥರ್ಡ್ ರೇಟ್ ಪೊಲೀಸ್ ಟಾರ್ಚರ್ ನೀಡುತ್ತಾರೆ. ಪೊಲೀಸರ ಹೊಡೆತ ತಾಳಲಾರದೇ ರಾತ್ರಿ ಒಬ್ಬ ಲಾಕಪ್ಪಿನಲ್ಲಿ ಪ್ರಾಣ ಬಿಡುತ್ತಾನೆ. ಅವನನ್ನು ಊರ ಸರಹದ್ದಿನಲ್ಲಿ ಹಾಕಿ ಅಪಘಾತ ಎಂದು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತದೆ. ಉಳಿದ ಇಬ್ಬರನ್ನು ಬೇರೆ ಪೊಲೀಸ್ ಸ್ಟೇಶನ್ ಲಾಕಪ್ಪಿಗೆ ಹಾಕಿ ಅವರು ಎಸ್ಕೇಪ್ ಆದರು ಎಂದು ಕಥೆ ಕಟ್ಟಲಾಗುತ್ತದೆ.

ಸತ್ತವನ ಬಸುರಿ ಹೆಂಡತಿಗೆ ನ್ಯಾಯ ಕೊಡಿಸಲು ನಾಯಕ ಸೂರ್ಯ ಹೇಗೆ ಹೋರಾಡುತ್ತಾನೆ. ಪ್ರಾಣವನ್ನು ಪಣಕ್ಕಿಟ್ಟು ಅವಳಿಗೆ ಮತ್ತು ಅವಳ ಮಗುವಿಗೆ ನ್ಯಾಯ ಕೊಡಿಸುತ್ತಾನೆ ಎನ್ನುವುದನ್ನು ನಿರ್ದೇಶಕ ಗ್ಯಾನವೆಲ್ ಅದ್ಭುತವಾಗಿ ಬರೆದು ಚಿತ್ರೀಕರಿಸಿದ್ದಾರೆ. ನಾಯಕ ನಟ ಸೂರ್ಯ ಎಂದಿನಂತೆ ಶಾಂತ ನಟನೆ. ಪೋಷಕ ಪಾತ್ರಧಾರಿಗಳು ಕಣ್ಣ ಮುಂದೆನೆ ಇದ್ದಾರೋ ಎನಿಸುವಂತೆ ನಟನೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ನೈಜ ಕಥಾ ಎಳೆಯನ್ನು ಅಚ್ಚುಕಟ್ಟಾದ ಚಿತ್ರಕಥೆಯ ಮೂಲಕ ಜನರಿಗೆ ತಲುಪಿಸಿದ ಜೈ ಭೀಮ್ ಗೆ ಕಥೆ ಸಹಿತ ಯಾವುದೇ ವಿಭಾಗದಲ್ಲಿಯೂ ರಾಷ್ಟ್ರೀಯ ಪ್ರಶಸ್ತಿ ಸಿಗದೇ ಇರುವುದು ಚಿತ್ರಪ್ರೇಮಿಗಳಿಗೆ ನಿರಾಸೆ ಮೂಡಿಸಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search