• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿಗರು ಹರಕೆ ಹೊತ್ತರೆ ಓಕೆ, ಬೇರೆಯವರಿಗೆ ಟೀಕೆ!

Tulunadu News Posted On August 30, 2023
0


0
Shares
  • Share On Facebook
  • Tweet It

ಯಾವುದೇ ಕಾರ್ಯ ಫಲಪದ್ರವಾಗಲಿ ಎಂದು ಬೇಡಿಕೊಂಡು ದೇವರಿಗೆ ಹರಕೆ ಹೊತ್ತಿಕೊಳ್ಳುವುದು ಅಥವಾ ಪ್ರಾರ್ಥನೆ ಸಲ್ಲಿಸುವುದು ಸನಾತನ ಸಂಸ್ಕೃತಿಯಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಆಸ್ತಿಕ ಬಾಂಧವರು ಇದನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ತಾವು ಬಯಸಿದ ಕಾರ್ಯಗಳು ಅನುಷ್ಟಾನಕ್ಕೆ ಬಂದ ನಂತರ ಅದನ್ನು ಈಡೇರಿಸಿದ್ದಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸುವ ಅಂಗವೇ ಹರಕೆ ತೀರಿಸುವುದು. ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದವರನ್ನು ಹೀಯಾಳಿಸುವವರು ಇದ್ದಾರೆ. ಕಳೆದ ಬಾರಿ ಚಂದ್ರಯಾನ -3 ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದಾಗ ಅದನ್ನು ಟೀಕಿಸಿದವರು ಇದ್ದಾರೆ. ಚಂದ್ರಯಾನಕ್ಕೆ ತಿರುಪತಿ ತಿಮ್ಮಪ್ಪನ ಪಾದವೇ ಗತಿ ಎಂದು ಮೂದಲಿಸಿದವರು ಇದ್ದಾರೆ. ವಿಜ್ಞಾನಿಗಳು ಚಂದ್ರಯಾನ ಯಶಸ್ಸು ಗಳಿಸಿದ ನಂತರ ದೇವರಿಗೆ ಕೃತಜ್ಞತೆ ಸಲ್ಲಿಸಲು ಹೋದಾಗಲು ವ್ಯಂಗ್ಯವಾಡಿದವರು ಇದ್ದಾರೆ.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಹರಕೆ ತೀರಿಸಲು ತೆರಳಿದ್ದಾರೆ. ಅಲ್ಲಿಯೇ ಗೃಹಲಕ್ಷ್ಮಿ ಯೋಜನೆ ಸುಸೂತ್ರವಾಗಿ ನಡೆಯಲು ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಸಿಎಂ, ಡಿಸಿಎಂ ಚುನಾವಣೆಯ ಮೊದಲು ಅಧಿಕಾರಕ್ಕೆ ಬರಲು ಹರಕೆ ಹೊತ್ತಿರುವುದು ಮಾಧ್ಯಮಗಳ ಮೂಲಕ ಎಲ್ಲರಿಗೂ ಗೊತ್ತಾಗಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಚಂದ್ರಯಾನ ಯಶಸ್ವಿಯಾಗಲು ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದಾಗ ವ್ಯಂಗ್ಯ ಮಾಡಿದವರು ಈಗ ಯಾಕೆ ಮೌನವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಮಾತಿನ ಬಾಣವನ್ನು ಎಸೆದಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿಗರು ಹರಕೆ ಹೊತ್ತರೆ, ಪ್ರಾರ್ಥನೆ ಸಲ್ಲಿಸಿದರೆ ಅದು ಓಕೆ. ಅದೇ ಬೇರೆಯವರು ಹರಕೆ ಅಥವಾ ಪ್ರಾರ್ಥನೆ ಸಲ್ಲಿಸಿದರೆ ಅದು ಹೇಗೆ ವ್ಯಂಗ್ಯ, ಟೀಕೆಗೆ ಕಾರಣವಾಗುತ್ತದೆ. ಈಗ ಯಾಕೆ ಬುದ್ಧಿಜೀವಿಗಳು, ಪ್ರಗತಿಪರರು ಮಾತನಾಡುವುದಿಲ್ಲ ಎಂದು ಹಲವರು ಕೇಳುತ್ತಿದ್ದಾರೆ. ಎಡಪಂಥಿಯರ ಈ ಮೌನ ಕೂಡ ಟೀಕೆಗೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
Tulunadu News October 21, 2025
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
  • Popular Posts

    • 1
      ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search