• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೈತ್ರಾ ಕುಂದಾಪುರ ಬಂಧನದ ಹಿಂದಿನ ಕಥೆ ಏನು?

Tulunadu News Posted On September 13, 2023
0


0
Shares
  • Share On Facebook
  • Tweet It

ಹಿಂದೂತ್ವದ ಪ್ರಖರ ಭಾಷಣಗಳಿಂದ ಕಟ್ಟರ್ ಹಿಂದೂತ್ವವಾದಿ ಯುವ ಸಮುದಾಯದ ಅಭಿಮಾನವನ್ನು ಗಳಿಸಿಕೊಂಡಿದ್ದ ಯುವತಿಯೊಬ್ಬಳು ವಂಚನೆಯ ಕೇಸಿನಲ್ಲಿ ಪೊಲೀಸರ ಅತಿಥಿಯಾಗಿದ್ದಾಳೆ. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಸ್ಪರ್ಧಿಸಲು ಉದ್ಯಮಿ, ದಾನಿ ಗೋವಿಂದ ಬಾಬು ಪೂಜಾರಿ ಪ್ರಬಲ ಆಕಾಂಕ್ಷಿಯಾಗಿದ್ದರು. ಅದಕ್ಕಾಗಿ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದರು. ಇತ್ತ ಚೈತ್ರ ಕುಂದಾಪುರ ಅವರು ಹಿಂದೂ ಸಮಾವೇಶಗಳಲ್ಲಿ, ಬಿಜೆಪಿ ಪಕ್ಷದ ಕಾರ್ಯಕ್ರಮದಲ್ಲಿ ತನ್ನ ಖಡಕ್ ಭಾಷಣಗಳಿಂದ ಮಿಂಚುತ್ತಿದ್ದರು. ಹೀಗಿರುವಾಗಲೇ ಒಬ್ಬರಿಗೊಬ್ಬರು ಪರಿಚಯವಾಗಿದ್ದಾರೆ. ಗೋವಿಂದ ಬಾಬು ಪೂಜಾರಿಯವರ ಬಳಿ ಸಾಕಷ್ಟು ಹಣ ಇದೆ ಮತ್ತು ಅವರು ಟಿಕೆಟ್ ಆಕಾಂಕ್ಷಿ ಎಂದು ಚೈತ್ರ ಕುಂದಾಪುರಳಿಗೆ ಗೊತ್ತಾಗಿದೆ. ಗೋವಿಂದ ಪೂಜಾರಿಯವರು ಕೂಡ ತಮಗೆ ಟಿಕೆಟ್ ಕೊಡಿಸಲು ಏನಾದರೂ ಸಹಾಯ ಮಾಡಬಹುದಾ ಎಂದು ಚೈತ್ರಳಲ್ಲಿ ಕೇಳಿದ್ದಾರೆ.

ಈ ಬಗ್ಗೆ ಪ್ರಯತ್ನಿಸುವುದಾಗಿ ಭರವಸೆ ನೀಡಿದ ಚೈತ್ರ ಚಿಕ್ಕಮಗಳೂರಿಗೆ ಕರೆಸಿದ್ದಾಳೆ. ಅಲ್ಲಿ ನಾಲ್ಕು ಜನರನ್ನು ಗೋವಿಂದ ಬಾಬು ಪೂಜಾರಿಯವರಿಗೆ ಪರಿಚಯಿಸಿ ಇವರು ಬಿಜೆಪಿ ಹೈಕಮಾಂಡ್ ಜೊತೆ ಉತ್ತಮ ಸಂಪರ್ಕ ಹೊಂದಿದ್ದಾರೆ. ನೀವು ನಾಲ್ಕು ಕೋಟಿ ರೂಪಾಯಿ ವ್ಯವಸ್ಥೆ ಮಾಡಿ ಎಂದು ತಿಳಿಸಿದ್ದಾಳೆ. ಬೆಂಗಳೂರಿನ ಕೆ.ಆರ್.ಪುರಂನಲ್ಲಿ ಕಬಾಬ್ ಮಾರುತ್ತಿದ್ದವನಿಗೆ ಬಿಜೆಪಿ ಮುಖಂಡ ಎನ್ನುವ ಪಾತ್ರ ಮಾಡಲು ಹೇಳಿದ್ದು, ಅದಕ್ಕಾಗಿ 93 ಸಾವಿರ ರೂಪಾಯಿ ಕೂಡ ಚೈತ್ರಾ ಬಳಗ ನೀಡಿದೆ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತೇನೆ ಎಂದು ಧಮ್ಕಿ ಹಾಕಿದ್ದಾರೆ ಎಂದು ಪ್ರಥಮ ಮಾಹಿತಿ ವರದಿಯಲ್ಲಿ ದಾಖಲಾಗಿದೆ. ಇನ್ನು ಧನರಾಜ್ ಹಾಗೂ ರಮೇಶ್ ಎಂಬುವವರನ್ನು ಆರ್ ಎಸ್ ಎಸ್ ಮುಖಂಡರ ಪಾತ್ರ ಮಾಡಲು ಸೆಲೂನ್ ಗೆ ಕರೆದುಕೊಂಡು ಹೋಗಿ ಮೇಕಪ್ ಕೂಡ ಮಾಡಿಸಿದ್ದಾರೆ ಎಂದು ಕೂಡ ಎಫ್ ಐ ಆರ್ ನಲ್ಲಿ ದಾಖಲಾಗಿದೆ. ಚೈತ್ರಳನ್ನು ನಂಬಿದ ಪೂಜಾರಿಯವರು ಹಣದ ವ್ಯವಸ್ಥೆ ಮಾಡಿದ್ದಾರೆ.

ನಂತರ ಟಿಕೆಟ್ ಘೋಷಣೆಯಾದಾಗ ತಾವು ಮೋಸ ಹೋಗಿರುವುದು ಗೋವಿಂದ ಪೂಜಾರಿಯವರಿಗೆ ಗೊತ್ತಾಗಿದೆ. ಅವರು ಹಣ ಹಿಂದಿರುಗಿಸಲು ಚೈತ್ರಾಳಿಗೆ ಒತ್ತಾಯಿಸಿದ್ದಾರೆ. ತುಂಬಾ ಒತ್ತಾಯ ಮಾಡಿದರೆ ಆತ್ಮಹತ್ಯೆ ಮಾಡುವುದಾಗಿ ಚೈತ್ರಾ ಹೆದರಿಸಿದ್ದಾಳೆ. ಅಲ್ಲಿಂದ ಚೈತ್ರಾ ತಲೆಮರೆಸಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪೂಜಾರಿಯವರು ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದು, ಪೊಲೀಸರು ಚೈತ್ರಾಳನ್ನು ಹುಡುಕುತ್ತಿದ್ದರು. ಕೊನೆಗೂ ಉಡುಪಿ ಕೃಷ್ಣಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿದ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಹಣ ನೀಡಿದರೆ ಬಿಜೆಪಿಯಲ್ಲಿ ಟಿಕೆಟ್ ಸಿಗುತ್ತೆ ಎಂದು ನಂಬಿದ ಗೋಪಾಲ ಬಾಬು ಪೂಜಾರಿಯಂತವರು ಇರುವ ತನಕ ಚೈತ್ರಾ ಕುಂದಾಪುರ ತರದವರು ಕೂಡ ಇದ್ದೇ ಇರುತ್ತಾರೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?

  • Privacy Policy
  • Contact
© Tulunadu Infomedia.

Press enter/return to begin your search