• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!

Tulunadu News Posted On September 26, 2023
0


0
Shares
  • Share On Facebook
  • Tweet It

ಮದ್ಯ ನಿಷೇಧ ಇರುವ ರಾಜ್ಯಗಳನ್ನು ಬಿಟ್ಟು ಇತರೆ ರಾಜ್ಯಗಳು ಮದ್ಯದ ಮೇಲಿನ ತೆರಿಗೆಯಿಂದಲೇ ತಮ್ಮ ಬೊಕ್ಕಸವನ್ನು ತುಂಬಿಕೊಳ್ಳುತ್ತಿರುವುದು ಸುಳ್ಳಲ್ಲ. ಒಂದು ರೀತಿಯಲ್ಲಿ ಮದ್ಯಪ್ರಿಯರು ರಾಜ್ಯದ ಬೊಕ್ಕಸ ತುಂಬುವ ಕೆಲಸವನ್ನು ಪರೋಕ್ಷವಾಗಿ ಮಾಡುತ್ತಾ ಬರುತ್ತಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ. ಆದರೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮದ್ಯಪ್ರಿಯರ ಕೊಡುಗೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಗೋವಾದಲ್ಲಿ ಮದ್ಯದ ದರಗಳು ಅತೀ ಕಡಿಮೆ ಪ್ರಮಾಣದಲ್ಲಿ ಇದ್ದರೆ, ಅದರ ಪಕ್ಕದ ಕರ್ನಾಟಕದಲ್ಲಿ ಮದ್ಯದ ದರಗಳು ರಾಷ್ಟ್ರದಲ್ಲಿಯೇ ಗರಿಷ್ಟ ಪ್ರಮಾಣದಲ್ಲಿವೆ ಎಂದು ವರದಿಯಾಗಿದೆ. ಇಂಟರ್ ನ್ಯಾಶನಲ್ ಸ್ಪಿರಿಟ್ ಮತ್ತು ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ನಡೆಸಿದ ಸರ್ವೆ ಪ್ರಕಾರ ಮದ್ಯಗಳಾದ ವಿಸ್ಕಿ, ರಮ್, ವೋಡ್ಕಾ ಮತ್ತು ಜಿನ್ ಗೋವಾದಲ್ಲಿ ಉದಾಹರಣೆಗೆ ನೂರು ರೂಪಾಯಿ ದರ ಇದ್ದರೆ ದೆಹಲಿಯಲ್ಲಿ ಅದು 134 ಮತ್ತು ಕರ್ನಾಟಕದಲ್ಲಿ 513 ಆಗಿರುತ್ತದೆ. ವಿದೇಶದಿಂದ ಆಮದು ಆಗುವ ಮದ್ಯದ ದರದ ಮೇಲಿನ ತೆರಿಗೆಗಳು ಬಹುತೇಕ ಏಕಪ್ರಕಾರವಾಗಿದ್ದರೂ, ವಿದೇಶಿ ಮಾರಾಟಗಾರರು ಆಮದು ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದಾರೆ.
ಜಿಎಸ್ ಟಿ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎನ್ನುವ ಆಗ್ರಹ ಹಲವು ಸಮಯದಿಂದ ಕೇಳಿಬರುತ್ತಿದ್ದರೂ ಮದ್ಯವನ್ನು ಕೂಡ ಇದೇ ಮಾನದಂಡದ ವ್ಯಾಪ್ತಿಯಲ್ಲಿ ತರಬೇಕು ಎನ್ನುವ ಆಗ್ರಹ ಮದ್ಯಪ್ರಿಯರ ಬಾಯಿಂದ ಬಂದಿಲ್ಲ ಎನ್ನುವುದೇ ಆಡಳಿತ ಮಾಡುವವರಿಗೆ ಸಮಾಧಾನದ ವಿಷಯ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search