• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿಗರು ಹರಕೆ ಹೊತ್ತರೆ ಓಕೆ, ಬೇರೆಯವರಿಗೆ ಟೀಕೆ!

Tulunadu News Posted On August 30, 2023
0


0
Shares
  • Share On Facebook
  • Tweet It

ಯಾವುದೇ ಕಾರ್ಯ ಫಲಪದ್ರವಾಗಲಿ ಎಂದು ಬೇಡಿಕೊಂಡು ದೇವರಿಗೆ ಹರಕೆ ಹೊತ್ತಿಕೊಳ್ಳುವುದು ಅಥವಾ ಪ್ರಾರ್ಥನೆ ಸಲ್ಲಿಸುವುದು ಸನಾತನ ಸಂಸ್ಕೃತಿಯಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಆಸ್ತಿಕ ಬಾಂಧವರು ಇದನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ತಾವು ಬಯಸಿದ ಕಾರ್ಯಗಳು ಅನುಷ್ಟಾನಕ್ಕೆ ಬಂದ ನಂತರ ಅದನ್ನು ಈಡೇರಿಸಿದ್ದಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸುವ ಅಂಗವೇ ಹರಕೆ ತೀರಿಸುವುದು. ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದವರನ್ನು ಹೀಯಾಳಿಸುವವರು ಇದ್ದಾರೆ. ಕಳೆದ ಬಾರಿ ಚಂದ್ರಯಾನ -3 ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದಾಗ ಅದನ್ನು ಟೀಕಿಸಿದವರು ಇದ್ದಾರೆ. ಚಂದ್ರಯಾನಕ್ಕೆ ತಿರುಪತಿ ತಿಮ್ಮಪ್ಪನ ಪಾದವೇ ಗತಿ ಎಂದು ಮೂದಲಿಸಿದವರು ಇದ್ದಾರೆ. ವಿಜ್ಞಾನಿಗಳು ಚಂದ್ರಯಾನ ಯಶಸ್ಸು ಗಳಿಸಿದ ನಂತರ ದೇವರಿಗೆ ಕೃತಜ್ಞತೆ ಸಲ್ಲಿಸಲು ಹೋದಾಗಲು ವ್ಯಂಗ್ಯವಾಡಿದವರು ಇದ್ದಾರೆ.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಹರಕೆ ತೀರಿಸಲು ತೆರಳಿದ್ದಾರೆ. ಅಲ್ಲಿಯೇ ಗೃಹಲಕ್ಷ್ಮಿ ಯೋಜನೆ ಸುಸೂತ್ರವಾಗಿ ನಡೆಯಲು ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಸಿಎಂ, ಡಿಸಿಎಂ ಚುನಾವಣೆಯ ಮೊದಲು ಅಧಿಕಾರಕ್ಕೆ ಬರಲು ಹರಕೆ ಹೊತ್ತಿರುವುದು ಮಾಧ್ಯಮಗಳ ಮೂಲಕ ಎಲ್ಲರಿಗೂ ಗೊತ್ತಾಗಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಚಂದ್ರಯಾನ ಯಶಸ್ವಿಯಾಗಲು ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದಾಗ ವ್ಯಂಗ್ಯ ಮಾಡಿದವರು ಈಗ ಯಾಕೆ ಮೌನವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಮಾತಿನ ಬಾಣವನ್ನು ಎಸೆದಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿಗರು ಹರಕೆ ಹೊತ್ತರೆ, ಪ್ರಾರ್ಥನೆ ಸಲ್ಲಿಸಿದರೆ ಅದು ಓಕೆ. ಅದೇ ಬೇರೆಯವರು ಹರಕೆ ಅಥವಾ ಪ್ರಾರ್ಥನೆ ಸಲ್ಲಿಸಿದರೆ ಅದು ಹೇಗೆ ವ್ಯಂಗ್ಯ, ಟೀಕೆಗೆ ಕಾರಣವಾಗುತ್ತದೆ. ಈಗ ಯಾಕೆ ಬುದ್ಧಿಜೀವಿಗಳು, ಪ್ರಗತಿಪರರು ಮಾತನಾಡುವುದಿಲ್ಲ ಎಂದು ಹಲವರು ಕೇಳುತ್ತಿದ್ದಾರೆ. ಎಡಪಂಥಿಯರ ಈ ಮೌನ ಕೂಡ ಟೀಕೆಗೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search