• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!

Tulunadu News Posted On September 28, 2023


  • Share On Facebook
  • Tweet It

ಇಡೀ ದೇಶವೇ ಭಿಕ್ಷುಕರ ಕೇಂದ್ರದಂತೆ ಆಗಿರುವಾಗ ಆ ದೇಶದ ನಿಜವಾದ ಭಿಕ್ಷುಕರು ಏನು ಮಾಡಬೇಕು. ಎಲ್ಲರೂ ಬೇಡುವವರೇ ಆಗಿರುವಾಗ ಕೊಡುವವರು ಯಾರು? ಇಂತಹ ಒಂದು ಪರಿಸ್ಥಿತಿಯನ್ನು ಪಾಕಿಸ್ತಾನದ ಭಿಕ್ಷುಕರು ಅನುಭವಿಸುತ್ತಿದ್ದಾರೆ. ಬಹಳ ದರಿದ್ರ ಅವಸ್ಥೆಯಲ್ಲಿರುವ ಪಾಕಿಸ್ತಾನದ ಭಿಕ್ಷುಕರನ್ನು ಅಲ್ಲಿನ ಸರಕಾರ ಅರಬ್ ರಾಷ್ಟ್ರಗಳಿಗೆ ಕಳುಹಿಸಿಕೊಡುತ್ತಿದೆ.

ಅವರನ್ನು ಉಮ್ರಾ ವೀಸಾದಲ್ಲಿ ಪಾಕಿಸ್ತಾನ ಕಳುಹಿಸಿಕೊಡುತ್ತಿದೆ. ಅವರು ಅರಬ್ ರಾಷ್ಟ್ರಗಳಲ್ಲಿ ವೀಸಾ ಅವಧಿ ಮುಗಿದ ಬಳಿಕವೂ ನಿರಾಶ್ರಿತರಾಗಿ ನೆಲೆ ನಿಲ್ಲುತ್ತಿದ್ದಾರೆ. ಅವರಲ್ಲಿ ಬಹುತೇಕರು ಸಣ್ಣಪುಟ್ಟ ಕಳ್ಳತನ, ಪಿಕ್ ಪಾಕೆಟ್ ಸಹಿತ ಅಕ್ರಮ ಕೆಲಸಗಳಲ್ಲಿ ದೊರಕಿಸಿಕೊಳ್ಳುತ್ತಿದ್ದಾರೆ. ಅಂತವರು ಬಂಧಿತರಾದಾಗ ಅವರ ಮೂಲ ಹುಡುಕಿದಾಗ ಎಲ್ಲರೂ ಪಾಕಿಸ್ತಾನದಿಂದ ಅಕ್ರಮ ವೀಸಾದಲ್ಲಿ ಬಂದು ನೆಲೆ ನಿಂತವರು ಎನ್ನುವುದು ಗೊತ್ತಾಗುತ್ತಿದೆ. ಇಂತವರಿಂದಲೇ ಗಲ್ಫ್ ರಾಷ್ಟ್ರಗಳ ಜೈಲುಗಳು ತುಂಬಿವೆ.

ಇವರ ಶಿಕ್ಷೆಯ ಅವಧಿ ಮುಗಿದು ವಾಪಾಸ್ ಪಾಕಿಸ್ತಾನಕ್ಕೆ ಕಳುಹಿಸಿದ ನಂತರವವೂ ಅವರು ಮತ್ತೆ ಅರಬ್ ರಾಷ್ಟ್ರಗಳಿಗೆ ವಾಪಾಸ್ ಬರುತ್ತಿದ್ದಾರೆ. ಇದರಿಂದ ಆಕ್ರೋಶಿತಗೊಂಡಿರುವ ಅರಬ್ ರಾಷ್ಟ್ರಗಳು ಭಿಕ್ಷುಕರನ್ನು ಕಳುಹಿಸದಿರುವಂತೆ ಪಾಕಿಸ್ತಾನಕ್ಕೆ ಕಟ್ಟುನಿಟ್ಟಾಗಿ ಸೂಚಿಸಿದೆ. ಈ ವಿಷಯವನ್ನು ಪಾಕಿಸ್ತಾನದ ಟಿವಿ ಮತ್ತು ಪತ್ರಿಕಾ ಮಾಧ್ಯಮಗಳು ವರದಿ ಮಾಡಿವೆ. ಇದರಿಂದ ಪಾಕಿಸ್ತಾನದ ಮಾನ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹರಾಜಾಗಿದೆ. ಪಾಕಿಸ್ತಾನದ ನಾಗರಿಕರ ಪಾಡೇ ನರಕಸದೃಶ್ಯವಾಗಿರುವಾಗ ಅಲ್ಲಿನ ಭಿಕ್ಷುಕರ ಕಥೆಯನ್ನು ಕೇಳುವವರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

  • Share On Facebook
  • Tweet It


- Advertisement -


Trending Now
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
Tulunadu News May 23, 2025
Leave A Reply

  • Recent Posts

    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
  • Popular Posts

    • 1
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 2
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 3
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 4
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 5
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search