• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!

Tulunadu News Posted On September 13, 2023
0


0
Shares
  • Share On Facebook
  • Tweet It

ಇಂತಹ ದಿನ ಯಾವತ್ತಾದರೂ ಬರಬಹುದು ಎಂದು ನೀವು ಊಹಿಸಿದ್ದಿರಾ? ಬಹುತೇಕ ಜನ ಇಲ್ಲ ಎಂದೇ ಹೇಳಬಹುದು. ಸೌದಿ ಅರೇಬಿಯಾದಿಂದ ನಾವು ತೈಲವನ್ನು ಎಷ್ಟೋ ವರ್ಷಗಳಿಂದ ಆಮದು ಮಾಡಿಕೊಳ್ಳುತ್ತಾ ಇದ್ದೇವೆ. ಒಂದು ದೇಶ ಯಾವತ್ತೂ ಬೇರೆ ದೇಶದಿಂದ ಏನಾದರೂ ಆಮದು ಮಾಡಿಕೊಳ್ಳುತ್ತಾ ಇದ್ದರೆ ಎಷ್ಟೆಂದರೂ ಆ ದೇಶದ ಎದುರು ಕುಬ್ಜವಾಗಿಯೇ ಇರಬೇಕಾಗುತ್ತದೆ. ಇಲ್ಲಿಯ ತನಕ ಸೌದಿ ಅರೇಬಿಯಾ ಭಾರತದ ಎದುರು ಒಂದು ಮುಷ್ಠಿ ಹೆಚ್ಚಿನ ಪ್ರಾಬಲ್ಯವನ್ನು ತೈಲ ರಫ್ತಿನ ವಿಷಯದಲ್ಲಿ ಹೊಂದಿತ್ತು. ಆದರೆ ಇನ್ನು ಮುಂದೆ ಭಾರತ ಸೌದಿ ಅರೇಬಿಯಾದ ಸಂಬಂಧ ಬೇರೆಯದ್ದೇ ಆಯಾಮವನ್ನು ಪಡೆದುಕೊಳ್ಳಲಿದೆ. ಎರಡೂ ದೇಶಗಳ ನಡುವೆ ಕೊಡು ಕೊಳ್ಳುವಿಕೆ ವ್ಯವಹಾರ ನಡೆಯಲಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ದ್ವಿಪಕ್ಷೀಯ ವಾಣಿಜ್ಯ ವ್ಯವಹಾರದ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಾರತ – ಮಧ್ಯಪ್ರಾಚ್ಯ ರಾಷ್ಟ್ರಗಳು – ಈರೋಪ್ ನಡುವೆ ಆರ್ಥಿಕ ಕಾರಿಡಾರ್ ರಚನೆಯಾಗಲಿದೆ. ಈ ಒಡಂಬಡಿಕೆಯಲ್ಲಿ ಜಾಗತಿಕ ಇಂಧನ ಪೂರೈಕೆಯನ್ನು ಸೌದಿ ಅರೇಬಿಯಾಕ್ಕೆ ಭಾರತ ಮಾಡಲಿದೆ. ನವೀಕರಿಸಬಹುದಾದ ಇಂಧನವನ್ನು ಪೂರೈಸಲಿರುವ ಭಾರತ ಹಸಿರು ಜಲಜನಕವನ್ನು ಪ್ರತಿ ವರ್ಷ 5 ಮಿಲಿಯನ್ ಟನ್ ನಷ್ಟು ಪೂರೈಕೆ ಮಾಡುವ ಗುರಿ ಇಟ್ಟುಕೊಂಡಿದೆ. ಸೌದಿಗೆ ಮಾತ್ರವಲ್ಲ, ಸಿಂಗಾಪುರ ಕೂಡ ಇಂಧನ ಪೂರೈಕೆ ವಿಷಯದಲ್ಲಿ ಭಾರತದೊಂದಿಗೆ ಒಪ್ಪಂದ ಮಾಡುವ ಆಸಕ್ತಿಯನ್ನು ತೋರಿಸಿದ್ದು, ನವೀಕರಿಸಬಹುದಾದ ಇಂಧನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಿದೆ. ಅಂಡಮಾನ್ ಮತ್ತು ನಿಕೋಬರ್ ದ್ವೀಪದ ಅಡಿಯಲ್ಲಿ ಕೇಬಲ್ ಮೂಲಕ ಈ ಪೂರೈಕೆ ನಡೆಯಲಿದೆ.
ಇದು ಸದ್ಯಕ್ಕೆ ಆಗುವ ಪ್ರಕ್ರಿಯೆ ಅಲ್ಲ, ಇದಕ್ಕಾಗಿ ವರುಷಗಳು ತಗಲುತ್ತವೆ ಎಂದು ಮೋದಿ ವಿರೋಧಿಗಳು ಹೇಳಬಹುದು. ಆದರೆ ವಿಷಯ ಏನೆಂದರೆ ಈ ಕುರಿತು ಈಗಾಗಲೇ ಕೆಲಸ ಆರಂಭವಾಗಿದೆ. ಇದು ಬಾಹ್ಯ ಪ್ರಪಂಚಕ್ಕೆ ಈಗ ಪ್ರಚಾರವಾಗುತ್ತಿದೆಯಾದರೂ ಇದರ ಮೊದಲೇ ಕಾಮಗಾರಿಗಳು ಆರಂಭವಾಗಿದೆ.

0
Shares
  • Share On Facebook
  • Tweet It




Trending Now
ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
Tulunadu News August 26, 2025
ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
Tulunadu News August 26, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
    • ಬೀದಿನಾಯಿಗಳ ದಾಳಿ! ವಿದ್ಯಾರ್ಥಿನಿಯ ಮುಖಕ್ಕೆ 17 ಹೊಲಿಗೆ
    • 'ಕುಡ್ಲದ ಪಿಲಿ ಪರ್ಬ-ಸೀಸನ್ 4' ಆಮಂತ್ರಣ ಪತ್ರಿಕೆ ಬಿಡುಗಡೆ
    • ರಸ್ತೆಗೆ ಅಡ್ಡಬಂದ ನಾಯಿ- ತಪ್ಪಿಸಲು ಹೋಗಿ ಕಾರು ಪಲ್ಟಿ -ಖ್ಯಾತ ಡಿಜೆ ಮಾರ್ಮಿನ್ ಮೆಂಡೋನ್ಸಾ ನಿಧನ
    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
  • Popular Posts

    • 1
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • 2
      ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • 3
      ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • 4
      ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • 5
      ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!

  • Privacy Policy
  • Contact
© Tulunadu Infomedia.

Press enter/return to begin your search