• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!

Tulunadu News Posted On September 27, 2023
0


0
Shares
  • Share On Facebook
  • Tweet It

ಹೇಗೆ ಮುಸ್ಲಿಮರ ವಿಶ್ವಾಸಾರ್ಹತೆಯನ್ನು ದೃಢಪಡಿಸಲು ಹಲಾಲ್ ಪ್ರಮಾಣಪತ್ರ ನೀಡಲಾಗುತ್ತದೆಯೋ ಅದೇ ರೀತಿ ಸಸ್ಯಹಾರಿಗಳಿಗಾಗಿ ವಿಶ್ವದ ಮೊದಲ ಅಧಿಕೃತ ಧೃಡಿಕರಣಪತ್ರ ಸಾತ್ವಿಕ್ ನೀಡಲಾಗುತ್ತದೆ ಎನ್ನುವುದು ತುಂಬಾ ಜನರಿಗೆ ಗೊತ್ತಿರಲಿಕ್ಕಿಲ್ಲ. ಹೇಗೆ ಮುಸ್ಲಿಮರು ಹಲಾಲ್ ಗುರುತನ್ನು ಮತ್ತು ಜ್ಯೂಯಿಸ್ ಗಳು ಕೋಶಿಯರ್ ಮೇಲೆ ನಂಬಿಕೆ ಇಟ್ಟುಕೊಳ್ಳುವರೋ ಅದೇ ಪ್ರಕಾರ ಸಸ್ಯಹಾರಿಗಳು ಸಾತ್ವಿಕ್ ಚಿನ್ನೆಯನ್ನು ಹೊಂದಿದ ಉತ್ಪನ್ನ ಅಥವಾ ಸ್ಥಳಗಳ ಮೇಲೆ ಭವಿಷ್ಯದಲ್ಲಿ ಹೆಚ್ಚು ಅವಲಂಬಿತರಾಗಬಹುದು. ನಾಲ್ಕು ರೀತಿಯಲ್ಲಿ ಇದರಲ್ಲಿ ಪ್ರಮಾಣಪತ್ರ ಸಿಗುತ್ತದೆ. ಅದು “ಸಾತ್ವಿಕ್ ಸತ್ವಂ”, “ಸಾತ್ವಿಕ್ ವೆಜಿಟೇರಿಯನ್”, “ಸಾತ್ವಿಕ್ ವೆಗನ್” ಮತ್ತು “ಸಾತ್ವಿಕ್ ಜೈನ್”.
ಸಾತ್ವಿಕ್ ಪ್ರಮಾಣಪತ್ರವನ್ನು ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾ ನೀಡುತ್ತಿದ್ದು, ಸಸ್ಯಹಾರಿಗಳಿಗೆ ಉತ್ತಮ ಸಾತ್ವಿಕ ವಾತಾವರಣವನ್ನು ನೀಡಲು ಇದು ಕಾರ್ಯನಿರ್ವಹಿಸುತ್ತದೆ. ಈ ಬಗ್ಗೆ ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾದ ಸ್ಥಾಪಕ ಅಭಿಷೇಕ್ ಬಿಸ್ವಾಸ್ ಮಾಹಿತಿ ನೀಡಿ ಸುಮಾರು 200 ವೈವಿದ್ಯತೆಗಳಾದ ಆಹಾರ, ಆತಿಥ್ಯ, ಉಡುಗೆ, ಡೈರಿ ಉತ್ಪನ್ನಗಳಿಗೆ ಇದನ್ನು ಬಳಸಬಹುದು. ನಾವು ಈ ಮೂಲಕ ಸಸ್ಯಹಾರವನ್ನೇ ಬಳಸಬೇಕು ಎಂದು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಅದರ ಬದಲಾಗಿ ಸಸ್ಯಹಾರಿಗಳಿಗೆ ಉತ್ತಮ ಯೋಗ್ಯ ವಾತಾವರಣವನ್ನು ಕಲ್ಪಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನಾಗರಿಕರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಪ್ರಸ್ತುತ 170 ದೇಶಗಳಲ್ಲಿ ಇದು ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. 2025 ರ ಒಳಗೆ ಅಂದಾಜು ಒಂದು ಮಿಲಿಯನ್ ಘಟಕ ಮುಖ್ಯವಾಗಿ ಕಿಚನ್, ಹೋಟೇಲ್, ಆಹಾರ ಮತ್ತು ಬಟ್ಟೆಬರೆಗಳ ಮೇಲೆ ಸಾತ್ವಿಕ್ ಮಾರ್ಕ್ ಬೀಳುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕೌನ್ಸಿಲ್ ತಿಳಿಸಿದೆ. ಸಾತ್ವಿಕ್ ಮಾರ್ಕ್ ಬಳಸಬೇಕಾದವರು ಕೌನ್ಸಿಲ್ ಜೊತೆ ಒಪ್ಪಂದ ಮಾಡಿಕೊಂಡು ಮುಂದುವರೆಯಬಹುದು ಎಂದು ಹೇಳಲಾಗಿದೆ .

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search