• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ಸಿಗರು ಹರಕೆ ಹೊತ್ತರೆ ಓಕೆ, ಬೇರೆಯವರಿಗೆ ಟೀಕೆ!

Tulunadu News Posted On August 30, 2023
0


0
Shares
  • Share On Facebook
  • Tweet It

ಯಾವುದೇ ಕಾರ್ಯ ಫಲಪದ್ರವಾಗಲಿ ಎಂದು ಬೇಡಿಕೊಂಡು ದೇವರಿಗೆ ಹರಕೆ ಹೊತ್ತಿಕೊಳ್ಳುವುದು ಅಥವಾ ಪ್ರಾರ್ಥನೆ ಸಲ್ಲಿಸುವುದು ಸನಾತನ ಸಂಸ್ಕೃತಿಯಲ್ಲಿ ನಡೆದುಕೊಂಡು ಬಂದಿರುವ ಸಂಪ್ರದಾಯ. ಆಸ್ತಿಕ ಬಾಂಧವರು ಇದನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬಂದಿದ್ದಾರೆ. ತಾವು ಬಯಸಿದ ಕಾರ್ಯಗಳು ಅನುಷ್ಟಾನಕ್ಕೆ ಬಂದ ನಂತರ ಅದನ್ನು ಈಡೇರಿಸಿದ್ದಕ್ಕಾಗಿ ದೇವರಿಗೆ ಧನ್ಯವಾದ ಅರ್ಪಿಸುವ ಅಂಗವೇ ಹರಕೆ ತೀರಿಸುವುದು. ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದವರನ್ನು ಹೀಯಾಳಿಸುವವರು ಇದ್ದಾರೆ. ಕಳೆದ ಬಾರಿ ಚಂದ್ರಯಾನ -3 ಯಶಸ್ಸಿಗಾಗಿ ಇಸ್ರೋ ವಿಜ್ಞಾನಿಗಳು ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದಾಗ ಅದನ್ನು ಟೀಕಿಸಿದವರು ಇದ್ದಾರೆ. ಚಂದ್ರಯಾನಕ್ಕೆ ತಿರುಪತಿ ತಿಮ್ಮಪ್ಪನ ಪಾದವೇ ಗತಿ ಎಂದು ಮೂದಲಿಸಿದವರು ಇದ್ದಾರೆ. ವಿಜ್ಞಾನಿಗಳು ಚಂದ್ರಯಾನ ಯಶಸ್ಸು ಗಳಿಸಿದ ನಂತರ ದೇವರಿಗೆ ಕೃತಜ್ಞತೆ ಸಲ್ಲಿಸಲು ಹೋದಾಗಲು ವ್ಯಂಗ್ಯವಾಡಿದವರು ಇದ್ದಾರೆ.
ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಿಗೆ ಹರಕೆ ತೀರಿಸಲು ತೆರಳಿದ್ದಾರೆ. ಅಲ್ಲಿಯೇ ಗೃಹಲಕ್ಷ್ಮಿ ಯೋಜನೆ ಸುಸೂತ್ರವಾಗಿ ನಡೆಯಲು ಪ್ರಾರ್ಥನೆ ಸಲ್ಲಿಸಿ ಚಾಲನೆ ನೀಡಿದ್ದಾರೆ. ಸಿಎಂ, ಡಿಸಿಎಂ ಚುನಾವಣೆಯ ಮೊದಲು ಅಧಿಕಾರಕ್ಕೆ ಬರಲು ಹರಕೆ ಹೊತ್ತಿರುವುದು ಮಾಧ್ಯಮಗಳ ಮೂಲಕ ಎಲ್ಲರಿಗೂ ಗೊತ್ತಾಗಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ. ಚಂದ್ರಯಾನ ಯಶಸ್ವಿಯಾಗಲು ತಿರುಪತಿ ತಿಮ್ಮಪ್ಪನಿಗೆ ಪ್ರಾರ್ಥನೆ ಸಲ್ಲಿಸಿದಾಗ ವ್ಯಂಗ್ಯ ಮಾಡಿದವರು ಈಗ ಯಾಕೆ ಮೌನವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಲವರು ಮಾತಿನ ಬಾಣವನ್ನು ಎಸೆದಿದ್ದಾರೆ. ಹಾಗಾದರೆ ಕಾಂಗ್ರೆಸ್ಸಿಗರು ಹರಕೆ ಹೊತ್ತರೆ, ಪ್ರಾರ್ಥನೆ ಸಲ್ಲಿಸಿದರೆ ಅದು ಓಕೆ. ಅದೇ ಬೇರೆಯವರು ಹರಕೆ ಅಥವಾ ಪ್ರಾರ್ಥನೆ ಸಲ್ಲಿಸಿದರೆ ಅದು ಹೇಗೆ ವ್ಯಂಗ್ಯ, ಟೀಕೆಗೆ ಕಾರಣವಾಗುತ್ತದೆ. ಈಗ ಯಾಕೆ ಬುದ್ಧಿಜೀವಿಗಳು, ಪ್ರಗತಿಪರರು ಮಾತನಾಡುವುದಿಲ್ಲ ಎಂದು ಹಲವರು ಕೇಳುತ್ತಿದ್ದಾರೆ. ಎಡಪಂಥಿಯರ ಈ ಮೌನ ಕೂಡ ಟೀಕೆಗೆ ಕಾರಣವಾಗಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search