• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!

Tulunadu News Posted On September 13, 2023
0


0
Shares
  • Share On Facebook
  • Tweet It

ಇಂತಹ ದಿನ ಯಾವತ್ತಾದರೂ ಬರಬಹುದು ಎಂದು ನೀವು ಊಹಿಸಿದ್ದಿರಾ? ಬಹುತೇಕ ಜನ ಇಲ್ಲ ಎಂದೇ ಹೇಳಬಹುದು. ಸೌದಿ ಅರೇಬಿಯಾದಿಂದ ನಾವು ತೈಲವನ್ನು ಎಷ್ಟೋ ವರ್ಷಗಳಿಂದ ಆಮದು ಮಾಡಿಕೊಳ್ಳುತ್ತಾ ಇದ್ದೇವೆ. ಒಂದು ದೇಶ ಯಾವತ್ತೂ ಬೇರೆ ದೇಶದಿಂದ ಏನಾದರೂ ಆಮದು ಮಾಡಿಕೊಳ್ಳುತ್ತಾ ಇದ್ದರೆ ಎಷ್ಟೆಂದರೂ ಆ ದೇಶದ ಎದುರು ಕುಬ್ಜವಾಗಿಯೇ ಇರಬೇಕಾಗುತ್ತದೆ. ಇಲ್ಲಿಯ ತನಕ ಸೌದಿ ಅರೇಬಿಯಾ ಭಾರತದ ಎದುರು ಒಂದು ಮುಷ್ಠಿ ಹೆಚ್ಚಿನ ಪ್ರಾಬಲ್ಯವನ್ನು ತೈಲ ರಫ್ತಿನ ವಿಷಯದಲ್ಲಿ ಹೊಂದಿತ್ತು. ಆದರೆ ಇನ್ನು ಮುಂದೆ ಭಾರತ ಸೌದಿ ಅರೇಬಿಯಾದ ಸಂಬಂಧ ಬೇರೆಯದ್ದೇ ಆಯಾಮವನ್ನು ಪಡೆದುಕೊಳ್ಳಲಿದೆ. ಎರಡೂ ದೇಶಗಳ ನಡುವೆ ಕೊಡು ಕೊಳ್ಳುವಿಕೆ ವ್ಯವಹಾರ ನಡೆಯಲಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ದ್ವಿಪಕ್ಷೀಯ ವಾಣಿಜ್ಯ ವ್ಯವಹಾರದ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಾರತ – ಮಧ್ಯಪ್ರಾಚ್ಯ ರಾಷ್ಟ್ರಗಳು – ಈರೋಪ್ ನಡುವೆ ಆರ್ಥಿಕ ಕಾರಿಡಾರ್ ರಚನೆಯಾಗಲಿದೆ. ಈ ಒಡಂಬಡಿಕೆಯಲ್ಲಿ ಜಾಗತಿಕ ಇಂಧನ ಪೂರೈಕೆಯನ್ನು ಸೌದಿ ಅರೇಬಿಯಾಕ್ಕೆ ಭಾರತ ಮಾಡಲಿದೆ. ನವೀಕರಿಸಬಹುದಾದ ಇಂಧನವನ್ನು ಪೂರೈಸಲಿರುವ ಭಾರತ ಹಸಿರು ಜಲಜನಕವನ್ನು ಪ್ರತಿ ವರ್ಷ 5 ಮಿಲಿಯನ್ ಟನ್ ನಷ್ಟು ಪೂರೈಕೆ ಮಾಡುವ ಗುರಿ ಇಟ್ಟುಕೊಂಡಿದೆ. ಸೌದಿಗೆ ಮಾತ್ರವಲ್ಲ, ಸಿಂಗಾಪುರ ಕೂಡ ಇಂಧನ ಪೂರೈಕೆ ವಿಷಯದಲ್ಲಿ ಭಾರತದೊಂದಿಗೆ ಒಪ್ಪಂದ ಮಾಡುವ ಆಸಕ್ತಿಯನ್ನು ತೋರಿಸಿದ್ದು, ನವೀಕರಿಸಬಹುದಾದ ಇಂಧನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಿದೆ. ಅಂಡಮಾನ್ ಮತ್ತು ನಿಕೋಬರ್ ದ್ವೀಪದ ಅಡಿಯಲ್ಲಿ ಕೇಬಲ್ ಮೂಲಕ ಈ ಪೂರೈಕೆ ನಡೆಯಲಿದೆ.
ಇದು ಸದ್ಯಕ್ಕೆ ಆಗುವ ಪ್ರಕ್ರಿಯೆ ಅಲ್ಲ, ಇದಕ್ಕಾಗಿ ವರುಷಗಳು ತಗಲುತ್ತವೆ ಎಂದು ಮೋದಿ ವಿರೋಧಿಗಳು ಹೇಳಬಹುದು. ಆದರೆ ವಿಷಯ ಏನೆಂದರೆ ಈ ಕುರಿತು ಈಗಾಗಲೇ ಕೆಲಸ ಆರಂಭವಾಗಿದೆ. ಇದು ಬಾಹ್ಯ ಪ್ರಪಂಚಕ್ಕೆ ಈಗ ಪ್ರಚಾರವಾಗುತ್ತಿದೆಯಾದರೂ ಇದರ ಮೊದಲೇ ಕಾಮಗಾರಿಗಳು ಆರಂಭವಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search