• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ – ಮೋದಿ

Tulunadu News Posted On September 29, 2023
0


0
Shares
  • Share On Facebook
  • Tweet It

“ನನ್ನ ಹೆಸರಿನಲ್ಲಿ ಯಾವುದೇ ಮನೆಯಿಲ್ಲ. ಆದರೆ ಈ ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಸ್ವಂತ ಮನೆ ಹೊಂದುವ ಅವಕಾಶ ನಮ್ಮ ಕೇಂದ್ರ ಸರಕಾರದ ಯೋಜನೆಗಳಿಂದ ಸಿಗುತ್ತಿದೆ. ಪರಿಶಿಷ್ಟ ಜಾತಿ/ ಪಂಗಡ, ಹಿಂದುಳಿದ ಮಹಿಳೆಯರಿಗೆ ಈಗ ಸ್ವಂತ ಮನೆಗಳು ಸಿಗುತ್ತಿವೆ. ನಮ್ಮ ಯೋಜನೆಗಳಿಂದ ಅವರು ಲಕ್ಷಾಧೀಶರಾಗುವಂತಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ಗುಜರಾತಿನ ಚೋಟಾದೇಪುರ್ ಜಿಲ್ಲೆಯ ಬಡೋಳಿಯಲ್ಲಿ 5000 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಿಲಾನ್ಯಾಸ ಮತ್ತು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ತಮ್ಮ ಮನಸ್ಸಿನ ಮಾತುಗಳನ್ನು ಹಂಚಿಕೊಂಡ ಮೋದಿಯವರು “ಬಡವರು ತುಂಬಾ ಸವಾಲುಗಳನ್ನು ಬದುಕಿನಲ್ಲಿ ಅನುಭವಿಸುತ್ತಾ ಬರುತ್ತಿದ್ದಾರೆ. ಈಗ ದೇಶಾದ್ಯಂತ ನಾಲ್ಕು ಕೋಟಿ ಕುಟುಂಬಗಳಿಗೆ ನಮ್ಮ ಸರಕಾರ ಸ್ವಂತ ಮನೆಗಳನ್ನು ಕಟ್ಟಿಸಿಕೊಟ್ಟಿದೆ. ಹಿಂದಿನ ಸರಕಾರಗಳಂತೆ ಮನೆ ಕಟ್ಟಿಸಿಕೊಡುವುದು ಎಂದರೆ ಕೇವಲ ಸಂಖ್ಯೆಗಳ ಕಾರಣಗಳಿಗಾಗಿ ಅಲ್ಲ. ಬಡವರು ಉತ್ತಮ ರೀತಿಯಲ್ಲಿ ವಾಸಿಸುವ ವ್ಯವಸ್ಥೆ ಕೂಡ ಮಾಡಲಾಗಿದೆ” ಎಂದು ಹೇಳಿದರು.

“ಯಾವುದೇ ಮಧ್ಯವರ್ತಿ ಇಲ್ಲದೇ, ಆದಿವಾಸಿಗಳಿಗೆ ಅವರ ಅನುಕೂಲಕ್ಕೆ ತಕ್ಕಂತೆ ಮನೆ ನಿರ್ಮಿಸಿಕೊಟ್ಟಿದ್ದೇವೆ. ನನ್ನ ಹೆಸರಿನಲ್ಲಿ ಮನೆ ಇಲ್ಲದಿದ್ದರೂ, ದೇಶದ ಲಕ್ಷಾಂತರ ಹೆಣ್ಣುಮಕ್ಕಳು ತಮ್ಮ ಸ್ವಂತ ಮನೆಗಳಲ್ಲಿ ವಾಸಿಸುವ ಹಾಗೆ ವ್ಯವಸ್ಥೆ ಮಾಡಿರುವ ನಮ್ಮ ಸರಕಾರದ ಯೋಜನೆಗಳ ಬಗ್ಗೆ ಖುಷಿ ಇದೆ” ಎಂದು ಮೋದಿ ಹೇಳಿದರು.

0
Shares
  • Share On Facebook
  • Tweet It




Trending Now
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
Tulunadu News January 10, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
  • Popular Posts

    • 1
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 2
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search