• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!

Tulunadu News Posted On September 28, 2023
0


0
Shares
  • Share On Facebook
  • Tweet It

ನಾವು ನಮ್ಮ ಜೀವನದಲ್ಲಿ ಅನೇಕ ಸಂದರ್ಭದಲ್ಲಿ ಏನಾದರೂ ಮಾಹಿತಿಗಾಗಿ ಗೂಗಲ್ ಮೊರೆ ಹೋಗುತ್ತಾ ಇರುತ್ತೇವೆ. ಗೂಗಲ್ ನಲ್ಲಿ ಏನು ಟೈಪ್ ಮಾಡಿದರೂ ಅದರಲ್ಲಿ ನಮಗೆ ಸಾಕಷ್ಟು ಮಾಹಿತಿ ಸಿಗುತ್ತದೆ. ಹಾಗಂತ ನಾವು ಇನ್ನು ಮುಂದೆ ಆತ್ಮಹತ್ಯೆ ಮಾಡ್ಕೊಳ್ಳೋದು ಹೇಗೆ ಎಂದು ಗೂಗಲ್ ಸರ್ಚ್ ಮಾಡಿದರೆ ನೀವು ಇರುವ ಸ್ಥಳಕ್ಕೆ ಪೊಲೀಸರು ಬರುವ ಸಾಧ್ಯತೆ ಇದೆ.
ಉದ್ಯೋಗ ಕಳೆದುಕೊಂಡು ಆರ್ಥಿಕ ಸಂಕಷ್ಟವನ್ನು ಅನುಭವಿಸುತ್ತಿದ್ದ ಮುಂಬೈಯ ಅಂಧೇರಿಯ ಯುವಕನೊಬ್ಬ ಬದುಕಿನಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಯೋಚಿಸಿದ್ದ. ಆದರೆ ಸಾಯುವುದಕ್ಕೆ ಯಾವ ಮಾರ್ಗ ಉತ್ತಮ ಎಂದು ತೀರ್ಮಾನಿಸಲು ಆತ ಗೂಗಲ್ ಸರ್ಚ್ ಮಾಡಿದ್ದಾನೆ. ಆದರೆ ಇಂಟರ್ ನೆಟ್ ಮೇಲೆ ನಿಗಾ ಇರಿಸಿರುವ ಇಂಟರ್ ಪೋಲ್ ತಕ್ಷಣ ಜಾಗೃತವಾಗಿದೆ. ಈ ಸಂಬಂಧ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. ಮುಂಬೈ ಪೊಲೀಸರ ಅಪರಾಧ ವಿಭಾಗದ ಸಿಬ್ಬಂದಿ 2 ಗಂಟೆಯೊಳಗೆ ಆ ವ್ಯಕ್ತಿಯನ್ನು ಪತ್ತೆ ಮಾಡಿ ಕೌನ್ಸೆಲಿಂಗ್ ನಡೆಸಿದ್ದಾರೆ.
ಮಂಗಳೂರಿನಲ್ಲಿಯೂ ಎರಡು ವರ್ಷಗಳ ಹಿಂದೆ ದಂಪತಿಯೊಬ್ಬರು ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ತಾವು ಸಾಯುವುದಾಗಿ ತಿಳಿಸಿದ್ದರು. ಈ ಮಾಹಿತಿಯನ್ನು ಆಧರಿಸಿ ಪೊಲೀಸ್ ಕಮೀಷನರ್ ಆ ಮನೆಗೆ ತಲುಪುವಷ್ಟರಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಂಗಳೂರಿನ ಚಿತ್ರಾಪುರ ಸಮುದ್ರ ಕಿನಾರೆಯ ಬೃಹತ್ ಸಮುಚ್ಚಯದಲ್ಲಿ ಈ ಘಟನೆ ನಡೆದಿತ್ತು. ತಮ್ಮ ಅಂತಿಮ ಸಂಸ್ಕಾರಕ್ಕಾಗಿ ಹಣ ಇಟ್ಟು ಹಿಂದೂ ಸಂಘಟನೆಯೊಂದಕ್ಕೆ ಅದನ್ನು ನೆರವೇರಿಸಲು ಕೋರಿದ್ದರು. ಈ ಆಧುನಿಕ ಯುಗದಲ್ಲಿ ಅಂತರ್ಜಾಲ ಅನೇಕ ಸಂದರ್ಭದಲ್ಲಿ ಬಹಳ ಉಪಯುಕ್ತವಾಗಿದ್ದು, ಕೆಲವರ ಬದುಕನ್ನು ಉಳಿಸುತ್ತದೆ. ಕೆಲವು ಸಂದರ್ಭದಲ್ಲಿ ಜೀವವನ್ನು ಕಸಿಯುತ್ತದೆ.

0
Shares
  • Share On Facebook
  • Tweet It




Trending Now
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
  • Popular Posts

    • 1
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search