• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!

Tulunadu News Posted On September 27, 2023
0


0
Shares
  • Share On Facebook
  • Tweet It

ಹೇಗೆ ಮುಸ್ಲಿಮರ ವಿಶ್ವಾಸಾರ್ಹತೆಯನ್ನು ದೃಢಪಡಿಸಲು ಹಲಾಲ್ ಪ್ರಮಾಣಪತ್ರ ನೀಡಲಾಗುತ್ತದೆಯೋ ಅದೇ ರೀತಿ ಸಸ್ಯಹಾರಿಗಳಿಗಾಗಿ ವಿಶ್ವದ ಮೊದಲ ಅಧಿಕೃತ ಧೃಡಿಕರಣಪತ್ರ ಸಾತ್ವಿಕ್ ನೀಡಲಾಗುತ್ತದೆ ಎನ್ನುವುದು ತುಂಬಾ ಜನರಿಗೆ ಗೊತ್ತಿರಲಿಕ್ಕಿಲ್ಲ. ಹೇಗೆ ಮುಸ್ಲಿಮರು ಹಲಾಲ್ ಗುರುತನ್ನು ಮತ್ತು ಜ್ಯೂಯಿಸ್ ಗಳು ಕೋಶಿಯರ್ ಮೇಲೆ ನಂಬಿಕೆ ಇಟ್ಟುಕೊಳ್ಳುವರೋ ಅದೇ ಪ್ರಕಾರ ಸಸ್ಯಹಾರಿಗಳು ಸಾತ್ವಿಕ್ ಚಿನ್ನೆಯನ್ನು ಹೊಂದಿದ ಉತ್ಪನ್ನ ಅಥವಾ ಸ್ಥಳಗಳ ಮೇಲೆ ಭವಿಷ್ಯದಲ್ಲಿ ಹೆಚ್ಚು ಅವಲಂಬಿತರಾಗಬಹುದು. ನಾಲ್ಕು ರೀತಿಯಲ್ಲಿ ಇದರಲ್ಲಿ ಪ್ರಮಾಣಪತ್ರ ಸಿಗುತ್ತದೆ. ಅದು “ಸಾತ್ವಿಕ್ ಸತ್ವಂ”, “ಸಾತ್ವಿಕ್ ವೆಜಿಟೇರಿಯನ್”, “ಸಾತ್ವಿಕ್ ವೆಗನ್” ಮತ್ತು “ಸಾತ್ವಿಕ್ ಜೈನ್”.
ಸಾತ್ವಿಕ್ ಪ್ರಮಾಣಪತ್ರವನ್ನು ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾ ನೀಡುತ್ತಿದ್ದು, ಸಸ್ಯಹಾರಿಗಳಿಗೆ ಉತ್ತಮ ಸಾತ್ವಿಕ ವಾತಾವರಣವನ್ನು ನೀಡಲು ಇದು ಕಾರ್ಯನಿರ್ವಹಿಸುತ್ತದೆ. ಈ ಬಗ್ಗೆ ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾದ ಸ್ಥಾಪಕ ಅಭಿಷೇಕ್ ಬಿಸ್ವಾಸ್ ಮಾಹಿತಿ ನೀಡಿ ಸುಮಾರು 200 ವೈವಿದ್ಯತೆಗಳಾದ ಆಹಾರ, ಆತಿಥ್ಯ, ಉಡುಗೆ, ಡೈರಿ ಉತ್ಪನ್ನಗಳಿಗೆ ಇದನ್ನು ಬಳಸಬಹುದು. ನಾವು ಈ ಮೂಲಕ ಸಸ್ಯಹಾರವನ್ನೇ ಬಳಸಬೇಕು ಎಂದು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಅದರ ಬದಲಾಗಿ ಸಸ್ಯಹಾರಿಗಳಿಗೆ ಉತ್ತಮ ಯೋಗ್ಯ ವಾತಾವರಣವನ್ನು ಕಲ್ಪಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನಾಗರಿಕರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಪ್ರಸ್ತುತ 170 ದೇಶಗಳಲ್ಲಿ ಇದು ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. 2025 ರ ಒಳಗೆ ಅಂದಾಜು ಒಂದು ಮಿಲಿಯನ್ ಘಟಕ ಮುಖ್ಯವಾಗಿ ಕಿಚನ್, ಹೋಟೇಲ್, ಆಹಾರ ಮತ್ತು ಬಟ್ಟೆಬರೆಗಳ ಮೇಲೆ ಸಾತ್ವಿಕ್ ಮಾರ್ಕ್ ಬೀಳುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕೌನ್ಸಿಲ್ ತಿಳಿಸಿದೆ. ಸಾತ್ವಿಕ್ ಮಾರ್ಕ್ ಬಳಸಬೇಕಾದವರು ಕೌನ್ಸಿಲ್ ಜೊತೆ ಒಪ್ಪಂದ ಮಾಡಿಕೊಂಡು ಮುಂದುವರೆಯಬಹುದು ಎಂದು ಹೇಳಲಾಗಿದೆ .

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search