• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!

Tulunadu News Posted On September 26, 2023


  • Share On Facebook
  • Tweet It

ಮದ್ಯ ನಿಷೇಧ ಇರುವ ರಾಜ್ಯಗಳನ್ನು ಬಿಟ್ಟು ಇತರೆ ರಾಜ್ಯಗಳು ಮದ್ಯದ ಮೇಲಿನ ತೆರಿಗೆಯಿಂದಲೇ ತಮ್ಮ ಬೊಕ್ಕಸವನ್ನು ತುಂಬಿಕೊಳ್ಳುತ್ತಿರುವುದು ಸುಳ್ಳಲ್ಲ. ಒಂದು ರೀತಿಯಲ್ಲಿ ಮದ್ಯಪ್ರಿಯರು ರಾಜ್ಯದ ಬೊಕ್ಕಸ ತುಂಬುವ ಕೆಲಸವನ್ನು ಪರೋಕ್ಷವಾಗಿ ಮಾಡುತ್ತಾ ಬರುತ್ತಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ. ಆದರೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮದ್ಯಪ್ರಿಯರ ಕೊಡುಗೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಗೋವಾದಲ್ಲಿ ಮದ್ಯದ ದರಗಳು ಅತೀ ಕಡಿಮೆ ಪ್ರಮಾಣದಲ್ಲಿ ಇದ್ದರೆ, ಅದರ ಪಕ್ಕದ ಕರ್ನಾಟಕದಲ್ಲಿ ಮದ್ಯದ ದರಗಳು ರಾಷ್ಟ್ರದಲ್ಲಿಯೇ ಗರಿಷ್ಟ ಪ್ರಮಾಣದಲ್ಲಿವೆ ಎಂದು ವರದಿಯಾಗಿದೆ. ಇಂಟರ್ ನ್ಯಾಶನಲ್ ಸ್ಪಿರಿಟ್ ಮತ್ತು ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ನಡೆಸಿದ ಸರ್ವೆ ಪ್ರಕಾರ ಮದ್ಯಗಳಾದ ವಿಸ್ಕಿ, ರಮ್, ವೋಡ್ಕಾ ಮತ್ತು ಜಿನ್ ಗೋವಾದಲ್ಲಿ ಉದಾಹರಣೆಗೆ ನೂರು ರೂಪಾಯಿ ದರ ಇದ್ದರೆ ದೆಹಲಿಯಲ್ಲಿ ಅದು 134 ಮತ್ತು ಕರ್ನಾಟಕದಲ್ಲಿ 513 ಆಗಿರುತ್ತದೆ. ವಿದೇಶದಿಂದ ಆಮದು ಆಗುವ ಮದ್ಯದ ದರದ ಮೇಲಿನ ತೆರಿಗೆಗಳು ಬಹುತೇಕ ಏಕಪ್ರಕಾರವಾಗಿದ್ದರೂ, ವಿದೇಶಿ ಮಾರಾಟಗಾರರು ಆಮದು ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದಾರೆ.
ಜಿಎಸ್ ಟಿ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎನ್ನುವ ಆಗ್ರಹ ಹಲವು ಸಮಯದಿಂದ ಕೇಳಿಬರುತ್ತಿದ್ದರೂ ಮದ್ಯವನ್ನು ಕೂಡ ಇದೇ ಮಾನದಂಡದ ವ್ಯಾಪ್ತಿಯಲ್ಲಿ ತರಬೇಕು ಎನ್ನುವ ಆಗ್ರಹ ಮದ್ಯಪ್ರಿಯರ ಬಾಯಿಂದ ಬಂದಿಲ್ಲ ಎನ್ನುವುದೇ ಆಡಳಿತ ಮಾಡುವವರಿಗೆ ಸಮಾಧಾನದ ವಿಷಯ.

  • Share On Facebook
  • Tweet It


- Advertisement -


Trending Now
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
Tulunadu News May 30, 2025
Leave A Reply

  • Recent Posts

    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
  • Popular Posts

    • 1
      ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • 2
      ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • 3
      ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • 4
      ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • 5
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search