• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹಳೆ ಫೋಟೋ ಶೇರ್ ಮಾಡಿ ಸಂಭ್ರಮಿಸಿದ ಸುಮಲತಾ!

Tulunadu News Posted On August 25, 2023
0


0
Shares
  • Share On Facebook
  • Tweet It

ಬೆಲೆಕಟ್ಟಲಾಗದ ಫೋಟೋ ಇವತ್ತು ಸಿಕ್ಕಿತು ಎಂದು ಸಂಭ್ರಮ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್. 2006 ರಲ್ಲಿ ಅಂಬರೀಶ್ ಅವರು ಬೆಂಗಳೂರಿನ ಕೆಎಸ್ ಸಿಎ ಸ್ಟೇಡಿಯಂನಲ್ಲಿ ಎಂ.ಎಸ್.ಧೋನಿಯವರಿಗೆ ವೈಯಕ್ತಿಕವಾಗಿ ಎರಡು ಲಕ್ಷ ರೂಪಾಯಿ ಚೆಕ್ ನೀಡಿ ಶುಭ ಹಾರೈಸಿದ ಫೋಟೋವನ್ನು ಸುಮಲತಾ ಅಂಬರೀಶ್ ಅವರು “ಎಕ್ಸ್”ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಂಬರೀಶ್ ಅವರು ಅದರ ಮೊದಲು ಒಮ್ಮೆ ಧೋನಿಯವರ ತಂದೆಯವರ ಸಂದರ್ಶವನ್ನು ಟಿವಿಯಲ್ಲಿ ನೋಡುತ್ತಿದ್ದರಂತೆ. ಆ ದಿನಗಳಲ್ಲಿ ಧೋನಿ ಇನ್ನು ಇಷ್ಟು ಪ್ರಸಿದ್ಧಿಗೆ ಬಂದಿರಲಿಲ್ಲ. ಉದಯೋನ್ಮುಖ ಆಟಗಾರರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದರು. ಆಗ ಅವರನ್ನು ನೋಡಲು ಮನೆಗೆ ಅತಿಥಿಗಳು ಬರುತ್ತಿದ್ದರು. ಆದರೆ ಬಂದವರಿಗೆ ಕುಳಿತುಕೊಳ್ಳಲು ಸರಿಯಾಗಿ ಆಸನದ ವ್ಯವಸ್ಥೆ ಇರಲಿಲ್ಲ. ಈ ಮಾತನ್ನು ಧೋನಿಯವರ ತಂದೆಯವರು ಹೇಳಿದ್ದನ್ನು ಕೇಳಿ ಅಂಬರೀಶ್ ಭಾವುಕರಾಗಿದ್ದರಂತೆ.

ದೊಡ್ಡ ಕ್ರೀಡಾಪ್ರೇಮಿಯಾಗಿದ್ದ ಅಂಬರೀಶ್ ಅವರು ಕ್ರಿಕೆಟ್ ಆಟದ ಬಗ್ಗೆ ಉತ್ತಮ ಜ್ಞಾನವನ್ನು ಕೂಡ ಹೊಂದಿದ್ದರು. ಅಂಬರೀಶ್ ಅವರು ಅಂದು ಧೋನಿಯವರಿಗೆ ಚೆಕ್ ಕೊಟ್ಟು ಪ್ರೋತ್ಸಾಹಿಸಿದ ಫೋಟೋ ಕಳೆದುಹೋಗಿದ್ದು, ಬಹಳ ಕಾಲದ ನಂತರ ಸುಮಲತಾ ಅವರಿಗೆ ಸಿಕ್ಕಿದೆ. ಇದು ಆವತ್ತಿನ ದಿನಗಳನ್ನು ಅವರಿಗೆ ನೆನಪಿಸಿದೆ. ಈ ಫೋಟೋವನ್ನು ಅವರು ಧೋನಿಯವರಿಗೂ ಟ್ಯಾಗ್ ಮಾಡಿದ್ದು, “ಈ ಘಳಿಗೆ ನಿಮಗೆ ನೆನಪಿರಲಿಕ್ಕಿಲ್ಲ, ಆದರೆ ನಿಮ್ಮ ಸಾಧನೆ ನಿಜಕ್ಕೂ ದೇಶಕ್ಕೆ ಹೆಮ್ಮೆ ತರುವಂತದ್ದು” ಎಂದು ಬರೆದಿದ್ದಾರೆ.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search