• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!

Tulunadu News Posted On September 26, 2023
0


0
Shares
  • Share On Facebook
  • Tweet It

ಮದ್ಯ ನಿಷೇಧ ಇರುವ ರಾಜ್ಯಗಳನ್ನು ಬಿಟ್ಟು ಇತರೆ ರಾಜ್ಯಗಳು ಮದ್ಯದ ಮೇಲಿನ ತೆರಿಗೆಯಿಂದಲೇ ತಮ್ಮ ಬೊಕ್ಕಸವನ್ನು ತುಂಬಿಕೊಳ್ಳುತ್ತಿರುವುದು ಸುಳ್ಳಲ್ಲ. ಒಂದು ರೀತಿಯಲ್ಲಿ ಮದ್ಯಪ್ರಿಯರು ರಾಜ್ಯದ ಬೊಕ್ಕಸ ತುಂಬುವ ಕೆಲಸವನ್ನು ಪರೋಕ್ಷವಾಗಿ ಮಾಡುತ್ತಾ ಬರುತ್ತಿದ್ದಾರೆ ಎಂದರೆ ಅತಿಶಯೋಕ್ತಿ ಅಲ್ಲ. ಆದರೆ ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮದ್ಯಪ್ರಿಯರ ಕೊಡುಗೆ ಒಂದೇ ಪ್ರಮಾಣದಲ್ಲಿ ಇರುವುದಿಲ್ಲ. ಗೋವಾದಲ್ಲಿ ಮದ್ಯದ ದರಗಳು ಅತೀ ಕಡಿಮೆ ಪ್ರಮಾಣದಲ್ಲಿ ಇದ್ದರೆ, ಅದರ ಪಕ್ಕದ ಕರ್ನಾಟಕದಲ್ಲಿ ಮದ್ಯದ ದರಗಳು ರಾಷ್ಟ್ರದಲ್ಲಿಯೇ ಗರಿಷ್ಟ ಪ್ರಮಾಣದಲ್ಲಿವೆ ಎಂದು ವರದಿಯಾಗಿದೆ. ಇಂಟರ್ ನ್ಯಾಶನಲ್ ಸ್ಪಿರಿಟ್ ಮತ್ತು ವೈನ್ಸ್ ಅಸೋಸಿಯೇಶನ್ ಆಫ್ ಇಂಡಿಯಾ ನಡೆಸಿದ ಸರ್ವೆ ಪ್ರಕಾರ ಮದ್ಯಗಳಾದ ವಿಸ್ಕಿ, ರಮ್, ವೋಡ್ಕಾ ಮತ್ತು ಜಿನ್ ಗೋವಾದಲ್ಲಿ ಉದಾಹರಣೆಗೆ ನೂರು ರೂಪಾಯಿ ದರ ಇದ್ದರೆ ದೆಹಲಿಯಲ್ಲಿ ಅದು 134 ಮತ್ತು ಕರ್ನಾಟಕದಲ್ಲಿ 513 ಆಗಿರುತ್ತದೆ. ವಿದೇಶದಿಂದ ಆಮದು ಆಗುವ ಮದ್ಯದ ದರದ ಮೇಲಿನ ತೆರಿಗೆಗಳು ಬಹುತೇಕ ಏಕಪ್ರಕಾರವಾಗಿದ್ದರೂ, ವಿದೇಶಿ ಮಾರಾಟಗಾರರು ಆಮದು ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದಾರೆ.
ಜಿಎಸ್ ಟಿ ಅಡಿಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳನ್ನು ತರಬೇಕು ಎನ್ನುವ ಆಗ್ರಹ ಹಲವು ಸಮಯದಿಂದ ಕೇಳಿಬರುತ್ತಿದ್ದರೂ ಮದ್ಯವನ್ನು ಕೂಡ ಇದೇ ಮಾನದಂಡದ ವ್ಯಾಪ್ತಿಯಲ್ಲಿ ತರಬೇಕು ಎನ್ನುವ ಆಗ್ರಹ ಮದ್ಯಪ್ರಿಯರ ಬಾಯಿಂದ ಬಂದಿಲ್ಲ ಎನ್ನುವುದೇ ಆಡಳಿತ ಮಾಡುವವರಿಗೆ ಸಮಾಧಾನದ ವಿಷಯ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search