• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಭೇಟಿಯಾದ ಬಿಜೆಪಿಯ ಇನ್ನೊಬ್ಬ ಶಾಸಕ!

Tulunadu News Posted On August 26, 2023
0


0
Shares
  • Share On Facebook
  • Tweet It

ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿಯ ಒಬ್ಬೊಬ್ಬರೇ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿದ್ದಾರೆ. ಮೊದಲಿಗೆ ಎಸ್ ಟಿ ಸೋಮಶೇಖರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾಧ್ಯಮಗಳು ಕೇಳಿದ್ದಕ್ಕೆ ಕ್ಷೇತ್ರದ ಪ್ರಗತಿಗಾಗಿ ಭೇಟಿಯಾಗಿದ್ದೆ ಎಂದು ಹೇಳಿದ್ದರು. ಅದಾಗಿ ಕೆಲವೇ ಗಂಟೆಗಳಲ್ಲಿ ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಕೋಟ್ಯಾಂತರ ರೂಪಾಯಿ ಅನುದಾನವನ್ನು ಸಿಎಂ ಬಿಡುಗಡೆಗೊಳಿಸಿದರು.

 

ತಾವು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಸೋಮಶೇಖರ್ ಅವರು ಹೇಳುತ್ತಲೇ ಬರುತ್ತಿದ್ದರಾದರೂ ಅವರನ್ನು ಲೋಕಸಭೆಗೆ ಮತ್ತು ಅವರ ಮಗನನ್ನು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿಸುವ ಮಾತುಕತೆ ನಡೆದಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಆ ವಿಷಯ ಚರ್ಚೆಯಲ್ಲಿ ಇರುವಂತೆ ಮಾಜಿ ಶಾಸಕ, ಬಿ.ಎಸ್ ವೈ ಆಪ್ತ ಮತ್ತು ಅವರ ರಾಜಕೀಯ ಕಾರ್ಯದರ್ಶಿಯೂ ಆಗಿದ್ದ ಎಂಪಿ ರೇಣುಕಾಚಾರ್ಯ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಕಠಿಣ ಮಾತುಗಳಿಂದ ಬಿಜೆಪಿಯನ್ನು ಅವರು ಟೀಕಿಸುತ್ತಾ ಬರುತ್ತಿದ್ದರು. ಹಾಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಹೇಳಿದರೂ ಅವರು ಸೊಪ್ಪು ಹಾಕಿರಲಿಲ್ಲ. ಸಭೆಗೆ ಕರೆದಾಗಲೂ ಗೈರು ಹಾಜರಾಗಿ ತಮ್ಮ ಕೋಪವನ್ನು ಪ್ರದರ್ಶಿಸಿದ್ದರು. ಅದರ ನಂತರ ಅವರು ಬಿಜೆಪಿಯಿಂದ ಒಂದು ಕಾಲು ಹೊರಗೆ ಇಟ್ಟಿದ್ದಾರೆ ಎಂದೇ ವಿಶ್ಲೇಷಿಸಲಾಗಿತ್ತು.

 

ಈಗ ಇದೆಲ್ಲವೂ ನಡೆಯುತ್ತಿರುವಾಗಲೇ ಬಿಜೆಪಿಯ ಮತ್ತೊಬ್ಬ ಶಾಸಕ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಾವು ತಮ್ಮ ಕ್ಷೇತ್ರ ಯಲ್ಲಾಪುರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಕೋರಲು ಹೋಗಿರುವುದಾಗಿ ಮಾಧ್ಯಮಗಳಿಗೆ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಹೀಗೆ ಒಬ್ಬೊಬ್ಬರೇ ಬಿಜೆಪಿ ಶಾಸಕರು, ಮಾಜಿ ಶಾಸಕರು ಸಿದ್ಧರಾಮಯ್ಯನವರನ್ನು ಏನಾದರೊಂದು ನೆಪ ಇಟ್ಟುಕೊಂಡು ಭೇಟಿ ಮಾಡುತ್ತಿದ್ದಾರೆ. ಕೇಳಿದರೆ ರಾಜಕೀಯ ಮಾತನಾಡಲೇ ಇಲ್ಲ ಎನ್ನುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
Tulunadu News July 16, 2025
ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
Tulunadu News July 15, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
  • Popular Posts

    • 1
      ಗಂಡ ತಲೆಹಿಡುಕ ಎಂದ ಸಂತ್ರಸ್ತೆಗೆ ಪೊಲೀಸ್ ಪೇದೆಯೇ ಮುಕ್ಕಿದ ಮಂಗಳೂರಿನ ನೋವಿನ ಕಥೆ!
    • 2
      ನಿಟ್ಟೆ ಕಾಲೇಜು ಹಾಸ್ಟೆಲ್ ಶೌಚಾಲಯದಲ್ಲಿ ಹಿಂದೂ-ಮುಸ್ಲಿಂ ದ್ವೇಷ ಬರಹ! ವಿದ್ಯಾರ್ಥಿನಿ ಬಂಧನ
    • 3
      ಕಾರ್ಕಳ ಪರಶುರಾಮನ ವಿಗ್ರಹ ಕಂಚಿನದ್ದು ಅಲ್ಲ, ನಕಲಿ: ಚಾರ್ಜ್ ಶೀಟ್ ಸಲ್ಲಿಕೆ
    • 4
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 5
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!

  • Privacy Policy
  • Contact
© Tulunadu Infomedia.

Press enter/return to begin your search