• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!

Tulunadu News Posted On September 13, 2023
0


0
Shares
  • Share On Facebook
  • Tweet It

ಇಂತಹ ದಿನ ಯಾವತ್ತಾದರೂ ಬರಬಹುದು ಎಂದು ನೀವು ಊಹಿಸಿದ್ದಿರಾ? ಬಹುತೇಕ ಜನ ಇಲ್ಲ ಎಂದೇ ಹೇಳಬಹುದು. ಸೌದಿ ಅರೇಬಿಯಾದಿಂದ ನಾವು ತೈಲವನ್ನು ಎಷ್ಟೋ ವರ್ಷಗಳಿಂದ ಆಮದು ಮಾಡಿಕೊಳ್ಳುತ್ತಾ ಇದ್ದೇವೆ. ಒಂದು ದೇಶ ಯಾವತ್ತೂ ಬೇರೆ ದೇಶದಿಂದ ಏನಾದರೂ ಆಮದು ಮಾಡಿಕೊಳ್ಳುತ್ತಾ ಇದ್ದರೆ ಎಷ್ಟೆಂದರೂ ಆ ದೇಶದ ಎದುರು ಕುಬ್ಜವಾಗಿಯೇ ಇರಬೇಕಾಗುತ್ತದೆ. ಇಲ್ಲಿಯ ತನಕ ಸೌದಿ ಅರೇಬಿಯಾ ಭಾರತದ ಎದುರು ಒಂದು ಮುಷ್ಠಿ ಹೆಚ್ಚಿನ ಪ್ರಾಬಲ್ಯವನ್ನು ತೈಲ ರಫ್ತಿನ ವಿಷಯದಲ್ಲಿ ಹೊಂದಿತ್ತು. ಆದರೆ ಇನ್ನು ಮುಂದೆ ಭಾರತ ಸೌದಿ ಅರೇಬಿಯಾದ ಸಂಬಂಧ ಬೇರೆಯದ್ದೇ ಆಯಾಮವನ್ನು ಪಡೆದುಕೊಳ್ಳಲಿದೆ. ಎರಡೂ ದೇಶಗಳ ನಡುವೆ ಕೊಡು ಕೊಳ್ಳುವಿಕೆ ವ್ಯವಹಾರ ನಡೆಯಲಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ದ್ವಿಪಕ್ಷೀಯ ವಾಣಿಜ್ಯ ವ್ಯವಹಾರದ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಾರತ – ಮಧ್ಯಪ್ರಾಚ್ಯ ರಾಷ್ಟ್ರಗಳು – ಈರೋಪ್ ನಡುವೆ ಆರ್ಥಿಕ ಕಾರಿಡಾರ್ ರಚನೆಯಾಗಲಿದೆ. ಈ ಒಡಂಬಡಿಕೆಯಲ್ಲಿ ಜಾಗತಿಕ ಇಂಧನ ಪೂರೈಕೆಯನ್ನು ಸೌದಿ ಅರೇಬಿಯಾಕ್ಕೆ ಭಾರತ ಮಾಡಲಿದೆ. ನವೀಕರಿಸಬಹುದಾದ ಇಂಧನವನ್ನು ಪೂರೈಸಲಿರುವ ಭಾರತ ಹಸಿರು ಜಲಜನಕವನ್ನು ಪ್ರತಿ ವರ್ಷ 5 ಮಿಲಿಯನ್ ಟನ್ ನಷ್ಟು ಪೂರೈಕೆ ಮಾಡುವ ಗುರಿ ಇಟ್ಟುಕೊಂಡಿದೆ. ಸೌದಿಗೆ ಮಾತ್ರವಲ್ಲ, ಸಿಂಗಾಪುರ ಕೂಡ ಇಂಧನ ಪೂರೈಕೆ ವಿಷಯದಲ್ಲಿ ಭಾರತದೊಂದಿಗೆ ಒಪ್ಪಂದ ಮಾಡುವ ಆಸಕ್ತಿಯನ್ನು ತೋರಿಸಿದ್ದು, ನವೀಕರಿಸಬಹುದಾದ ಇಂಧನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಿದೆ. ಅಂಡಮಾನ್ ಮತ್ತು ನಿಕೋಬರ್ ದ್ವೀಪದ ಅಡಿಯಲ್ಲಿ ಕೇಬಲ್ ಮೂಲಕ ಈ ಪೂರೈಕೆ ನಡೆಯಲಿದೆ.
ಇದು ಸದ್ಯಕ್ಕೆ ಆಗುವ ಪ್ರಕ್ರಿಯೆ ಅಲ್ಲ, ಇದಕ್ಕಾಗಿ ವರುಷಗಳು ತಗಲುತ್ತವೆ ಎಂದು ಮೋದಿ ವಿರೋಧಿಗಳು ಹೇಳಬಹುದು. ಆದರೆ ವಿಷಯ ಏನೆಂದರೆ ಈ ಕುರಿತು ಈಗಾಗಲೇ ಕೆಲಸ ಆರಂಭವಾಗಿದೆ. ಇದು ಬಾಹ್ಯ ಪ್ರಪಂಚಕ್ಕೆ ಈಗ ಪ್ರಚಾರವಾಗುತ್ತಿದೆಯಾದರೂ ಇದರ ಮೊದಲೇ ಕಾಮಗಾರಿಗಳು ಆರಂಭವಾಗಿದೆ.

0
Shares
  • Share On Facebook
  • Tweet It




Trending Now
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
  • Popular Posts

    • 1
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • 2
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search