• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!

Tulunadu News Posted On September 28, 2023
0


0
Shares
  • Share On Facebook
  • Tweet It

ಇಡೀ ದೇಶವೇ ಭಿಕ್ಷುಕರ ಕೇಂದ್ರದಂತೆ ಆಗಿರುವಾಗ ಆ ದೇಶದ ನಿಜವಾದ ಭಿಕ್ಷುಕರು ಏನು ಮಾಡಬೇಕು. ಎಲ್ಲರೂ ಬೇಡುವವರೇ ಆಗಿರುವಾಗ ಕೊಡುವವರು ಯಾರು? ಇಂತಹ ಒಂದು ಪರಿಸ್ಥಿತಿಯನ್ನು ಪಾಕಿಸ್ತಾನದ ಭಿಕ್ಷುಕರು ಅನುಭವಿಸುತ್ತಿದ್ದಾರೆ. ಬಹಳ ದರಿದ್ರ ಅವಸ್ಥೆಯಲ್ಲಿರುವ ಪಾಕಿಸ್ತಾನದ ಭಿಕ್ಷುಕರನ್ನು ಅಲ್ಲಿನ ಸರಕಾರ ಅರಬ್ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿದೆ.

ಅವರನ್ನು ಉಮ್ರಾ ವೀಸಾದಲ್ಲಿ ಪಾಕಿಸ್ತಾನ ಕಳುಹಿಸಿಕೊಡುತ್ತಿದೆ. ಅವರು ಅರಬ್ ರಾಷ್ಟ್ರಗಳಲ್ಲಿ ವೀಸಾ ಅವಧಿ ಮುಗಿದ ಬಳಿಕವೂ ನಿರಾಶ್ರಿತರಾಗಿ ನೆಲೆ ನಿಲ್ಲುತ್ತಿದ್ದಾರೆ. ಅವರಲ್ಲಿ ಬಹುತೇಕರು ಸಣ್ಣಪುಟ್ಟ ಕಳ್ಳತನ, ಪಿಕ್ ಪಾಕೆಟ್ ಸಹಿತ ಅಕ್ರಮ ಕೆಲಸಗಳಲ್ಲಿ ದೊರಕಿಸಿಕೊಳ್ಳುತ್ತಿದ್ದಾರೆ. ಅಂತವರು ಬಂಧಿತರಾದಾಗ ಅವರ ಮೂಲ ಹುಡುಕಿದಾಗ ಎಲ್ಲರೂ ಪಾಕಿಸ್ತಾನದಿಂದ ಅಕ್ರಮ ವೀಸಾದಲ್ಲಿ ಬಂದು ನೆಲೆ ನಿಂತವರು ಎನ್ನುವುದು ಗೊತ್ತಾಗುತ್ತಿದೆ. ಇಂತವರಿಂದಲೇ ಗಲ್ಫ್ ರಾಷ್ಟ್ರಗಳ ಜೈಲುಗಳು ತುಂಬಿವೆ.

ಇವರ ಶಿಕ್ಷೆಯ ಅವಧಿ ಮುಗಿದು ವಾಪಾಸ್ ಪಾಕಿಸ್ತಾನಕ್ಕೆ ಕಳುಹಿಸಿದ ನಂತರವವೂ ಅವರು ಮತ್ತೆ ಅರಬ್ ರಾಷ್ಟ್ರಗಳಿಗೆ ವಾಪಾಸ್ ಬರುತ್ತಿದ್ದಾರೆ. ಇದರಿಂದ ಆಕ್ರೋಶಿತಗೊಂಡಿರುವ ಅರಬ್ ರಾಷ್ಟ್ರಗಳು ಭಿಕ್ಷುಕರನ್ನು ಕಳುಹಿಸದಿರುವಂತೆ ಪಾಕಿಸ್ತಾನಕ್ಕೆ ಕಟ್ಟುನಿಟ್ಟಾಗಿ ಸೂಚಿಸಿದೆ. ಈ ವಿಷಯವನ್ನು ಪಾಕಿಸ್ತಾನದ ಟಿವಿ ಮತ್ತು ಪತ್ರಿಕಾ ಮಾಧ್ಯಮಗಳು ವರದಿ ಮಾಡಿವೆ. ಇದರಿಂದ ಪಾಕಿಸ್ತಾನದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹರಾಜಾಗಿದೆ. ಪಾಕಿಸ್ತಾನದ ನಾಗರಿಕರ ಪಾಡೇ ನರಕಸದೃಶ್ಯವಾಗಿರುವಾಗ ಅಲ್ಲಿನ ಭಿಕ್ಷುಕರ ಕಥೆಯನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search