• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!

Tulunadu News Posted On September 28, 2023


  • Share On Facebook
  • Tweet It

ನಾವು ನಮ್ಮ ಜೀವನದಲ್ಲಿ ಅನೇಕ ಸಂದರ್ಭದಲ್ಲಿ ಏನಾದರೂ ಮಾಹಿತಿಗಾಗಿ ಗೂಗಲ್ ಮೊರೆ ಹೋಗುತ್ತಾ ಇರುತ್ತೇವೆ. ಗೂಗಲ್ ನಲ್ಲಿ ಏನು ಟೈಪ್ ಮಾಡಿದರೂ ಅದರಲ್ಲಿ ನಮಗೆ ಸಾಕಷ್ಟು ಮಾಹಿತಿ ಸಿಗುತ್ತದೆ. ಹಾಗಂತ ನಾವು ಇನ್ನು ಮುಂದೆ ಆತ್ಮಹತ್ಯೆ ಮಾಡ್ಕೊಳ್ಳೋದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದರೆ ನೀವು ಇರುವ ಸ್ಥಳಕ್ಕೆ ಪೊಲೀಸರು ಬರುವ ಸಾಧ್ಯತೆ ಇದೆ.
ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದ ಮುಂಬೈಯ ಅಂಧೇರಿಯ ಯುವಕನೊಬ್ಬ ಬದುಕಿನಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯೋಚಿಸಿದ್ದ. ಆದರೆ ಸಾಯುವುದಕ್ಕೆ ಯಾವ ಮಾರ್ಗ ಉತ್ತಮ ಎಂದು ತೀರ್ಮಾನಿಸಲು ಆತ ಗೂಗಲ್ ಸರ್ಚ್ ಮಾಡಿದ್ದಾನೆ. ಆದರೆ ಇಂಟರ್ ನೆಟ್ ಮೇಲೆ ನಿಗಾ ಇರಿಸಿರುವ ಇಂಟರ್ ಪೋಲ್ ತಕ್ಷಣ ಜಾಗೃತವಾಗಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಸಿಬ್ಬಂದಿ 2 ಗಂಟೆಯೊಳಗೆ ಆ ವ್ಯಕ್ತಿಯನ್ನು ಪತ್ತೆ ಮಾಡಿ ಕೌನ್ಸೆಲಿಂಗ್ ನಡೆಸಿದ್ದಾರೆ.
ಮಂಗಳೂರಿನಲ್ಲಿಯೂ ಎರಡು ವರ್ಷಗಳ ಹಿಂದೆ ದಂಪತಿಯೊಬ್ಬರು ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ತಾವು ಸಾಯುವುದಾಗಿ ತಿಳಿಸಿದ್ದರು. ಈ ಮಾಹಿತಿಯನ್ನು ಆಧರಿಸಿ ಪೊಲೀಸ್ ಕಮೀಷನರ್ ಆ ಮನೆಗೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಗಳೂರಿನ ಚಿತ್ರಾಪುರ ಸಮುದ್ರ ಕಿನಾರೆಯ ಬೃಹತ್ ಸಮುಚ್ಚಯದಲ್ಲಿ ಈ ಘಟನೆ ನಡೆದಿತ್ತು. ತಮ್ಮ ಅಂತಿಮ ಸಂಸ್ಕಾರಕ್ಕಾಗಿ ಹಣ ಇಟ್ಟು ಹಿಂದೂ ಸಂಘಟನೆಯೊಂದಕ್ಕೆ ಅದನ್ನು ನೆರವೇರಿಸಲು ಕೋರಿದ್ದರು. ಈ ಆಧುನಿಕ ಯುಗದಲ್ಲಿ ಅಂತರ್ಜಾಲ ಅನೇಕ ಸಂದರ್ಭದಲ್ಲಿ ಬಹಳ ಉಪಯುಕ್ತವಾಗಿದ್ದು, ಕೆಲವರ ಬದುಕನ್ನು ಉಳಿಸುತ್ತದೆ. ಕೆಲವು ಸಂದರ್ಭದಲ್ಲಿ ಜೀವವನ್ನು ಕಸಿಯುತ್ತದೆ.

  • Share On Facebook
  • Tweet It


- Advertisement -


Trending Now
ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
Tulunadu News May 29, 2025
ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
Tulunadu News May 29, 2025
Leave A Reply

  • Recent Posts

    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?
    • ಸೋಮಶೇಖರ್, ಹೆಬ್ಬಾರ್ ಬಿಜೆಪಿಯಿಂದ ಕೊನೆಗೂ ಗೇಟ್ ಪಾಸ್!
    • ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?
    • ಬ್ರೆಡ್ ತಿಂತಿರಾ, ಬುಲೆಟ್ ತಿಂತಿರಾ ನೀವೆ ನಿರ್ಧರಿಸಿ ಎಂದು ಎಚ್ಚರಿಕೆ ಕೊಟ್ಟ ಮೋದಿ!
    • ಫೇಕ್ ಪನ್ನೀರ್ ಮಾರಿ ತಿಂಗಳಿಗೆ 42 ಲಕ್ಷ ರೂ ಸಂಪಾದಿಸುತ್ತಿದ್ದ ವ್ಯಾಪಾರಿ ಬಂಧನ!
    • ಒಬ್ಬ ಮುಗ್ಧನನ್ನು ಕೊಲ್ಲುವುದು ಇಡೀ ಮಾನವ ಜನಾಂಗವನ್ನೇ ಕೊಂದಂತೆ ಎಂದು ಕುರಾನ್ ಹೇಳಿದೆ - ಓವೈಸಿ
  • Popular Posts

    • 1
      ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • 2
      ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • 3
      ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • 4
      ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • 5
      ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search