• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಭೇಟಿಯಾದ ಬಿಜೆಪಿಯ ಇನ್ನೊಬ್ಬ ಶಾಸಕ!

Tulunadu News Posted On August 26, 2023
0


0
Shares
  • Share On Facebook
  • Tweet It

ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿಯ ಒಬ್ಬೊಬ್ಬರೇ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿದ್ದಾರೆ. ಮೊದಲಿಗೆ ಎಸ್ ಟಿ ಸೋಮಶೇಖರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾಧ್ಯಮಗಳು ಕೇಳಿದ್ದಕ್ಕೆ ಕ್ಷೇತ್ರದ ಪ್ರಗತಿಗಾಗಿ ಭೇಟಿಯಾಗಿದ್ದೆ ಎಂದು ಹೇಳಿದ್ದರು. ಅದಾಗಿ ಕೆಲವೇ ಗಂಟೆಗಳಲ್ಲಿ ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಕೋಟ್ಯಾಂತರ ರೂಪಾಯಿ ಅನುದಾನವನ್ನು ಸಿಎಂ ಬಿಡುಗಡೆಗೊಳಿಸಿದರು.

 

ತಾವು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಸೋಮಶೇಖರ್ ಅವರು ಹೇಳುತ್ತಲೇ ಬರುತ್ತಿದ್ದರಾದರೂ ಅವರನ್ನು ಲೋಕಸಭೆಗೆ ಮತ್ತು ಅವರ ಮಗನನ್ನು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿಸುವ ಮಾತುಕತೆ ನಡೆದಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಆ ವಿಷಯ ಚರ್ಚೆಯಲ್ಲಿ ಇರುವಂತೆ ಮಾಜಿ ಶಾಸಕ, ಬಿ.ಎಸ್ ವೈ ಆಪ್ತ ಮತ್ತು ಅವರ ರಾಜಕೀಯ ಕಾರ್ಯದರ್ಶಿಯೂ ಆಗಿದ್ದ ಎಂಪಿ ರೇಣುಕಾಚಾರ್ಯ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಕಠಿಣ ಮಾತುಗಳಿಂದ ಬಿಜೆಪಿಯನ್ನು ಅವರು ಟೀಕಿಸುತ್ತಾ ಬರುತ್ತಿದ್ದರು. ಹಾಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಹೇಳಿದರೂ ಅವರು ಸೊಪ್ಪು ಹಾಕಿರಲಿಲ್ಲ. ಸಭೆಗೆ ಕರೆದಾಗಲೂ ಗೈರು ಹಾಜರಾಗಿ ತಮ್ಮ ಕೋಪವನ್ನು ಪ್ರದರ್ಶಿಸಿದ್ದರು. ಅದರ ನಂತರ ಅವರು ಬಿಜೆಪಿಯಿಂದ ಒಂದು ಕಾಲು ಹೊರಗೆ ಇಟ್ಟಿದ್ದಾರೆ ಎಂದೇ ವಿಶ್ಲೇಷಿಸಲಾಗಿತ್ತು.

 

ಈಗ ಇದೆಲ್ಲವೂ ನಡೆಯುತ್ತಿರುವಾಗಲೇ ಬಿಜೆಪಿಯ ಮತ್ತೊಬ್ಬ ಶಾಸಕ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಾವು ತಮ್ಮ ಕ್ಷೇತ್ರ ಯಲ್ಲಾಪುರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಕೋರಲು ಹೋಗಿರುವುದಾಗಿ ಮಾಧ್ಯಮಗಳಿಗೆ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಹೀಗೆ ಒಬ್ಬೊಬ್ಬರೇ ಬಿಜೆಪಿ ಶಾಸಕರು, ಮಾಜಿ ಶಾಸಕರು ಸಿದ್ಧರಾಮಯ್ಯನವರನ್ನು ಏನಾದರೊಂದು ನೆಪ ಇಟ್ಟುಕೊಂಡು ಭೇಟಿ ಮಾಡುತ್ತಿದ್ದಾರೆ. ಕೇಳಿದರೆ ರಾಜಕೀಯ ಮಾತನಾಡಲೇ ಇಲ್ಲ ಎನ್ನುತ್ತಿದ್ದಾರೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search