• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆ ಫೋಟೋ ಶೇರ್ ಮಾಡಿ ಸಂಭ್ರಮಿಸಿದ ಸುಮಲತಾ!

Tulunadu News Posted On August 25, 2023
0


0
Shares
  • Share On Facebook
  • Tweet It

ಬೆಲೆಕಟ್ಟಲಾಗದ ಫೋಟೋ ಇವತ್ತು ಸಿಕ್ಕಿತು ಎಂದು ಸಂಭ್ರಮ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್. 2006 ರಲ್ಲಿ ಅಂಬರೀಶ್ ಅವರು ಬೆಂಗಳೂರಿನ ಕೆಎಸ್ ಸಿಎ ಸ್ಟೇಡಿಯಂನಲ್ಲಿ ಎಂ.ಎಸ್.ಧೋನಿಯವರಿಗೆ ವೈಯಕ್ತಿಕವಾಗಿ ಎರಡು ಲಕ್ಷ ರೂಪಾಯಿ ಚೆಕ್ ನೀಡಿ ಶುಭ ಹಾರೈಸಿದ ಫೋಟೋವನ್ನು ಸುಮಲತಾ ಅಂಬರೀಶ್ ಅವರು “ಎಕ್ಸ್”ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಂಬರೀಶ್ ಅವರು ಅದರ ಮೊದಲು ಒಮ್ಮೆ ಧೋನಿಯವರ ತಂದೆಯವರ ಸಂದರ್ಶವನ್ನು ಟಿವಿಯಲ್ಲಿ ನೋಡುತ್ತಿದ್ದರಂತೆ. ಆ ದಿನಗಳಲ್ಲಿ ಧೋನಿ ಇನ್ನು ಇಷ್ಟು ಪ್ರಸಿದ್ಧಿಗೆ ಬಂದಿರಲಿಲ್ಲ. ಉದಯೋನ್ಮುಖ ಆಟಗಾರರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದರು. ಆಗ ಅವರನ್ನು ನೋಡಲು ಮನೆಗೆ ಅತಿಥಿಗಳು ಬರುತ್ತಿದ್ದರು. ಆದರೆ ಬಂದವರಿಗೆ ಕುಳಿತುಕೊಳ್ಳಲು ಸರಿಯಾಗಿ ಆಸನದ ವ್ಯವಸ್ಥೆ ಇರಲಿಲ್ಲ. ಈ ಮಾತನ್ನು ಧೋನಿಯವರ ತಂದೆಯವರು ಹೇಳಿದ್ದನ್ನು ಕೇಳಿ ಅಂಬರೀಶ್ ಭಾವುಕರಾಗಿದ್ದರಂತೆ.

ದೊಡ್ಡ ಕ್ರೀಡಾಪ್ರೇಮಿಯಾಗಿದ್ದ ಅಂಬರೀಶ್ ಅವರು ಕ್ರಿಕೆಟ್ ಆಟದ ಬಗ್ಗೆ ಉತ್ತಮ ಜ್ಞಾನವನ್ನು ಕೂಡ ಹೊಂದಿದ್ದರು. ಅಂಬರೀಶ್ ಅವರು ಅಂದು ಧೋನಿಯವರಿಗೆ ಚೆಕ್ ಕೊಟ್ಟು ಪ್ರೋತ್ಸಾಹಿಸಿದ ಫೋಟೋ ಕಳೆದುಹೋಗಿದ್ದು, ಬಹಳ ಕಾಲದ ನಂತರ ಸುಮಲತಾ ಅವರಿಗೆ ಸಿಕ್ಕಿದೆ. ಇದು ಆವತ್ತಿನ ದಿನಗಳನ್ನು ಅವರಿಗೆ ನೆನಪಿಸಿದೆ. ಈ ಫೋಟೋವನ್ನು ಅವರು ಧೋನಿಯವರಿಗೂ ಟ್ಯಾಗ್ ಮಾಡಿದ್ದು, “ಈ ಘಳಿಗೆ ನಿಮಗೆ ನೆನಪಿರಲಿಕ್ಕಿಲ್ಲ, ಆದರೆ ನಿಮ್ಮ ಸಾಧನೆ ನಿಜಕ್ಕೂ ದೇಶಕ್ಕೆ ಹೆಮ್ಮೆ ತರುವಂತದ್ದು” ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search