• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕುಕ್ಕರ್ ಬಾಂಬ್ ಸಂಚಿನ ಹಿಂದಿನ ಮಾಸ್ಟರ್ ಮೈಂಡ್ ಅರಾಫತ್ ಆಲಿ ಬಂಧನ

Tulunadu News Posted On September 15, 2023


  • Share On Facebook
  • Tweet It

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಮತ್ತು ಶಿವಮೊಗ್ಗದ ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ನಡೆಸಿದ್ದ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾಗಿದ್ದ ಶಿವಮೊಗ್ಗ ಮೂಲದ ಅರಾಫತ್‌ ಆಲಿಯನ್ನು ಎನ್‌ಐಎ ಅಧಿಕಾರಿಗಳು ದೆಹಲಿಯಲ್ಲಿ ಬಂಧಿಸಿದ್ದಾರೆ.

ಕೀನ್ಯಾ ದೇಶದ ನೈರೋಬಿಯಿಂದ ದೆಹಲಿ ವಿಮಾನ ನಿಲ್ದಾಣಕ್ಕೆ ಕಾಲಿಡುತ್ತಿದ್ದಾಗಲೇ ಎನ್‌ಐಎ ಅಧಿಕಾರಿಗಳು ಬಲೆ ಬೀಸಿದ್ದು, ಅರೆಸ್ಟ್ ಮಾಡಿದ್ದಾರೆ. 2020ರ ಆಗಸ್ಟ್ ತಿಂಗಳಲ್ಲಿ ಲಷ್ಕರ್ ಪರವಾಗಿ ಗೋಡೆ ಬರಹ ಬರೆದಿದ್ದ ಪ್ರಕರಣದಲ್ಲಿ ಮೊದಲ ಬಾರಿಗೆ ಅರಾಫತ್ ಆಲಿ ಹೆಸರು ಕೇಳಿಬಂದಿತ್ತು. ಈತನ ಅಣತಿಯಂತೆ, ಇಂಜಿನಿಯರಿಂಗ್ ವಿದ್ಯಾರ್ಥಿ ಮಾಝ್ ಮುನೀರ್ ಮತ್ತು ಮೊಹಮ್ಮದ್ ಶಾರೀಕ್ ಗೋಡೆ ಬರಹವನ್ನು ಬರೆದಿದ್ದರು. ಆನಂತರ, ಇವರಿಬ್ಬರು ಅರೆಸ್ಟ್ ಆಗಿದ್ದರೂ, ಇವರ ಜೊತೆಗೆ ಸಂಪರ್ಕದಲ್ಲಿದ್ದ ಅರಾಫತ್ ಆಲಿ ವಿದೇಶದಲ್ಲಿ ಇರುವುದು ಪತ್ತೆಯಾಗಿತ್ತು.
ಆನಂತರ, 2022ರ ಸೆಪ್ಟೆಂಬರ್ ತಿಂಗಳಲ್ಲಿ ಶಿವಮೊಗ್ಗದ ತುಂಗಾ ನದಿಯ ತೀರದಲ್ಲಿ ಮತ್ತು ಬಂಟ್ವಾಳದ ನೇತ್ರಾವತಿ ನದಿ ತೀರದಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಆನಂತರ, ನವೆಂಬರ್ ತಿಂಗಳಲ್ಲಿ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಅನ್ನು ಆಟೋ ತರುತ್ತಿದ್ದಾಗಲೇ ಬ್ಲಾಸ್ಟ್ ಆಗಿತ್ತು, ಇವೆರಡು ಪ್ರಕರಣದಲ್ಲಿಯೂ ಆರೋಪಿಗಳು ಅರಾಫತ್ ಆಲಿಯ ಸಂಪರ್ಕದಲ್ಲಿರುವುದು ತನಿಖೆ ವೇಳೆ ಕಂಡುಬಂದಿತ್ತು. ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಮೊಹಮ್ಮದ್ ಶಾರೀಕ್, ಅರಾಫತ್ ಆಲಿಯ ನೇರ ಸಂಪರ್ಕದಲ್ಲಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಹೀಗಾಗಿ ತನಿಖೆ ಕೈಗೆತ್ತಿಕೊಂಡಿದ್ದ ಎನ್‌ಐಎ ಅಧಿಕಾರಿಗಳು ಅರಾಫತ್ ಆಲಿ ಬಂಧನಕ್ಕಾಗಿ ಬಲೆ ಬೀಸಿದ್ದರು. ಇಂಟರ್ ಪೋಲ್ ನೋಟೀಸನ್ನೂ ಹೊರಡಿಸಿದ್ದರು.

