• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಹೈದ್ರಾಬಾದ್ ಬಿರಿಯಾನಿ ಎಫೆಕ್ಟ್! ಪಾಕ್ ಕಳಪೆ ಫಿಲ್ಡಿಂಗ್!

Tulunadu News Posted On October 4, 2023
0


0
Shares
  • Share On Facebook
  • Tweet It

ಹೈದ್ರಾಬಾದಿನ ಬಿರಿಯಾನಿಯ ರುಚಿಗೆ ಮನಸೋತಿರುವ ಪಾಕಿಸ್ತಾನದ ಕ್ರಿಕೆಟಿಗರು ಅದನ್ನು ಗಡದ್ದಾಗಿ ತಿಂದು ತೇಗುತ್ತಿದ್ದಾರೆ. ಇದರಿಂದ ಹೊಟ್ಟೆಭಾರವಾಗಿ ಮೈದಾನದಲ್ಲಿ ಸರಿಯಾಗಿ ಬಗ್ಗಲು ಆಗದೇ ಒದ್ದಾಡುತ್ತಿದ್ದಾರೆ. ಇದರಿಂದ ವಿಶ್ವಕಪ್ ಪಂದ್ಯಾವಳಿಯ ಮೊದಲೆರಡು ಪ್ರಾಕ್ಟೀಸ್ ಮ್ಯಾಚ್ ಗಳನ್ನು ಸೋತಿದ್ದಾರೆ. ಪಂದ್ಯಾಟದ ನಂತರ ನಿರೂಪಕ ಹರ್ಷಾ ಬೋಗ್ಳೆ ನಿಮ್ಮ ಸೋಲಿಗೆ ಕಾರಣವೇನು? ಎಂದು ಹಂಗಾಮಿ ಕಪ್ತಾನ ಶದಾಬ್ ಖಾನ್ ಅವರನ್ನು ಕೇಳಿದಾಗ ಅವರು ಹೈದ್ರಾಬಾದ್ ಬಿರಿಯಾನಿ ಎಂದು ಹೇಳಿದ್ದಾರೆ.

ಭಾರತದಲ್ಲಿ ವಿಶ್ವಕಪ್ ಆಡಲು ಬಂದಿರುವ ಪಾಕಿಸ್ತಾನಿ ಆಟಗಾರರು ಇಲ್ಲಿನ ಹೋಟೇಲುಗಳ ವೈಭವವನ್ನು ಕಂಡು ಖುಷಿಗೊಂಡಿದ್ದಾರೆ. ಶತ್ರು ರಾಷ್ಟ್ರವೇ ಆಗಿದ್ದರೂ ಅತಿಥಿ ದೇವೋಭವ ಎಂದು ಸತ್ಕರಿಸುವ ಭಾರತೀಯ ಸಂಪ್ರದಾಯದಂತೆ ಪಾಕ್ ಕ್ರಿಕೆಟಿಗರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ. ಐಷಾರಾಮಿ ವ್ಯವಸ್ಥೆಯಲ್ಲಿ ತಿಂದುಡು ಎಂಜಾಯ್ ಮಾಡುತ್ತಿರುವ ಪಾಕ್ ಆಟಗಾರರು ಹೈದ್ರಾಬಾದಿನ ಬಿರಿಯಾನಿಯನ್ನು ಹೊಟ್ಟೆ ತುಂಬಾ ಉಂಡು ಖುಷಿಪಟ್ಟಿದ್ದಾರೆ. ಸಾಮಾನ್ಯವಾಗಿ ಕ್ರಿಕೆಟಿಗರು ಆಹಾರದ ವಿಷಯದಲ್ಲಿ ಕಟ್ಟುನಿಟ್ಟನ್ನು ಪಾಲಿಸಬೇಕಾಗುತ್ತದೆ. ಇಲ್ಲದೇ ಹೋದರೆ ಅದು ಅವರ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಪಾಕ್ ಆಟಗಾರರಿಗೆ ಆಟಕ್ಕಿಂತ ಆಹಾರವೇ ಮುಖ್ಯವಾಗಿರುವಂತೆ ವರ್ತಿಸುತ್ತಿದ್ದಾರೆ. ಇದರಿಂದ ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ವಿರುದ್ಧ ಕಳಪೆ ಫಿಲ್ಡಿಂಗ್ ನಿಂದ ಸೋಲಬೇಕಾಗಿದೆ.

ನಿತ್ಯ ಹೈದ್ರಾಬಾದ್ ಬಿರಿಯಾನಿಯೊಂದಿಗೆ ಬ್ಯಾಟಿಂಗ್ ಮಾಡುತ್ತಿರುವುದರಿಂದ ಪಾಕ್ ಆಟಗಾರರ ಫಾರ್ಮ್ ಹೀಗೆ ಮುಂದುವರೆಯುತ್ತದೆಯಾ ಅಥವಾ ಅವರು ಆದಷ್ಟು ಎಚ್ಚರಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಾಗಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search