• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹಳೆ ಫೋಟೋ ಶೇರ್ ಮಾಡಿ ಸಂಭ್ರಮಿಸಿದ ಸುಮಲತಾ!

Tulunadu News Posted On August 25, 2023


  • Share On Facebook
  • Tweet It

ಬೆಲೆಕಟ್ಟಲಾಗದ ಫೋಟೋ ಇವತ್ತು ಸಿಕ್ಕಿತು ಎಂದು ಸಂಭ್ರಮ ಹಂಚಿಕೊಂಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್. 2006 ರಲ್ಲಿ ಅಂಬರೀಶ್ ಅವರು ಬೆಂಗಳೂರಿನ ಕೆಎಸ್ ಸಿಎ ಸ್ಟೇಡಿಯಂನಲ್ಲಿ ಎಂ.ಎಸ್.ಧೋನಿಯವರಿಗೆ ವೈಯಕ್ತಿಕವಾಗಿ ಎರಡು ಲಕ್ಷ ರೂಪಾಯಿ ಚೆಕ್ ನೀಡಿ ಶುಭ ಹಾರೈಸಿದ ಫೋಟೋವನ್ನು ಸುಮಲತಾ ಅಂಬರೀಶ್ ಅವರು “ಎಕ್ಸ್”ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಅಂಬರೀಶ್ ಅವರು ಅದರ ಮೊದಲು ಒಮ್ಮೆ ಧೋನಿಯವರ ತಂದೆಯವರ ಸಂದರ್ಶವನ್ನು ಟಿವಿಯಲ್ಲಿ ನೋಡುತ್ತಿದ್ದರಂತೆ. ಆ ದಿನಗಳಲ್ಲಿ ಧೋನಿ ಇನ್ನು ಇಷ್ಟು ಪ್ರಸಿದ್ಧಿಗೆ ಬಂದಿರಲಿಲ್ಲ. ಉದಯೋನ್ಮುಖ ಆಟಗಾರರಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದರು. ಆಗ ಅವರನ್ನು ನೋಡಲು ಮನೆಗೆ ಅತಿಥಿಗಳು ಬರುತ್ತಿದ್ದರು. ಆದರೆ ಬಂದವರಿಗೆ ಕುಳಿತುಕೊಳ್ಳಲು ಸರಿಯಾಗಿ ಆಸನದ ವ್ಯವಸ್ಥೆ ಇರಲಿಲ್ಲ. ಈ ಮಾತನ್ನು ಧೋನಿಯವರ ತಂದೆಯವರು ಹೇಳಿದ್ದನ್ನು ಕೇಳಿ ಅಂಬರೀಶ್ ಭಾವುಕರಾಗಿದ್ದರಂತೆ.

ದೊಡ್ಡ ಕ್ರೀಡಾಪ್ರೇಮಿಯಾಗಿದ್ದ ಅಂಬರೀಶ್ ಅವರು ಕ್ರಿಕೆಟ್ ಆಟದ ಬಗ್ಗೆ ಉತ್ತಮ ಜ್ಞಾನವನ್ನು ಕೂಡ ಹೊಂದಿದ್ದರು. ಅಂಬರೀಶ್ ಅವರು ಅಂದು ಧೋನಿಯವರಿಗೆ ಚೆಕ್ ಕೊಟ್ಟು ಪ್ರೋತ್ಸಾಹಿಸಿದ ಫೋಟೋ ಕಳೆದುಹೋಗಿದ್ದು, ಬಹಳ ಕಾಲದ ನಂತರ ಸುಮಲತಾ ಅವರಿಗೆ ಸಿಕ್ಕಿದೆ. ಇದು ಆವತ್ತಿನ ದಿನಗಳನ್ನು ಅವರಿಗೆ ನೆನಪಿಸಿದೆ. ಈ ಫೋಟೋವನ್ನು ಅವರು ಧೋನಿಯವರಿಗೂ ಟ್ಯಾಗ್ ಮಾಡಿದ್ದು, “ಈ ಘಳಿಗೆ ನಿಮಗೆ ನೆನಪಿರಲಿಕ್ಕಿಲ್ಲ, ಆದರೆ ನಿಮ್ಮ ಸಾಧನೆ ನಿಜಕ್ಕೂ ದೇಶಕ್ಕೆ ಹೆಮ್ಮೆ ತರುವಂತದ್ದು” ಎಂದು ಬರೆದಿದ್ದಾರೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search