• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಮಾತಾ ಕೀ ಜೈ ಎಂದು ಮೀಡಿಯಾ ಸೆಂಟರ್ ನಲ್ಲಿ ಉದ್ಘೋಷಣೆ!

Tulunadu News Posted On September 13, 2023
0


0
Shares
  • Share On Facebook
  • Tweet It

ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ದೇಶ, ವಿದೇಶಗಳಿಂದ ವಿವಿಧ ದೇಶಗಳ ಪ್ರಧಾನಿಗಳು, ರಾಷ್ಟ್ರಪತಿಗಳು ಭಾರತಕ್ಕೆ ಬಂದಿದ್ದರು. ಅಮೇರಿಕಾದಿಂದ ಹಿಡಿದು ಸೌದಿ ಅರೇಬಿಯಾ ತನಕ ಶೃಂಗ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ ವಿವಿಧ ರಾಷ್ಟ್ರಗಳ ಉನ್ನತ ನಾಯಕರು ಇಲ್ಲಿನ ಔತಿಥ್ಯ ನೋಡಿ ಖುಷಿಗೊಂಡಿದ್ದಾರೆ. ಮೋದಿಯವರು ಪ್ರತಿ ದೇಶದ ನಾಯಕರ ಜೊತೆ ವೈಯಕ್ತಿಕವಾಗಿ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದ್ದಾರೆ. ಇದರಲ್ಲಿ ಅನೇಕ ಒಡಬಂಡಿಕೆಗಳು, ವಾಣಿಜ್ಯ ವ್ಯವಹಾರದ ವಿಸ್ತರಣಾ ಯೋಜನೆಗಳು ಒಳಗೊಂಡಿವೆ. ಸಾಮಾನ್ಯವಾಗಿ ಆಯಾ ರಾಷ್ಟ್ರಗಳ ಮುಖ್ಯಸ್ಥರು ವಿದೇಶದಲ್ಲಿ ವಿಶೇಷ ಸಭೆಗಳಲ್ಲಿ ಭಾಗವಹಿಸುವಾಗ ತಮ್ಮ ದೇಶದ ಆಯ್ದ ಪ್ರಮುಖ ಮಾಧ್ಯಮಗಳನ್ನು ಕೂಡ ಕರೆದುಕೊಂಡು ಬರುತ್ತಾರೆ. ಮೋದಿಯವರು ಪ್ರಧಾನಿಯಾದ ನಂತರ ಈ ಸಂಪ್ರದಾಯಕ್ಕೆ ಅಂಕುಶ ಬಿದ್ದಿದೆ ಬಿಟ್ಟರೆ ಬಹುತೇಕ ರಾಷ್ಟ್ರಗಳು ಗಜಗಾತ್ರದ ಮಾಧ್ಯಮ ತಂಡದೊಂದಿಗೆ ಅಂತರಾಷ್ಟ್ರೀಯ ಸಭೆಗಳಲ್ಲಿ ಭಾಗವಹಿಸುತ್ತಾರೆ. ಅಲ್ಲಿ ನಡೆಯುವ ಬೆಳವಣಿಗೆಗಳು ತಮ್ಮ ದೇಶದ ಮಾಧ್ಯಮಗಳಲ್ಲಿ ಪ್ರಚಾರವಾಗಿ ತಮಗೆ ಮೈಲೇಜ್ ಸಿಗಲಿ ಎನ್ನುವುದು ಇದರ ಉದ್ದೇಶವಾಗಿರುತ್ತದೆ.
ಹೀಗೆ ವಿವಿಧ ರಾಷ್ಟ್ರಗಳಿಂದ ಭಾರತಕ್ಕೆ ಬಂದ ಮಾಧ್ಯಮದವರಿಗೆ ಜಿ-20 ಶೃಂಗ ಸಭೆಯಲ್ಲಿ ವಿಶೇಷ ಅನುಕೂಲಿತ ಮಾಧ್ಯಮ ಕೇಂದ್ರವನ್ನು ನಿರ್ಮಿಸಲಾಗಿತ್ತು. ಭಾರತ ಮಂಟಪಂ ಕಟ್ಟಡದಲ್ಲಿ ನಿರ್ಮಿಸಲಾಗಿರುವ ಮಾಧ್ಯಮ ಕೇಂದ್ರದಲ್ಲಿ ಸುಮಾರು 3000 ಮಾಧ್ಯಮ ಪ್ರಮುಖರು ಜಿ-20 ಇದರ ಸಂಪೂರ್ಣ ಆಗುಹೋಗುಗಳನ್ನು ವರದಿ ಮಾಡಿದ್ದಾರೆ. ಸಾಮಾನ್ಯವಾಗಿ ಇಷ್ಟು ಅದ್ಭುತ ಯಶಸ್ಸಿನ ಬಳಿಕ ಅತಿಥೇಯ ರಾಷ್ಟ್ರದ ಮುಖ್ಯಸ್ಥರು ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡುವುದು ಸಂಪ್ರದಾಯ. ಆದರೆ ಮೋದಿಯವರು ತಮ್ಮ ಕೆಲಸ ಮಾತನಾಡಬೇಕೆ ವಿನ: ನಾವಲ್ಲ ಎನ್ನುವ ಪಾಲಿಸಿಯನ್ನು ಪಾಲಿಸಿಕೊಂಡು ಬರುತ್ತಿರುವುದರಿಂದ ಅವರು ಈ ಸಂಪ್ರದಾಯವನ್ನು ಕೂಡ ಮುರಿದಿದ್ದಾರೆ. ಆದರೂ ರಾಷ್ಟ್ರೀಯ, ಅಂತರಾಷ್ಟ್ರೀಯ ಮಾಧ್ಯಮಗಳು ಈ ಶೃಂಗಸಭೆಯ ವರದಿಯನ್ನು ಮಾಡುತ್ತಿರುವುದರಿಂದ ಅವರಿಗೆಲ್ಲಾ ಧನ್ಯವಾದ ಅರ್ಪಿಸಲು ಮೋದಿಯವರು ಮಾಧ್ಯಮ ಕೇಂದ್ರಕ್ಕೆ ಆಗಮಿಸಿದ್ದರು. ಯಥಾಪ್ರಕಾರ ಮಾಧ್ಯಮ ಮಿತ್ರರಿಗೆ ಕೈ ಬೀಸಿ ನಡೆಯುತ್ತಿದ್ದ ಮೋದಿಯವರನ್ನು ನೋಡಿ ಭಾರತ್ ಮಾತಾ ಕಿ ಜೈ ಎನ್ನುವ ಉದ್ಘೋಷಣೆಗಳು ಮೊಳಗಿವೆ. ಅದರಿಂದ ಇನ್ನಷ್ಟು ಖುಷಿಗೊಂಡ ಮೋದಿಯವರು ವಿಶಾಲ ಮಾಧ್ಯಮ ಕೇಂದ್ರದ ತುಂಬೆಲ್ಲಾ ಒಂದು ಸುತ್ತು ಬಂದು ಮುಂದೆ ಸಾಗಿದರು.
ಮಾಧ್ಯಮ ಕೇಂದ್ರದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆಗಳು ಮೊಳಗಿದ್ದನ್ನು ಬಿಜೆಪಿಯ ಮಾಜಿ ಮುಖಂಡ ಯಶವಂತ್ ಸಿನ್ನಾ ಟೀಕಿಸಿದ್ದಾರೆ. ಆದರೆ ಈ ಬಗ್ಗೆ ಕೆಲವರು ಪ್ರತಿಕ್ರಿಯಿಸಿ ಭಾರತ್ ಮಾತಾ ಕೀ ಜೈ ಎಂದು ಹೇಳುವ ಅವಕಾಶ ಪತ್ರಕರ್ತಿಗೆ ಇಲ್ವಾ ಎಂದು ಮರು ಪ್ರಶ್ನೆ ಹಾಕಿದ್ದಾರೆ.

