• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೌದಿಗೆ ಇಂಧನ ಶಕ್ತಿ ತುಂಬಲಿರುವ ಭಾರತ!

Tulunadu News Posted On September 13, 2023


  • Share On Facebook
  • Tweet It

ಇಂತಹ ದಿನ ಯಾವತ್ತಾದರೂ ಬರಬಹುದು ಎಂದು ನೀವು ಊಹಿಸಿದ್ದಿರಾ? ಬಹುತೇಕ ಜನ ಇಲ್ಲ ಎಂದೇ ಹೇಳಬಹುದು. ಸೌದಿ ಅರೇಬಿಯಾದಿಂದ ನಾವು ತೈಲವನ್ನು ಎಷ್ಟೋ ವರ್ಷಗಳಿಂದ ಆಮದು ಮಾಡಿಕೊಳ್ಳುತ್ತಾ ಇದ್ದೇವೆ. ಒಂದು ದೇಶ ಯಾವತ್ತೂ ಬೇರೆ ದೇಶದಿಂದ ಏನಾದರೂ ಆಮದು ಮಾಡಿಕೊಳ್ಳುತ್ತಾ ಇದ್ದರೆ ಎಷ್ಟೆಂದರೂ ಆ ದೇಶದ ಎದುರು ಕುಬ್ಜವಾಗಿಯೇ ಇರಬೇಕಾಗುತ್ತದೆ. ಇಲ್ಲಿಯ ತನಕ ಸೌದಿ ಅರೇಬಿಯಾ ಭಾರತದ ಎದುರು ಒಂದು ಮುಷ್ಠಿ ಹೆಚ್ಚಿನ ಪ್ರಾಬಲ್ಯವನ್ನು ತೈಲ ರಫ್ತಿನ ವಿಷಯದಲ್ಲಿ ಹೊಂದಿತ್ತು. ಆದರೆ ಇನ್ನು ಮುಂದೆ ಭಾರತ ಸೌದಿ ಅರೇಬಿಯಾದ ಸಂಬಂಧ ಬೇರೆಯದ್ದೇ ಆಯಾಮವನ್ನು ಪಡೆದುಕೊಳ್ಳಲಿದೆ. ಎರಡೂ ದೇಶಗಳ ನಡುವೆ ಕೊಡು ಕೊಳ್ಳುವಿಕೆ ವ್ಯವಹಾರ ನಡೆಯಲಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಸೌದಿ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ದ್ವಿಪಕ್ಷೀಯ ವಾಣಿಜ್ಯ ವ್ಯವಹಾರದ ಒಪ್ಪಂದ ಮಾಡಿಕೊಂಡಿದ್ದಾರೆ. ಈ ಮೂಲಕ ಮುಂದಿನ ದಿನಗಳಲ್ಲಿ ಭಾರತ – ಮಧ್ಯಪ್ರಾಚ್ಯ ರಾಷ್ಟ್ರಗಳು – ಈರೋಪ್ ನಡುವೆ ಆರ್ಥಿಕ ಕಾರಿಡಾರ್ ರಚನೆಯಾಗಲಿದೆ. ಈ ಒಡಂಬಡಿಕೆಯಲ್ಲಿ ಜಾಗತಿಕ ಇಂಧನ ಪೂರೈಕೆಯನ್ನು ಸೌದಿ ಅರೇಬಿಯಾಕ್ಕೆ ಭಾರತ ಮಾಡಲಿದೆ. ನವೀಕರಿಸಬಹುದಾದ ಇಂಧನವನ್ನು ಪೂರೈಸಲಿರುವ ಭಾರತ ಹಸಿರು ಜಲಜನಕವನ್ನು ಪ್ರತಿ ವರ್ಷ 5 ಮಿಲಿಯನ್ ಟನ್ ನಷ್ಟು ಪೂರೈಕೆ ಮಾಡುವ ಗುರಿ ಇಟ್ಟುಕೊಂಡಿದೆ. ಸೌದಿಗೆ ಮಾತ್ರವಲ್ಲ, ಸಿಂಗಾಪುರ ಕೂಡ ಇಂಧನ ಪೂರೈಕೆ ವಿಷಯದಲ್ಲಿ ಭಾರತದೊಂದಿಗೆ ಒಪ್ಪಂದ ಮಾಡುವ ಆಸಕ್ತಿಯನ್ನು ತೋರಿಸಿದ್ದು, ನವೀಕರಿಸಬಹುದಾದ ಇಂಧನವನ್ನು ಭಾರತದಿಂದ ಆಮದು ಮಾಡಿಕೊಳ್ಳಲಿದೆ. ಅಂಡಮಾನ್ ಮತ್ತು ನಿಕೋಬರ್ ದ್ವೀಪದ ಅಡಿಯಲ್ಲಿ ಕೇಬಲ್ ಮೂಲಕ ಈ ಪೂರೈಕೆ ನಡೆಯಲಿದೆ.
ಇದು ಸದ್ಯಕ್ಕೆ ಆಗುವ ಪ್ರಕ್ರಿಯೆ ಅಲ್ಲ, ಇದಕ್ಕಾಗಿ ವರುಷಗಳು ತಗಲುತ್ತವೆ ಎಂದು ಮೋದಿ ವಿರೋಧಿಗಳು ಹೇಳಬಹುದು. ಆದರೆ ವಿಷಯ ಏನೆಂದರೆ ಈ ಕುರಿತು ಈಗಾಗಲೇ ಕೆಲಸ ಆರಂಭವಾಗಿದೆ. ಇದು ಬಾಹ್ಯ ಪ್ರಪಂಚಕ್ಕೆ ಈಗ ಪ್ರಚಾರವಾಗುತ್ತಿದೆಯಾದರೂ ಇದರ ಮೊದಲೇ ಕಾಮಗಾರಿಗಳು ಆರಂಭವಾಗಿದೆ.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search