• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!

Tulunadu News Posted On September 13, 2023


  • Share On Facebook
  • Tweet It

ಇಂತಹ ದಿನ ಯಾವತ್ತಾದರೂ ಬರಬಹುದು ಎಂದು ನೀವು ಊಹಿಸಿದ್ದಿರಾ? ಬಹುತೇಕ ಜನ ಇಲ್ಲ ಎಂದೇ ಹೇಳಬಹುದು. ಸೌದಿ ಅರೇಬಿಯಾದಿಂದ ನಾವು ತೈಲವನ್ನು ಎಷ್ಟೋ ವರ್ಷಗಳಿಂದ ಆಮದು ಮಾಡಿಕೊಳ್ಳುತ್ತಾ ಇದ್ದೇವೆ. ಒಂದು ದೇಶ ಯಾವತ್ತೂ ಬೇರೆ ದೇಶದಿಂದ ಏನಾದರೂ ಆಮದು ಮಾಡಿಕೊಳ್ಳುತ್ತಾ ಇದ್ದರೆ ಎಷ್ಟೆಂದರೂ ಆ ದೇಶದ ಎದುರು ಕುಬ್ಜವಾಗಿಯೇ ಇರಬೇಕಾಗುತ್ತದೆ. ಇಲ್ಲಿಯ ತನಕ ಸೌದಿ ಅರೇಬಿಯಾ ಭಾರತದ ಎದುರು ಒಂದು ಮುಷ್ಠಿ ಹೆಚ್ಚಿನ ಪ್ರಾಬಲ್ಯವನ್ನು ತೈಲ ರಫ್ತಿನ ವಿಷಯದಲ್ಲಿ ಹೊಂದಿತ್ತು. ಆದರೆ ಇನ್ನು ಮುಂದೆ ಭಾರತ ಸೌದಿ ಅರೇಬಿಯಾದ ಸಂಬಂಧ ಬೇರೆಯದ್ದೇ ಆಯಾಮವನ್ನು ಪಡೆದುಕೊಳ್ಳಲಿದೆ. ಎರಡೂ ದೇಶಗಳ ನಡುವೆ ಕೊಡು ಕೊಳ್ಳುವಿಕೆ ವ್ಯವಹಾರ ನಡೆಯಲಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ದ್ವಿಪಕ್ಷೀಯ ವಾಣಿಜ್ಯ ವ್ಯವಹಾರದ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಾರತ – ಮಧ್ಯಪ್ರಾಚ್ಯ ರಾಷ್ಟ್ರಗಳು – ಈರೋಪ್ ನಡುವೆ ಆರ್ಥಿಕ ಕಾರಿಡಾರ್ ರಚನೆಯಾಗಲಿದೆ. ಈ ಒಡಂಬಡಿಕೆಯಲ್ಲಿ ಜಾಗತಿಕ ಇಂಧನ ಪೂರೈಕೆಯನ್ನು ಸೌದಿ ಅರೇಬಿಯಾಕ್ಕೆ ಭಾರತ ಮಾಡಲಿದೆ. ನವೀಕರಿಸಬಹುದಾದ ಇಂಧನವನ್ನು ಪೂರೈಸಲಿರುವ ಭಾರತ ಹಸಿರು ಜಲಜನಕವನ್ನು ಪ್ರತಿ ವರ್ಷ 5 ಮಿಲಿಯನ್ ಟನ್ ನಷ್ಟು ಪೂರೈಕೆ ಮಾಡುವ ಗುರಿ ಇಟ್ಟುಕೊಂಡಿದೆ. ಸೌದಿಗೆ ಮಾತ್ರವಲ್ಲ, ಸಿಂಗಾಪುರ ಕೂಡ ಇಂಧನ ಪೂರೈಕೆ ವಿಷಯದಲ್ಲಿ ಭಾರತದೊಂದಿಗೆ ಒಪ್ಪಂದ ಮಾಡುವ ಆಸಕ್ತಿಯನ್ನು ತೋರಿಸಿದ್ದು, ನವೀಕರಿಸಬಹುದಾದ ಇಂಧನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಿದೆ. ಅಂಡಮಾನ್ ಮತ್ತು ನಿಕೋಬರ್ ದ್ವೀಪದ ಅಡಿಯಲ್ಲಿ ಕೇಬಲ್ ಮೂಲಕ ಈ ಪೂರೈಕೆ ನಡೆಯಲಿದೆ.
ಇದು ಸದ್ಯಕ್ಕೆ ಆಗುವ ಪ್ರಕ್ರಿಯೆ ಅಲ್ಲ, ಇದಕ್ಕಾಗಿ ವರುಷಗಳು ತಗಲುತ್ತವೆ ಎಂದು ಮೋದಿ ವಿರೋಧಿಗಳು ಹೇಳಬಹುದು. ಆದರೆ ವಿಷಯ ಏನೆಂದರೆ ಈ ಕುರಿತು ಈಗಾಗಲೇ ಕೆಲಸ ಆರಂಭವಾಗಿದೆ. ಇದು ಬಾಹ್ಯ ಪ್ರಪಂಚಕ್ಕೆ ಈಗ ಪ್ರಚಾರವಾಗುತ್ತಿದೆಯಾದರೂ ಇದರ ಮೊದಲೇ ಕಾಮಗಾರಿಗಳು ಆರಂಭವಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search