0
Shares
  • Share On Facebook
  • Tweet It




Trending Now
ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
Tulunadu News July 7, 2025
ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
Tulunadu News July 7, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
    • 20, 30 ವಯಸ್ಸಿನಲ್ಲಿ ಮಗು ಬೇಕೆನ್ನುವ ಆಸೆ ಹುಟ್ಟಿರಲಿಲ್ಲ, 40 ರಲ್ಲಿ ಬಂತು! ಖ್ಯಾತ ನಟಿಯ ಮನದಿಂಗಿತ...
    • ಸ್ಯಾನಿಟರಿ ಪ್ಯಾಡ್ ಪ್ಯಾಕೆಟ್ ಮೇಲೆ ರಾಹುಲ್ ಗಾಂಧಿ ಫೋಟೋಗೆ ಜೆಡಿಯು-ಬಿಜೆಪಿ ವ್ಯಂಗ್ಯ!
    • ಪರಸ್ಪರ ಸಮ್ಮತಿಯಿಂದ ನಡೆದ ಲೈಂಗಿಕ ಕ್ರಿಯೆ ನಂತರ ರೇಪ್ ಎನ್ನಲಾಗುವುದಿಲ್ಲ - ಕೇರಳ ಹೈಕೋರ್ಟ್ ಆದೇಶ
    • ಭಾರತದ ಇತಿಹಾಸದಲ್ಲಿ 2025ರ ಹಜ್ ಯಾತ್ರಾ ಆಯೋಜನೆ ಅತ್ಯಂತ ಯಶಸ್ವಿ - ಕೇಂದ್ರ ಸಚಿವ ಕಿರಣ್ ರಿಜ್ಜು
    • ಈ ಬಾರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮಹಿಳೆಗೆ ಪಟ್ಟ?
  • Popular Posts

    • 1
      ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • 2
      ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • 3
      ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • 4
      ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 5
      20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!

  • Privacy Policy
  • Contact
© Tulunadu Infomedia.

Press enter/return to begin your search