• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪುನೀತ್ ಕೆರೆಹಳ್ಳಿ ಹೆಬಿಯಸ್ ಕಾರ್ಪಸ್, ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ನೋಟಿಸ್!

Tulunadu News Posted On August 25, 2023
0


0
Shares
  • Share On Facebook
  • Tweet It

ತನ್ನನ್ನು ಗೂಂಡಾ ಕಾಯ್ದೆಯಡಿ ಅಕ್ರಮವಾಗಿ ಬಂಧಿಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಸಲ್ಲಿಸಿದ ಹೆಬಿಯಸ್ ಕಾರ್ಪಸ್ ಅರ್ಜಿಯನ್ನು ವಿಚಾರಿಸಿದ ಹೈಕೋರ್ಟ್ ನ್ಯಾಯಪೀಠ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾನೂನು ಮತ್ತು ಶಾಂತಿ ಪಾಲನಾ ವಿಭಾಗದ ಅಧೀನ ಕಾರ್ಯದರ್ಶಿ ಸೇರಿದಂತೆ ಒಟ್ಟು ಆರು ಪ್ರತಿವಾದಿಗಳಿಗೆ ನೋಟಿಸು ಜಾರಿಗೊಳಿಸಲು ಆದೇಶಿಸಿದೆ.
ಪುನೀತ್ ಪರ ಹಿರಿಯ ವಕೀಲ ಮತ್ತು ಮಾಜಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ಅವರು ವಾದಿಸಿದರು. ನ್ಯಾಯಪೀಠದ ಎದುರು ಸವಿಸ್ತಾರವಾಗಿ ವಾದ ಮಂಡಿಸಿದ ಎಂ ಅರುಣ್ ಶ್ಯಾಮ್ ಅವರು “ಅರ್ಜಿದಾರರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಅದಕ್ಕಾಗಿ ರಾಷ್ಟ್ರ ರಕ್ಷಣಾ ಪಡೆ ಹೆಸರಿನ ಸಂಘಟನೆಯನ್ನು ಕಟ್ಟಿದ್ದಾರೆ. ದೇಶಕ್ಕಾಗಿ ಹೋರಾಡುವ ಸಮಾನ ಮನಸ್ಕರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ವಿರುದ್ಧ ದುರುದ್ದೇಶ ಪೂರ್ವಕವಾಗಿ ಹಲವು ಕ್ರಿಮಿನಲ್ ಪ್ರಕರಣಗಳನ್ನು ಹೂಡಲಾಗಿದೆ. ರಾಜಕೀಯ ದ್ವೇಷದ ಕಾರಣಕ್ಕೆ ಅವರನ್ನು ಅಗಸ್ಟ್ 11 ರಂದು ಅಕ್ರಮವಾಗಿ ಬಂಧಿಸಲಾಗಿದೆ” ಎಂದು ಹೇಳಿದರು.

“ನಗರ ಪೊಲೀಸ್ ಆಯುಕ್ತರು ಯಾವುದೇ ವಿವೇಚನೆ ಬಳಸದೆ ಏಕಾಏಕಿ ಗೂಂಡಾ ಕಾಯ್ದೆಯಡಿ ಅವರ ವಿರುದ್ಧ ಬಂಧನದ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಅರ್ಜಿದಾರರು ನೀಡಿದ್ದ ಮನವಿಯನ್ನು ಪರಿಗಣಿಸಿಲ್ಲ. ಇದು ಏಕಪಕ್ಷೀಯ ನಡೆ. ಹಾಗಾಗಿ ಅವರನ್ನು ಬಂಧಿಸಲು ಹೊರಡಿಸಿರುವ ಆದೇಶ ಅಕ್ರಮವಾಗಿದ್ದು, ಅದನ್ನು ರದ್ದುಪಡಿಸಬೇಕು” ಎಂದು ಅವರು ಕೋರಿದರು. ಅವರ ಕೋರಿಕೆಯನ್ನು ಹೈಕೋರ್ಟ್ ಮನ್ನಿಸಿರುವುದು ಪುನೀತ್ ಕೆರೆಹಳ್ಳಿ ಪ್ರಕರಣದಲ್ಲಿ ವಾದಿಗೆ ಸಿಕ್ಕಿರುವ ಆರಂಭಿಕ ಜಯ ಎಂದು ಹೇಳಬಹುದು

0
Shares
  • Share On Facebook
  • Tweet It




Trending Now
ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
Tulunadu News October 29, 2025
ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
Tulunadu News October 29, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
  • Popular Posts

    • 1
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 2
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • 3
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 4
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 5
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!

  • Privacy Policy
  • Contact
© Tulunadu Infomedia.

Press enter/return to begin your search