• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೇದಿಕೆಯಲ್ಲಿ ನಿದ್ರೆಗೆ ಜಾರಿದ ದಕ್ಷಿಣ ಆಫ್ರಿಕಾ ಕಪ್ತಾನ!

Tulunadu News Posted On October 4, 2023
0


0
Shares
  • Share On Facebook
  • Tweet It

ವಿಶ್ವಕಪ್ ಪಂದ್ಯಾವಳಿಯ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಒಂದಕ್ಕಿಂತ ಒಂದು ಆಶ್ಚರ್ಯಕರ ವಿದ್ಯಮಾನಗಳು ನಡೆಯುತ್ತಿವೆ. ಒಂದು ಕಡೆ ತಮ್ಮ ಸೋಲಿಗೆ ಕಳಪೆ ಫಿಲ್ಡಿಂಗ್ ಕಾರಣ ಮತ್ತು ಕಳಪೆ ಫಿಲ್ಡಿಂಗ್ ನಡೆಸಲು ಹೈದ್ರಾಬಾದ್ ಬಿರಿಯಾನಿ ನಿತ್ಯ ಸೇವಿಸುತ್ತಿರುವುದೇ ಎಂದು ಹೇಳಿಕೆ ನೀಡಿದ್ದರೆ ಇತ್ತ ಇನ್ನೊಂದು ಆಶ್ಚರ್ಯಕರ ವಿದ್ಯಮಾನ ನಡೆದಿದೆ. ಅಕ್ಟೋಬರ್ 4 ರಂದು ಗುಜರಾತಿನ ಅಹಮದಾಬಾದಿನಲ್ಲಿ ವಿಶ್ವಕಪ್ ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ಕ್ಯಾಪ್ಟನ್ಸ್ ಮೀಟ್ ಆಯೋಜಿಸಲಾಗಿತ್ತು. ಎಲ್ಲಾ ತಂಡಗಳ ಕಪ್ತಾನರು ಸೇರಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು. ವೇದಿಕೆಯ ಮೇಲೆ ನ್ಯೂಜಿಲ್ಯಾಂಡ್, ಶ್ರೀಲಂಕಾ, ಪಾಕಿಸ್ತಾನದ ಕಪ್ತಾನರೊಂದಿಗೆ ವೇದಿಕೆ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾ ಕಪ್ತಾನ ಟೆಂಬಾ ಬಾವುಮಾ ಕಾರ್ಯಕ್ರಮ ನಡೆಯುತ್ತಿದ್ದ ಹಾಗೆ ನಿದ್ರೆಗೆ ಜಾರಿದ್ದಾರೆ.

ಅವರು ವೇದಿಕೆಯಲ್ಲಿ ಕಿರುನಿದ್ದೆ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಕೆಲವರು ಅವರ ಬದ್ಧತೆಯನ್ನು ಪ್ರಶ್ನಿಸುತ್ತಿದ್ದರೆ ಇನ್ನು ಕೆಲವರು ಅತಿಯಾದ ಪ್ರಯಾಣದಿಂದ ಸುಸ್ತಾಗಿರಬಹುದು ಎಂದು ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ಕಪ್ತಾನ ಭಾರತಕ್ಕೆ ಬಂದು ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಮತ್ತೆ ಸ್ವದೇಶಕ್ಕೆ ತೆರಳಿದ್ದರು. ನಂತರ ಮತ್ತೆ ಭಾರತಕ್ಕೆ ಹಿಂದಿರುಗಿದ್ದರು. ಇದರಿಂದ ಅವರು ತಮ್ಮ ತಂಡವನ್ನು ಸರಿಯಾಗಿ ಭೇಟಿ ಮಾಡಲು ಆಗಿರಲಿಲ್ಲ. ಅದರೊಂದಿಗೆ ಮೊದಲೆರಡು ಪ್ರಾಕ್ಟೀಸ್ ಪಂದ್ಯಾಟಕ್ಕೂ ಅವರು ಲಭ್ಯವಿರಲಿಲ್ಲ. ದಕ್ಷಿಣ ಆಫ್ರಿಕಾದ ಮೊದಲ ಪಂದ್ಯ ದೆಹಲಿಯಲ್ಲಿ ನಡೆಯಲಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

  • Privacy Policy
  • Contact
© Tulunadu Infomedia.

Press enter/return to begin your search