• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವೇದಿಕೆಯಲ್ಲಿ ನಿದ್ರೆಗೆ ಜಾರಿದ ದಕ್ಷಿಣ ಆಫ್ರಿಕಾ ಕಪ್ತಾನ!

Tulunadu News Posted On October 4, 2023
0


0
Shares
  • Share On Facebook
  • Tweet It

ವಿಶ್ವಕಪ್ ಪಂದ್ಯಾವಳಿಯ ಆರಂಭಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಒಂದಕ್ಕಿಂತ ಒಂದು ಆಶ್ಚರ್ಯಕರ ವಿದ್ಯಮಾನಗಳು ನಡೆಯುತ್ತಿವೆ. ಒಂದು ಕಡೆ ತಮ್ಮ ಸೋಲಿಗೆ ಕಳಪೆ ಫಿಲ್ಡಿಂಗ್ ಕಾರಣ ಮತ್ತು ಕಳಪೆ ಫಿಲ್ಡಿಂಗ್ ನಡೆಸಲು ಹೈದ್ರಾಬಾದ್ ಬಿರಿಯಾನಿ ನಿತ್ಯ ಸೇವಿಸುತ್ತಿರುವುದೇ ಎಂದು ಹೇಳಿಕೆ ನೀಡಿದ್ದರೆ ಇತ್ತ ಇನ್ನೊಂದು ಆಶ್ಚರ್ಯಕರ ವಿದ್ಯಮಾನ ನಡೆದಿದೆ. ಅಕ್ಟೋಬರ್ 4 ರಂದು ಗುಜರಾತಿನ ಅಹಮದಾಬಾದಿನಲ್ಲಿ ವಿಶ್ವಕಪ್ ನಲ್ಲಿ ಭಾಗವಹಿಸುವ ಎಲ್ಲಾ ತಂಡಗಳ ಕ್ಯಾಪ್ಟನ್ಸ್ ಮೀಟ್ ಆಯೋಜಿಸಲಾಗಿತ್ತು. ಎಲ್ಲಾ ತಂಡಗಳ ಕಪ್ತಾನರು ಸೇರಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು. ವೇದಿಕೆಯ ಮೇಲೆ ನ್ಯೂಜಿಲ್ಯಾಂಡ್, ಶ್ರೀಲಂಕಾ, ಪಾಕಿಸ್ತಾನದ ಕಪ್ತಾನರೊಂದಿಗೆ ವೇದಿಕೆ ಹಂಚಿಕೊಂಡಿದ್ದ ದಕ್ಷಿಣ ಆಫ್ರಿಕಾ ಕಪ್ತಾನ ಟೆಂಬಾ ಬಾವುಮಾ ಕಾರ್ಯಕ್ರಮ ನಡೆಯುತ್ತಿದ್ದ ಹಾಗೆ ನಿದ್ರೆಗೆ ಜಾರಿದ್ದಾರೆ.

ಅವರು ವೇದಿಕೆಯಲ್ಲಿ ಕಿರುನಿದ್ದೆ ಮಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಕೆಲವರು ಅವರ ಬದ್ಧತೆಯನ್ನು ಪ್ರಶ್ನಿಸುತ್ತಿದ್ದರೆ ಇನ್ನು ಕೆಲವರು ಅತಿಯಾದ ಪ್ರಯಾಣದಿಂದ ಸುಸ್ತಾಗಿರಬಹುದು ಎಂದು ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ಕಪ್ತಾನ ಭಾರತಕ್ಕೆ ಬಂದು ಕೆಲವು ವೈಯಕ್ತಿಕ ಕಾರಣಗಳಿಂದಾಗಿ ಮತ್ತೆ ಸ್ವದೇಶಕ್ಕೆ ತೆರಳಿದ್ದರು. ನಂತರ ಮತ್ತೆ ಭಾರತಕ್ಕೆ ಹಿಂದಿರುಗಿದ್ದರು. ಇದರಿಂದ ಅವರು ತಮ್ಮ ತಂಡವನ್ನು ಸರಿಯಾಗಿ ಭೇಟಿ ಮಾಡಲು ಆಗಿರಲಿಲ್ಲ. ಅದರೊಂದಿಗೆ ಮೊದಲೆರಡು ಪ್ರಾಕ್ಟೀಸ್ ಪಂದ್ಯಾಟಕ್ಕೂ ಅವರು ಲಭ್ಯವಿರಲಿಲ್ಲ. ದಕ್ಷಿಣ ಆಫ್ರಿಕಾದ ಮೊದಲ ಪಂದ್ಯ ದೆಹಲಿಯಲ್ಲಿ ನಡೆಯಲಿದೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • 2
      ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • 3
      ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • 4
      ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.

  • Privacy Policy
  • Contact
© Tulunadu Infomedia.

Press enter/return to begin your search