• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುನೀತ್ ಕೆರೆಹಳ್ಳಿ ಹೆಬಿಯಸ್ ಕಾರ್ಪಸ್, ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್!

Tulunadu News Posted On August 25, 2023
0


0
Shares
  • Share On Facebook
  • Tweet It

ತನ್ನನ್ನು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಬಂಧಿಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಸಲ್ಲಿಸಿದ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್ ನ್ಯಾಯಪೀಠ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾನೂನು ಮತ್ತು ಶಾಂತಿ ಪಾಲನಾ ವಿಭಾಗದ ಅಧೀನ ಕಾರ್ಯದರ್ಶಿ ಸೇರಿದಂತೆ ಒಟ್ಟು ಆರು ಪ್ರತಿವಾದಿಗಳಿಗೆ ನೋಟಿಸು ಜಾರಿಗೊಳಿಸಲು ಆದೇಶಿಸಿದೆ.
ಪುನೀತ್ ಪರ ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ಅವರು ವಾದಿಸಿದರು. ನ್ಯಾಯಪೀಠದ ಎದುರು ಸವಿಸ್ತಾರವಾಗಿ ವಾದ ಮಂಡಿಸಿದ ಎಂ ಅರುಣ್ ಶ್ಯಾಮ್ ಅವರು “ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅದಕ್ಕಾಗಿ ರಾಷ್ಟ್ರ ರಕ್ಷಣಾ ಪಡೆ ಹೆಸರಿನ ಸಂಘಟನೆಯನ್ನು ಕಟ್ಟಿದ್ದಾರೆ. ದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ವಿರುದ್ಧ ದುರುದ್ದೇಶ ಪೂರ್ವಕವಾಗಿ ಹಲವು ಕ್ರಿಮಿನಲ್ ಪ್ರಕರಣಗಳನ್ನು ಹೂಡಲಾಗಿದೆ. ರಾಜಕೀಯ ದ್ವೇಷದ ಕಾರಣಕ್ಕೆ ಅವರನ್ನು ಅಗಸ್ಟ್ 11 ರಂದು ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಹೇಳಿದರು.

“ನಗರ ಪೊಲೀಸ್ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಅವರ ವಿರುದ್ಧ ಬಂಧನದ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಅರ್ಜಿದಾರರು ನೀಡಿದ್ದ ಮನವಿಯನ್ನು ಪರಿಗಣಿಸಿಲ್ಲ. ಇದು ಏಕಪಕ್ಷೀಯ ನಡೆ. ಹಾಗಾಗಿ ಅವರನ್ನು ಬಂಧಿಸಲು ಹೊರಡಿಸಿರುವ ಆದೇಶ ಅಕ್ರಮವಾಗಿದ್ದು, ಅದನ್ನು ರದ್ದುಪಡಿಸಬೇಕು” ಎಂದು ಅವರು ಕೋರಿದರು. ಅವರ ಕೋರಿಕೆಯನ್ನು ಹೈಕೋರ್ಟ್ ಮನ್ನಿಸಿರುವುದು ಪುನೀತ್ ಕೆರೆಹಳ್ಳಿ ಪ್ರಕರಣದಲ್ಲಿ ವಾದಿಗೆ ಸಿಕ್ಕಿರುವ ಆರಂಭಿಕ ಜಯ ಎಂದು ಹೇಳಬಹುದು

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!

  • Privacy Policy
  • Contact
© Tulunadu Infomedia.

Press enter/return to begin your search