• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!

Tulunadu News Posted On September 27, 2023
0


0
Shares
  • Share On Facebook
  • Tweet It

ಹೇಗೆ ಮುಸ್ಲಿಮರ ವಿಶ್ವಾಸಾರ್ಹತೆಯನ್ನು ದೃಢಪಡಿಸಲು ಹಲಾಲ್ ಪ್ರಮಾಣಪತ್ರ ನೀಡಲಾಗುತ್ತದೆಯೋ ಅದೇ ರೀತಿ ಸಸ್ಯಹಾರಿಗಳಿಗಾಗಿ ವಿಶ್ವದ ಮೊದಲ ಅಧಿಕೃತ ಧೃಡಿಕರಣಪತ್ರ ಸಾತ್ವಿಕ್ ನೀಡಲಾಗುತ್ತದೆ ಎನ್ನುವುದು ತುಂಬಾ ಜನರಿಗೆ ಗೊತ್ತಿರಲಿಕ್ಕಿಲ್ಲ. ಹೇಗೆ ಮುಸ್ಲಿಮರು ಹಲಾಲ್ ಗುರುತನ್ನು ಮತ್ತು ಜ್ಯೂಯಿಸ್ ಗಳು ಕೋಶಿಯರ್ ಮೇಲೆ ನಂಬಿಕೆ ಇಟ್ಟುಕೊಳ್ಳುವರೋ ಅದೇ ಪ್ರಕಾರ ಸಸ್ಯಹಾರಿಗಳು ಸಾತ್ವಿಕ್ ಚಿನ್ನೆಯನ್ನು ಹೊಂದಿದ ಉತ್ಪನ್ನ ಅಥವಾ ಸ್ಥಳಗಳ ಮೇಲೆ ಭವಿಷ್ಯದಲ್ಲಿ ಹೆಚ್ಚು ಅವಲಂಬಿತರಾಗಬಹುದು. ನಾಲ್ಕು ರೀತಿಯಲ್ಲಿ ಇದರಲ್ಲಿ ಪ್ರಮಾಣಪತ್ರ ಸಿಗುತ್ತದೆ. ಅದು “ಸಾತ್ವಿಕ್ ಸತ್ವಂ”, “ಸಾತ್ವಿಕ್ ವೆಜಿಟೇರಿಯನ್”, “ಸಾತ್ವಿಕ್ ವೆಗನ್” ಮತ್ತು “ಸಾತ್ವಿಕ್ ಜೈನ್”.
ಸಾತ್ವಿಕ್ ಪ್ರಮಾಣಪತ್ರವನ್ನು ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾ ನೀಡುತ್ತಿದ್ದು, ಸಸ್ಯಹಾರಿಗಳಿಗೆ ಉತ್ತಮ ಸಾತ್ವಿಕ ವಾತಾವರಣವನ್ನು ನೀಡಲು ಇದು ಕಾರ್ಯನಿರ್ವಹಿಸುತ್ತದೆ. ಈ ಬಗ್ಗೆ ಸಾತ್ವಿಕ್ ಕೌನ್ಸಿಲ್ ಆಫ್ ಇಂಡಿಯಾದ ಸ್ಥಾಪಕ ಅಭಿಷೇಕ್ ಬಿಸ್ವಾಸ್ ಮಾಹಿತಿ ನೀಡಿ ಸುಮಾರು 200 ವೈವಿದ್ಯತೆಗಳಾದ ಆಹಾರ, ಆತಿಥ್ಯ, ಉಡುಗೆ, ಡೈರಿ ಉತ್ಪನ್ನಗಳಿಗೆ ಇದನ್ನು ಬಳಸಬಹುದು. ನಾವು ಈ ಮೂಲಕ ಸಸ್ಯಹಾರವನ್ನೇ ಬಳಸಬೇಕು ಎಂದು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಅದರ ಬದಲಾಗಿ ಸಸ್ಯಹಾರಿಗಳಿಗೆ ಉತ್ತಮ ಯೋಗ್ಯ ವಾತಾವರಣವನ್ನು ಕಲ್ಪಿಸುವ ಕಾರ್ಯ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ನಾಗರಿಕರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ. ಪ್ರಸ್ತುತ 170 ದೇಶಗಳಲ್ಲಿ ಇದು ಕಾರ್ಯ ನಿರ್ವಹಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. 2025 ರ ಒಳಗೆ ಅಂದಾಜು ಒಂದು ಮಿಲಿಯನ್ ಘಟಕ ಮುಖ್ಯವಾಗಿ ಕಿಚನ್, ಹೋಟೇಲ್, ಆಹಾರ ಮತ್ತು ಬಟ್ಟೆಬರೆಗಳ ಮೇಲೆ ಸಾತ್ವಿಕ್ ಮಾರ್ಕ್ ಬೀಳುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕೌನ್ಸಿಲ್ ತಿಳಿಸಿದೆ. ಸಾತ್ವಿಕ್ ಮಾರ್ಕ್ ಬಳಸಬೇಕಾದವರು ಕೌನ್ಸಿಲ್ ಜೊತೆ ಒಪ್ಪಂದ ಮಾಡಿಕೊಂಡು ಮುಂದುವರೆಯಬಹುದು ಎಂದು ಹೇಳಲಾಗಿದೆ .

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search