ಅರಾಫತ್ ಆಲಿ ವಿದೇಶದಲ್ಲಿದ್ದುಕೊಂಡೇ ಕರ್ನಾಟಕದಲ್ಲಿ ಐಸಿಸ್ ನೆಟ್ವರ್ಕ್ ಬೆಳೆಸುವುದು, ದೇಶ ವಿರೋಧಿ ಚಟುವಟಿಕೆಗಳಿಗೆ ಪ್ರೇರಣೆ ನೀಡುವ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕರನ್ನು ಪ್ರಚೋದಿಸಿ ಐಸಿಸ್‌ ನೆಟ್ವರ್ಕ್ ಸೇರ್ಪಡೆಗೊಳಿಸುವ ಕೆಲಸದಲ್ಲಿಯೂ ತೊಡಗಿಸಿದ್ದ. ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿದ ಬಳಿಕ ನಿಗದಿತ ಸಂಚಿನಂತೆ, ಮೈಸೂರಿನಲ್ಲಿ ಐಇಡಿ ಬಾಂಬ್ ತಯಾರಿಸಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಸ್ಫೋಟಿಸಲು ರೆಡಿ ಮಾಡಿಕೊಂಡಿದ್ದರು. 2022ರ ನವೆಂಬರ್ ತಿಂಗಳಲ್ಲಿ ಮೊಹಮ್ಮದ್ ಶಾರೀಕ್ ಕುಕ್ಕರ್ ನಲ್ಲಿ ಅಡಗಿಸಿದ್ದ ಬಾಂಬನ್ನು ಆಟೋದಲ್ಲಿ ತರುತ್ತಿದ್ದಾಗಲೇ ಮಂಗಳೂರಿನ ನಾಗುರಿಯಲ್ಲಿ ಬ್ಲಾಸ್ಟ್ ಆಗಿತ್ತು.

ಮಂಗಳೂರಿನ ಲಷ್ಕರ್ ಪರ ಗೋಡೆ ಬರಹವನ್ನು ಆರೆಸ್ಸೆಸ್ ಗುರಿಯಾಗಿಸಿ ಬರೆದಿದ್ದರು. ಸಂಘಿ ಮತ್ತು ಮನುವಾದಿಗಳೇ, ತಾಲಿಬಾನ್ ಮತ್ತು ಲಷ್ಕರ್ ಇ- ತೊಯ್ದಾ ಉಗ್ರರನ್ನು ಮಂಗಳೂರಿಗೆ ಕರೆಸುವಂತೆ ಮಾಡಬೇಡಿ, ಲಷ್ಕರ್ ಝಿಂದಾಬಾದ್ ಎಂದು ಬರೆಯಲಾಗಿತ್ತು. ಬಿಜೈನ ಅಪಾರ್ಟೆಂಟ್ ಒಂದರ ಕಂಪೌಂಡ್ ಗೋಡೆಯಲ್ಲಿ ಈ ಬರಹ ಬರೆಯಲಾಗಿತ್ತು. ಎರಡು ವಾರ ಕಾಲ ಯಾರು ಈ ಬರಹ ಬರೆದಿರುವುದು ಎಂದು ತಿಳಿಯದೆ ಕುತೂಹಲಕ್ಕೆ ಕಾರಣವಾಗಿತ್ತು. ಆನಂತರ, ವಿವಿಧ ಕಡೆಯ ಸಿಸಿಟಿವಿಗಳನ್ನು ಆಧರಿಸಿ ಪೊಲೀಸರು ಮಾಝ್ ಮುನೀರ್ ಮತ್ತು ಮೊಹಮ್ಮದ್ ಶಾರೀಕ್ ಅವರನ್ನು ಬಂಧಿಸಿದ್ದರು. ಅರಾಫತ್ ಆಲಿ ಪ್ರೇರಣೆಯಂತೆ ಈ ಬರಹ ಬರೆದಿರುವುದೆಂದು ತನಿಖೆಯಲ್ಲಿ ಪತ್ತೆಯಾಗಿತ್ತು.

  • Share On Facebook
  • Tweet It


- Advertisement -


Trending Now
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
Tulunadu News May 30, 2025
Leave A Reply

  • Recent Posts

    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
  • Popular Posts

    • 1
      ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • 2
      ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • 3
      ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • 4
      ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • 5
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search